Get Updates
Get notified of breaking news, exclusive insights, and must-see stories!

ಉಡುಪಿಯಲ್ಲಿ ವಲಸೆ ಕಾರ್ಮಿಕರಿಗೆ ಎರಡು ಹೊತ್ತು ಆಹಾರ ವ್ಯವಸ್ಥೆ

ಉಡುಪಿ, ಏಪ್ರಿಲ್ 19: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ಎಮರ್ಜೆನ್ಸಿ ಘೋಷಣೆಯಾದ ಸಂದರ್ಭದಿಂದ ಜನ ಅಲ್ಲಲ್ಲಿ ಲಾಕ್ ಆಗಿದ್ದಾರೆ. ಅದರಲ್ಲೂ ವಲಸೆ ಕಾರ್ಮಿಕರು ಊಟ ಸಿಗದೇ ಪರದಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸುಮಾರು ಐದು ಸಾವಿರ ಜನ ವಲಸೆ ಕಾರ್ಮಿಕರು ಅತಂತ್ರರಾಗಿದ್ದಾರೆ. ನಿರಾಶ್ರಿತ ಕೇಂದ್ರ, ಬಾಡಿಗೆ ಮನೆ, ಟೆಂಟ್ ಗಳಲ್ಲಿ ವಾಸಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾವಿರಾರು ಕಾರ್ಮಿಕರಿಗೆ ಸಾಮಾಜಿಕ ಹೊರಾಟಗಾರರು, ಸಂಘ ಸಂಸ್ಥೆಗಳು ಈಗಾಗಲೇ ಊಟೋಪಚಾರದ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಯಾದ್ಯಂತ ಮಾಡುತ್ತಿವೆ.

ಇದರ ನಡುವೆ ಉಡುಪಿಯಲ್ಲಿ ಮಧ್ಯಾಹ್ನದ ಊಟದ ಜೊತೆ ರಾತ್ರಿ ಊಟವನ್ನೂ ಆರಂಭಿಸಲಾಗಿದೆ. ಉಡುಪಿ ನಗರದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಸುಮಾರು ಏಳು ಸಾವಿರ ಜನಕ್ಕೆ ಊಟೋಪಚಾರದ ವ್ಯವಸ್ಥೆ ನಡೆಯುತ್ತಿದೆ.

Two Times In A Day Food System For Migrant Workers In Udupi

ಕಡಿಯಾಳಿ ಗಣೇಶೋತ್ಸವ ಸಮಿತಿ ಮತ್ತು ದಾನಿಗಳು ಮಧ್ಯಾಹ್ನ ಊಟ ನೀಡಿದರೆ, ರಾತ್ರಿ ಊಟ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಊಟದ ವ್ಯವಸ್ಥೆ ಮಾಡಿದೆ. ರಾತ್ರಿ ವೇಳೆ 5,300 ಜನರಿಗೆ ಲಾಕ್ ಡೌನ್ ಮುಗಿಯುವವರೆಗೆ ಉಚಿತ ಊಟ ನೀಡಲು ಸಮಿತಿ ನಿರ್ಧರಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+