ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೈಂದೂರಿನಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಅಕ್ಟೋಬರ್ 17: ದಸರಾ ರಜೆಯ ಮಜಾದಲ್ಲಿದ್ದ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ. ಕಂಬದಕೋಣೆಯ ಎಡಮಾವಿನ ಹೊಳೆ ಬೊನ್ನರ್ಯನ ಗುಂಡಿಯಲ್ಲಿ ಮಕ್ಕಳು ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ದಿನೇದಿನೇ ಹೆಚ್ಚುತ್ತಿದೆ ನೀರಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆದಿನೇದಿನೇ ಹೆಚ್ಚುತ್ತಿದೆ ನೀರಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ

ವಂಶಿತ್ ಶೆಟ್ಟಿ (12) ಮತ್ತು ರಿತೇಶ್ ಶೆಟ್ಟಿ ( 12) ನೀರುಪಾಲಾದ ಮಕ್ಕಳು. ಇವರು ಸ್ಥಳೀಯ ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ‌ ಏಳನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.

ಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿ

ಒಟ್ಟು 4 ಜನ ವಿದ್ಯಾರ್ಥಿಗಳು ಬೊಬ್ಬರ್ಯನ ಗುಂಡಿಗೆ ಈಜಲು ತೆರಳಿದ್ದರು. ಅದೃಷ್ಟವಶಾತ್ ಪ್ರದ್ವಿತ್ ಶೆಟ್ಟಿ ಮತ್ತು ವಿಜಯೇಂದ್ರ ಶೆಟ್ಟಿ ಈಜಲು ಬರುವ ಹಿನ್ನಲೆಯಲ್ಲಿ ಬಚಾವಾಗಿದ್ದಾರೆ. ಘಟನೆ ನಡೆದ ಬಳಿಕ ಕಾಳ್ಗಿಚ್ಚಿನಂತೆ ಸುದ್ದಿ ತಲುಪಿ, ವಿದ್ಯಾರ್ಥಿಗಳ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರಿಂದ ಹುಡುಕಾಟ ಕಾರ್ಯಾಚರಣೆ ಈಗಲೂ ಮುಂದುವರೆದಿದೆ.

Two Students Died While Swimming In Bainduru

ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಲ ಗ್ರಾಮಗಳ ಜನರು ಮಕ್ಕಳು ನೀರು ಪಾಲಾದ ಸ್ಥಳದಲ್ಲಿ ಜಮಾಯಿಸಿದ್ದು, ಹೆತ್ತವರ ಶೋಕ ಮುಗಿಲುಮುಟ್ಟಿದೆ.

English summary
Two children died while swimming in river. Incident took place in kambadakone of bainduru in udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X