ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲೂ ಉಗ್ರರ ಸುಳಿವು; ರೈಲ್ವೇ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರ ಅರೆಸ್ಟ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜನವರಿ 14: ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಹತ್ಯೆ ಮಾಡಿದ್ದ ಆರೋಪದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಇಂದು ನಸುಕಿನ ವೇಳೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಜನವರಿ 8ರಂದು ತಮಿಳುನಾಡಿನ ಕಲಿಯಿಕ್ಕಾವಿಲ ಚೆಕ್ ಪೋಸ್ಟ್ ಬಳಿ ಪೊಲೀಸ್ ಅಧಿಕಾರಿ ವಿಲ್ಸನ್ ಎಂಬುವರನ್ನು ಹತ್ಯೆಗೈಯಲಾಗಿತ್ತು. ಅದೇ ಉಗ್ರರು ಕೇರಳ ಮೂಲಕ ಕರ್ನಾಟಕದ ಕರಾವಳಿಗೆ ಆಗಮಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು.

ಜಿಹಾದಿ ಗ್ಯಾಂಗ್ ಸೆರೆ: ಐಸಿಸ್ ಕಮಾಂಡರ್ ವಿದೇಶಕ್ಕೆ ಪರಾರಿ?ಜಿಹಾದಿ ಗ್ಯಾಂಗ್ ಸೆರೆ: ಐಸಿಸ್ ಕಮಾಂಡರ್ ವಿದೇಶಕ್ಕೆ ಪರಾರಿ?

ಆರೋಪಿಗಳನ್ನು ತೀವ್ರವಾಗಿ ಶೋಧಿಸುತ್ತಿದ್ದ ಎನ್.ಐ.ಎ ತಂಡ, 12 ಜನರನ್ನೊಳಗೊಂಡ ಜಿಹಾದಿಗಳ ತಂಡಕ್ಕೆ ಬಲೆ ಬೀಸಿತ್ತು. ಈ ಪೈಕಿ ಹನೀಫ್ ಖಾನ್, ಇಮ್ರಾನ್ ಖಾನ್, ಘನಿ ಮೊಹಮ್ಮದ್ ಝೈದ್ ಎಂಬುವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

Two Suspected Terrorists Arrested In Udupi Railway Station

ಕೋಲಾರಕ್ಕೂ ತಟ್ಟಿದ ಉಗ್ರಗಾಮಿಗಳ ಕರಿ ನೆರಳು; ಇಬ್ಬರ ಬಂಧನಕೋಲಾರಕ್ಕೂ ತಟ್ಟಿದ ಉಗ್ರಗಾಮಿಗಳ ಕರಿ ನೆರಳು; ಇಬ್ಬರ ಬಂಧನ

ಉಡುಪಿಯಲ್ಲಿ ಬಂಧಿತರಾಗಿರುವ ಅಬ್ದುಲ್ ಶಮೀಮ್ ಮತ್ತು ತೌಫಿಕ್ ಅವರೂ ವಿಲ್ಸನ್ ಹತ್ಯೆಗೈದಿದ್ದ ಆರೋಪಿಗಳಾಗಿದ್ದರು. ಆರೋಪಿಗಳು ನೇಪಾಳ ಮೂಲಕ ವಿದೇಶಕ್ಕೆ ಹಾರಲು ಸಿದ್ಧರಾಗಿದ್ದರು ಎಂಬ ಮಾಹಿತಿ ದೊರೆತಿದೆ. ಬಂಧನದ ಕುರಿತು ಸ್ಥಳೀಯ ಪೊಲೀಸರು ಗೌಪ್ಯತೆ ಕಾಯ್ದುಕೊಂಡಿದ್ದಾರೆ.

English summary
Two suspected militants accused of murdering a police officer in Tamil Nadu have been arrested by the Bangalore police at the Udupi railway station today early morning
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X