ಪುರುಷ ಪ್ರಧಾನ ಕಂಬಳ ಗದ್ದೆಯಲ್ಲಿ 11ರ ಬಾಲಕಿಯ ಕಲರವ!
ಉಡುಪಿ, ಮಾರ್ಚ್ 06: ಯಕ್ಷಗಾನವನ್ನು ಕರಾವಳಿಯ ಗಂಡು ಕಲೆ ಎಂದು ಕರೆಯುತ್ತಾರೆ. ಹಾಗೆ ನೋಡಿದರೆ ಜನಪದ ಕ್ರೀಡೆ ಕಂಬಳ ಕೂಡ ಗಂಡು ಕಲೆಯೇ. ಕಂಬಳದಲ್ಲಿ ಈ ತನಕ ಮಹಿಳೆಯರು ಭಾಗವಹಿಸಿದ ಇತಿಹಾಸ ಇಲ್ಲ. ಆದರೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 11ರ ಕುವರಿಯೊಬ್ಬಳು ಕಂಬಳ ಗದ್ದೆಗೆ ಇಳಿಯುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾಳೆ.
ಕೆಲವು ದಿನಗಳ ಹಿಂದೆ ಮಿಯಾರುವಿನ ಪ್ರಸಿದ್ಧ ಲವಕುಶ ಜೋಡುಕರೆ ಕಂಬಳದಲ್ಲಿ ಚೈತ್ರಾ ಎಂಬ 11ರ ಬಾಲಕಿ ಮೊಟ್ಟ ಮೊದಲ ಬಾರಿಗೆ ಕಂಬಳ ಗದ್ದೆಗೆ ಇಳಿಯುವ ಮೂಲಕ ಪುರುಷ ಪ್ರಧಾನ ಕಂಬಳ ಕ್ರೀಡೆಯಲ್ಲಿ ಬಾಲಕಿಯ ಪ್ರವೇಶವಾಗಿದೆ.
ಚೈತ್ರಾ ಕುಂದಾಪುರ ತಾಲೂಕಿನ ಬೋಳಂಬಳ್ಳಿ ಗ್ರಾಮದ ಪರಮೇಶ್ವರ ಭಟ್, ರಮ್ಯಾ ದಂಪತಿಯ ಪುತ್ರಿ. ಈ ದಂಪತಿಯ ಇಬ್ಬರು ಮಕ್ಕಳ ಪೈಕಿ ಚೈತ್ರಾಗೆ ಕಂಬಳವೆಂದರೆ ಅದೇನೋ ಸೆಳೆತ. ಈಕೆ ಕಾಲ್ತೊಡು ಸರಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾಳೆ.

ಕಂಬಳದಲ್ಲಿ ಕೋಣದ ಯಜಮಾನಿಕೆಯ ನೇತೃತ್ವ ವಹಿಸಿ, ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳದಲ್ಲಿ ಹೊಸ ಸಂಚಲನ ಮೂಡಿಸಿದ್ದಾಳೆ. ಕೃಷಿ ಪ್ರಧಾನ ಕುಟುಂಬವಾಗಿದ್ದರಿಂದ ಮತ್ತು ಹಿರಿಯರಿಗೆ ಕಂಬಳದ ಬಗ್ಗೆ ಆಸಕ್ತಿ ಇದ್ದುದರಿಂದಾಗಿ ಅದೇ ಪರಿಸರದಲ್ಲಿ ಬೆಳೆದ ಚೈತ್ರಾ ಚಿಕ್ಕ ವಯಸ್ಸಿನಲ್ಲೇ ಕಂಬಳ ಕೋಣಗಳೆಡೆಗೆ ಆಕರ್ಷಿತಳಾದಳು.
ಕೋಣಗಳಿಗೆ ಸ್ನಾನ ಮಾಡಿಸುವುದು, ಅವುಗಳಿಗೆ ಆಹಾರ ಬೇಯಿಸಿ ತಿನ್ನಿಸುವುದು, ಅವುಗಳ ಆರೈಕೆ ಮಾಡುವುದು ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಳು. ಕೃಷಿಕ ತಂದೆ ಪರಮೇಶ್ವರ್ ಭಟ್ ಕಳೆದ 20 ವರ್ಷಗಳಿಂದ ಕೋಣಗಳನ್ನು ಸಾಕುತ್ತಿದ್ದಾರೆ. ಕೋಣಗಳನ್ನು ಸಾಕಿ ಕಂಬಳಕ್ಕೆ ಹೋಗುವ ಹವ್ಯಾಸ ಅವರಿಗಿದೆ. ಇದು ಬಾಲಕಿಯ ಮೇಲೆ ಪ್ರಭಾವ ಬೀರಿ ಕಂಬಳ ಗದ್ದೆಗೆ ಇಳಿಯುವಷ್ಟು ಆತ್ಮವಿಶ್ವಾಸ ಕುವರಿಯಲ್ಲಿ ಬೆಳೆದಿದೆ.
ಚೈತ್ರಾಗೆ ಕಂಬಳ ಕೋಣಗಳನ್ನು ಓಡಿಸುವ ಮತ್ತು ಕಂಬಳದ ಎಲ್ಲಾ ಹಂತದಲ್ಲೂ ಪಳಗುವ ತವಕ ಇದೆ. ಸದ್ಯ ಓದುತ್ತಲೇ ಕಂಬಳದ ಎಬಿಸಿಡಿ ಕಲಿಯುತ್ತಿದ್ದಾಳೆ. ಈಕೆ ಮುಂದೊಂದು ದಿನ ಪೂರ್ಣ ಪ್ರಮಾಣದ ಕಂಬಳದಲ್ಲಿ ಭಾಗವಹಿಸಿ ಕರಾವಳಿಯ ಪುರುಷ ಪ್ರಧಾನ ಕಂಬಳದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದರಲ್ಲಿ ಯಾವುದೇ ಸಂಶಯವೂ ಇಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications