ವಿವಾದದ ನಡುವೆ ಪ್ರಕಾಶ್ ರೈಗೆ 'ಡಾ.ಕಾರಂತ ಹುಟ್ಟೂರ ಪ್ರಶಸ್ತಿ' ಪ್ರದಾನ
ಕೋಟ, ಅಕ್ಟೋಬರ್ 10: ಬಿಜೆಪಿ ಕಾರ್ಯಕರ್ತರ ವಿರೋಧದ ನಡುವೆ 'ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ'ಯನ್ನು ನಟ ಪ್ರಕಾಶ್ ರೈಗೆ ಪ್ರದಾನ ಮಾಡಲಾಯಿತು.
ಉಡುಪಿಯ ಕೋಟದಲ್ಲಿರುವ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದಕ್ಕೂ ಮೊದಲು ಬಿಜೆಪಿ ಮತ್ತು ಹಲವು ಸಂಘಟನೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ಯತ್ನಿಸಿ ಬಂಧನಕ್ಕೆ ಒಳಗಾದರು.
ಈ ಹಿಂದೆ ಪ್ರಕಟಗೊಂಡ ವರದಿ ಹೀಗಿದೆ
ಇಂದು ಬೆಳಿಗ್ಗೆ ಮಂಗಳೂರಿಗೆ ಬಂದು ನಂತರ ಉಡುಪಿಗೆ ಆಗಮಿಸಿದ ಪ್ರಕಾಶ್ ರೈ ಇದೀಗ ಕೋಟಾದತ್ತ ಹೊರಟಿದ್ದಾರೆ. ಈ ಸಂದರ್ಭ ಉಡುಪಿಯ ಸಂತೆಕಟ್ಟೆಯಲ್ಲಿ ಪಟಾಕಿ ಸಿಡಿಸಿ ಪ್ರಕಾಶ್ ರೈಗೆ ಭವ್ಯ ಸ್ವಾಗತ ಕೋರಲಾಯಿತು.

ಇನ್ನು ಕಾರಂತ ಥೀಂ ಪಾರ್ಕ್ ನಲ್ಲಿ ಡಾ ಶಿವರಾಮ ಕಾರಂತ ಹುಟ್ಟೂರ ಪ್ರಶದಗತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಸಭಾಂಗಣದೊಳಗೆ ಪ್ರವೇಶ ಮಾಡಲು ಯತ್ನಿಸಿದ ಜೈ ಭಾರ್ಗವ ಸಂಘಟನೆ ಮತ್ತು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಹೆದ್ದಾರಿಯಲ್ಲೇ ತಡೆದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ತಮ್ಮನ್ನು ತಡೆದ ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರ ವಾಗ್ವಾದ ನಡೆಸಿದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿ ಅಸಮಾಧಾನ
ಹೊರ ಹಾಕಿದರು.
ಪ್ರತಿಭಟನೆ ಹಿನ್ನಲೆಯಲ್ಲಿ ಪ್ರಕಾಶ್ ರೈಗೆ ಭಾರೀ ಭದ್ರತೆ ನೀಡಲಾಗಿದ್ದು 8 ಪೊಲೀಸ್ ವಾಹನಗಳು ಎಸ್ಕಾರ್ಟ್ ನೀಡುತ್ತಿವೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಶಿವರಾಮ ಕಾರಂತ ಥೀಂ ಪಾರ್ಕ್ ಗೆ ಆಗಮಿಸಲಿರುವ ಪ್ರಕಾಶ್ ರೈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications