ಉಡುಪಿಯಲ್ಲಿ ವಲಸೆ ಕಾರ್ಮಿಕರಿಗೆ ಎರಡು ಹೊತ್ತು ಆಹಾರ ವ್ಯವಸ್ಥೆ
ಉಡುಪಿ, ಏಪ್ರಿಲ್ 19: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ಎಮರ್ಜೆನ್ಸಿ ಘೋಷಣೆಯಾದ ಸಂದರ್ಭದಿಂದ ಜನ ಅಲ್ಲಲ್ಲಿ ಲಾಕ್ ಆಗಿದ್ದಾರೆ. ಅದರಲ್ಲೂ ವಲಸೆ ಕಾರ್ಮಿಕರು ಊಟ ಸಿಗದೇ ಪರದಾಡುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಐದು ಸಾವಿರ ಜನ ವಲಸೆ ಕಾರ್ಮಿಕರು ಅತಂತ್ರರಾಗಿದ್ದಾರೆ. ನಿರಾಶ್ರಿತ ಕೇಂದ್ರ, ಬಾಡಿಗೆ ಮನೆ, ಟೆಂಟ್ ಗಳಲ್ಲಿ ವಾಸಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾವಿರಾರು ಕಾರ್ಮಿಕರಿಗೆ ಸಾಮಾಜಿಕ ಹೊರಾಟಗಾರರು, ಸಂಘ ಸಂಸ್ಥೆಗಳು ಈಗಾಗಲೇ ಊಟೋಪಚಾರದ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಯಾದ್ಯಂತ ಮಾಡುತ್ತಿವೆ.
ಇದರ ನಡುವೆ ಉಡುಪಿಯಲ್ಲಿ ಮಧ್ಯಾಹ್ನದ ಊಟದ ಜೊತೆ ರಾತ್ರಿ ಊಟವನ್ನೂ ಆರಂಭಿಸಲಾಗಿದೆ. ಉಡುಪಿ ನಗರದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಸುಮಾರು ಏಳು ಸಾವಿರ ಜನಕ್ಕೆ ಊಟೋಪಚಾರದ ವ್ಯವಸ್ಥೆ ನಡೆಯುತ್ತಿದೆ.

ಕಡಿಯಾಳಿ ಗಣೇಶೋತ್ಸವ ಸಮಿತಿ ಮತ್ತು ದಾನಿಗಳು ಮಧ್ಯಾಹ್ನ ಊಟ ನೀಡಿದರೆ, ರಾತ್ರಿ ಊಟ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಊಟದ ವ್ಯವಸ್ಥೆ ಮಾಡಿದೆ. ರಾತ್ರಿ ವೇಳೆ 5,300 ಜನರಿಗೆ ಲಾಕ್ ಡೌನ್ ಮುಗಿಯುವವರೆಗೆ ಉಚಿತ ಊಟ ನೀಡಲು ಸಮಿತಿ ನಿರ್ಧರಿಸಿದೆ.












Click it and Unblock the Notifications