Get Updates
Get notified of breaking news, exclusive insights, and must-see stories!

ಉಡುಪಿ ಜಿಲ್ಲಾಡಳಿತದ ಹೊಸ ಹೆಜ್ಜೆ: ಲಿಂಗತ್ವ ಅಲ್ಪಸಂಖ್ಯಾತರಿಗೆ ಯಕ್ಷಗಾನ ತರಬೇತಿ

ಉಡುಪಿ, ಜುಲೈ 12: ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ , ಇಷ್ಟವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಹಾಗೂ ಅತ್ಯುನ್ನತ ಸಾಧನೆ ಮಾಡಬಹುದಾಗಿದೆ.

ಲಿಂಗತ್ವ ಅಲ್ಪ ಸಂಖ್ಯಾತರಿಗಾಗಿ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ ಆಯೋಜಿಸಿದೆ.

Yakshagana Play In Karkala
Photo Credit: ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉಡುಪಿ ಜಿಲ್ಲಾಡಳಿತದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ , ಜಿಲ್ಲೆಯಲ್ಲಿರುವ ಆಸಕ್ತ 19 ಮಂದಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಕಾರ್ಕಳದ ಸ್ತ್ರೀ ಶಕ್ತಿ ಭವನದಲ್ಲಿ ರೂ. 10,000 ಗಳ ಸ್ಟೈಫಂಡ್‌ನೊಂದಿಗೆ ಒಂದು ತಿಂಗಳ ಕಾಲ ಕರಾವಳಿಯ ಹೆಮ್ಮಯೆ ಕಲೆಯಾದ ಯಕ್ಷಗಾನ ಪ್ರದರ್ಶನದ ಕುರಿತು ತರಬೇತಿ ನೀಡಲಾಗಿದೆ.

ತರಬೇತಿಯಲ್ಲಿ ನೃತ್ಯ, ಅಭಿನಯ, ಸಂಭಾಷಣೆಯಲ್ಲಿ ಪರಿಣಿತಿ ಸಾಧಿಸಿರುವ ಲಿಂಗತ್ವ ಅಲ್ಪ ಸಂಖ್ಯಾತರು ತರಬೇತಿ ಅಂತ್ಯದಲ್ಲಿ, ಶ್ವೇತ ಕುಮಾರ ಚೆರಿತ್ರೆ ಎಂಬ ಪೌರಾಣಿಕ ಯಕ್ಷಗಾನ ಪ್ರಸಂಗವನ್ನು ಅದ್ಭುತವಾಗಿ ಪ್ರದರ್ಶಿಸಿ ನೆರದಿದ್ದವರ ಮೆಚ್ಚುಗೆ ಗಳಿಸಿದರು. ಯಕ್ಷಗಾನ ತರಬೇತಿಯ ನಾಟ್ಯ ಗುರುಗಳಾಗಿ ಸುಧೀರ್ ಉಪ್ಪೂರು ಮತ್ತು ವಿಜಯಗಾಣಿಗ ಬೀಜಮಕ್ಕಿ, ಚಂಡೆ ಶಶಿಕುಮಾರ್, ಮದ್ದಳೆಯಲ್ಲಿ ನವೀನ್ ಕುಮಾರ್ ಮತ್ತು ಭಾಗವತಿಕೆಯಲ್ಲಿ ಸುದೀಪ್ ಚಂದ್ರ ಶೆಟ್ಟಿ ಸಹಕಾರ ನೀಡಿದ್ದಾರೆ.

ಯಕ್ಷಗಾನ ತರಬೇತಿ ಪಡೆದಿರುವ ಈ ಲಿಂಗತ್ವ ಅಲ್ಪಸಂಖ್ಯಾತರು ಯಕ್ಷಗಾನ ಪ್ರಸಂಗಗಳಲ್ಲಿ ಸ್ವತಂತ್ರವಾಗಿ ವೇಷಧಾರಿಗಳಾಗಿ ಅಭಿನಯಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ಮೂಲಕ ಜೀವನ ನಿರ್ವಹಣೆಗಾಗಿ ಆರ್ಥಿಕವಾಗಿ ಸಂಪಾದನೆ ಮಾಡಲು ಹಾಗೂ ತಮ್ಮದೇ ತಂಡಗಳನ್ನು ರಚಿಸಿಕೊಂಡು ಸ್ವತಂತ್ರವಾಗಿ ಕಾರ್ಯಕ್ರಮಗಳನ್ನು ನೀಡಲು ಸಮರ್ಥರಾಗಿದ್ದಾರೆ. ಹೊರ ಜಿಲ್ಲೆ , ರಾಜ್ಯ, ದೇಶ ವಿದೇಶಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಲು ಉತ್ಸುಕರಾಗಿರುವ ಇವರಿಗೆ ಸೂಕ್ತ ಪ್ರೋತ್ಸಾಹ, ಬೆಂಬಲ ಮತ್ತು ಅವಕಾಶಗಳನ್ನು ನೀಡುವ ಮಹತ್ತರ ಜವಾಬ್ದಾರಿ ಇಡೀ ಸಮಾಜದ್ದಾಗಿದೆ.

Yakshagana Play In Karkala
Photo Credit: ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನಮಗೆ ಯಕ್ಷಗಾನದ ಯಾವುದೇ ತಲೆ ಬುಡ ಗೊತ್ತಿರಲಿಲ್ಲ. ಒಂದು ತಿಂಗಳ ಅವಧಿಯಲ್ಲಿ ಗುರುಗಳು ಬಡಗುತಿಟ್ಟು ಮಾದರಿಯಲ್ಲಿ , ಕುಣಿತ, ಸಂಭಾಷಣೆ, ತಾಳ , ಲಯದ ಬಗ್ಗೆ ಸಾಕಷ್ಟು ತರಬೇತಿ ನೀಡಿ ನಾವು ಸ್ವತಂತ್ರವಾಗಿ ರಂಗಸ್ಥಳದಲ್ಲಿ ಪ್ರದರ್ಶನ ನೀಡುವ ಮಟ್ಟಿಗೆ ತಯಾರು ಮಾಡಿದ್ದಾರೆ. ನಮಗೂ ಕೂಡ ಹೆಚ್ಚಿನ ಆತ್ಮವಿಶ್ವಾಸ ಮೂಡಿದೆ, ತರಬೇತಿಯ ಕೊನೆಯ ದಿನದಲ್ಲಿ ನಮ್ಮ ಪ್ರದರ್ಶನ ವೀಕ್ಷಿಸಿದ ಕೆಲವರು ಮೇಳಗಳಿಗೆ ಅತಿಥಿ ಕಲಾವಿದರಾಗಿ ಬರುವಂತೆ ಹಾಗೂ ಸಮಾರಂಭಗಳಲ್ಲಿ ಕಾರ್ಯಕ್ರಮ ನೀಡುವಂತೆ ತಿಳಿಸಿದ್ದಾರೆ. ತರಬೇತಿ ಪಡೆದ ಎಲ್ಲಾ ಕಲಾವಿದರು ಸೇರಿ ತಮ್ಮದೇ ಆದ ಮಂಡಳಿ ರಚಿಸಿಕೊಂಡು ನಿರಂತರವಾಗಿ ಅಭ್ಯಾಸ ನಡೆಸುವ ಹಾಗೂ ಕಾರ್ಯಕ್ರಮ ನೀಡುವ ಉದ್ದೇಶವಿದೆ. ನಮಗೆ ಈ ತರಬೇತಿಗೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳು ಎಂದು ಲಿಂಗತ್ವ ಅಲ್ಪಸಂಖ್ಯಾತ ಕಲಾವಿದರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 283 ಮಂದಿ ಲಿಂಗತ್ವ ಅಲ್ಪ ಸಂಖ್ಯಾತರಿದ್ದು, ಇವರು ಜೀವನ ನಿರ್ವಹಣೆಗೆ ತಮಗೆ ಇಷ್ಟವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಬದಲು ಕೌಶಲ್ಯ ತರಬೇತಿಗಳ ಮೂಲಕ ಜೀವನ ನಡೆಸಲು ಅನುವು ಮಾಡಿಕೊಡಲು ಯಕ್ಷಗಾನ ತರಬೇತಿ ನೀಡಲಾಗಿದೆ. ಕಲಾ ಪ್ರತಿಭೆಯ ಮೂಲಕ ಅವರು ಸಾಮಾಜಿಕವಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಿದೆ. ಯಕ್ಷಗಾನ ಮಾತ್ರವಲ್ಲದೇ ಇತರೆ ಕೌಶಲ್ಯಯುಕ್ತ ತರಬೇತಿ ಪಡೆಯಲು ಇಚ್ಛಿಸಿದಲ್ಲಿ ಜಿಲ್ಲಾಡಳಿತ ಎಲ್ಲಾ ಅಗತ್ಯ ನೆರವು ನೀಡಲಿದೆ ಎಂದು ಈ ಹಿಂದೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಎಂ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+