ನಿರ್ಗತಿಕರ ಪಾಲಿನ ಆಪತ್ಭಾಂಧವರು: ನೂರಕ್ಕೂ ಹೆಚ್ಚು ಅಪರಿಚಿತ ಶವಗಳ ಅಂತ್ಯಸಂಸ್ಕಾರ
ಉಡುಪಿ, ಆಗಸ್ಟ್ 19: ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ನಿತ್ಯಾನಂದ ಒಳಕಾಡು ಮತ್ತು ತಾರಾನಾಥ್ ಮೇಸ್ತ ಹೆಸರನ್ನು ಕೇಳದವರು ಜಿಲ್ಲೆಯಲ್ಲಿ ಕಡಿಮೆ. ಸಮಾಜ ಸೇವೆಗೆಂದು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಈ ಜೋಡಿ ಈತನಕ ನೂರಕ್ಕೂ ಹೆಚ್ಚು ನಿರ್ಗತಿಕರ ಶವಸಂಸ್ಕಾರ ಮಾಡಿದೆ.
Recommended Video
ನಿನ್ನೆ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಐದು ಅಪರಿಚಿತ ಶವಗಳಿಗೆ ಗೌತವಯುತ ಅಂತ್ಯಸಂಸ್ಕಾರ ಮಾಡುವುದರೊಂದಿಗೆ ಇವರಿಬ್ಬರು ಅಂತ್ಯಸಂಸ್ಕಾರ ನಡೆಸಿದ ಮೃತದೇಹಗಳ ಸಂಖ್ಯೆ ನೂರು ದಾಟಿದೆ. ಈಗ ಹೇಳಿ ಕೇಳಿ ಕೊರೊನಾ ಬೇರೆ. ಸಂಬಂಧಿಕರ ಶವಗಳ ಹತ್ತಿರ ಬರಲೂ ಜನ ಹಿಂದೆ ಮುಂದೆ ನೋಡುತ್ತಾರೆ. ಆದರೆ ಈ ಜೋಡಿಯ ಮಾನವೀಯ ಸೇವೆಗೆ ಕೊರೊನಾ ಕೂಡ ಅಡ್ಡಿಯಾಗಿಲ್ಲ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಉಡುಪಿ ನಗರದ ಸಾರ್ವಜನಿಕ ಸ್ಥಳದಲ್ಲಿ 75 ವರ್ಷದ ವೃದ್ಧರೊಬ್ಬರ ಶವ ಪತ್ತೆಯಾಗಿತ್ತು. ಅವರನ್ನು ಲಾರೆನ್ಸ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿತ್ತು. ಹಾಗೆಯೇ ಮಲ್ಪೆಯ ತೊಟ್ಟಂ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿತ್ತು. ಈ ಐದು ಶವಗಳ ವಾರಸುದಾರರ ಪತ್ತೆಗಾಗಿ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಕಾಯುವಿಕೆಯ ಕಾಲಮಿತಿ ಕಳೆದ ಬಳಿಕ ನಿತ್ಯಾನಂದ ಒಳಕಾಡು ಮತ್ತು ತಾರಾನಾಥ್ ಮೇಸ್ತ ಆಂಬುಲೆನ್ಸ್ ನಲ್ಲಿ ಮೃತದೇಹವನ್ನು ಒಯ್ದು ಅಂತ್ಯಸಂಸ್ಕಾರ ನಡೆಸಿದ್ದಾರೆ.

ಇಷ್ಟೇ ಅಲ್ಲ, ಉಡುಪಿಯಲ್ಲಿ ಏನೇ ಅವಘಡಗಳು ನಡೆದರೂ, ಅಪಘಾತಗಳು ನಡೆದರೂ ತಕ್ಷಣ ಇಲ್ಲಿಯ ಜನ ಕರೆ ಮಾಡುವುದು ಇವರಿಬ್ಬರಿಗೆ. ತುರ್ತು ಸೇವೆಗೆಂದೇ ಇವರ ಬಳಿ ಆಂಬುಲೆನ್ಸ್ ಇದೆ. ಈ ಆಂಬುಲೆನ್ಸ್ ಅಪಘಾತ, ಆಕಸ್ಮಿಕ ಸಾವಾದಾಗಲೆಲ್ಲ ನೆರವಿಗೆ ಧಾವಿಸುತ್ತದೆ. ನಿಜ ಅರ್ಥದಲ್ಲಿ 24x7 ಸೇವೆಯಲ್ಲಿರುವ ಈ ಜೋಡಿ ಕೊರೊನಾ ವಾರಿಯರ್ ಗಳಿಗಿಂತ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲದಂತೆ ಜನಸೇವೆ ಮಾಡುತ್ತಿದೆ. ಪ್ರಚಾರ ಬಯಸದ ಈ ಸಮಾಜ ಸೇವಕರು ಜಿಲ್ಲೆಯಲ್ಲ, ದೇಶಕ್ಕೇ ಆಸ್ತಿ ಎಂದರೂ ತಪ್ಪಾಗಲಾರದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications