Yediyurappa: ಬಿಎಸ್ವೈ ಯಾಕೆ ಈಗಲೂ 'ಕಿಂಗ್'? ಇಲ್ಲಿದೆ ತಾಜಾ ಉದಾಹರಣೆ
ಕರ್ನಾಟಕ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರಾಮುಖ್ಯತೆ ಏನು ಎನ್ನುವುದನ್ನು ತಡವಾಗಿ ಅರಿತ ಬಿಜೆಪಿ ಹೈಕಮಾಂಡ್, ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನ್ನಣೆಯನ್ನು ಅವರಿಗೆ ನೀಡುತ್ತಿದೆ. ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಯ ಸದಸ್ಯರನ್ನಾಗಿ ಅವರನ್ನು ನೇಮಕ ಮಾಡಿದ್ದಲ್ಲದೇ ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚಿನ ಮಹತ್ವವನ್ನೂ ನೀಡುತ್ತಿದೆ.
ರಾಜ್ಯ ರಾಜಕೀಯದಲ್ಲಿ ಯಡಿಯೂರಪ್ಪ ಮತ್ತು ಬಿ.ಎಲ್.ಸಂತೋಷ್ ಎನ್ನುವ ಬಣ ರಾಜಕೀಯದ ಬಗ್ಗೆ ಸುದ್ದಿಯಾಗುತ್ತಿರುವ ಸಂದರ್ಭದಲ್ಲಿ, ಟಿಕೆಟ್ ಹಂಚಿಕೆಯಲ್ಲಿ ಬಿಎಸ್ವೈ ಕೈಮೇಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪ್ರಮುಖವಾಗಿ, ಉತ್ತರ ಕರ್ನಾಟಕದ ಭಾಗದಲ್ಲಿ ಯಡಿಯೂರಪ್ಪನವರ ಅಭ್ಯರ್ಥಿಗಳ ಶಿಫಾರಸಿಗೆ ಮನ್ನಣೆ ಸಿಕ್ಕಿದೆ.

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅದರಲ್ಲಿ ಕಾರ್ಕಳಕ್ಕೆ ಹಾಲೀ ಶಾಸಕರನ್ನು ಬಿಟ್ಟು ಮಿಕ್ಕೆಲ್ಲಾ ಕಡೆ ಹೊಸಬರಿಗೆ ಮಣೆ ಹಾಕಲಾಗಿದೆ. ಅದು ಸ್ಥಳೀಯ ಬಿಜೆಪಿ ಘಟಕದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಉಡುಪಿಯಲ್ಲಿ ರಘುಪತಿ ಭಟ್ ತೀವ್ರ ಬೇಸರಗೊಂಡು ಕಣ್ಣೀರು ಹಾಕಿದ್ದರು.
ರಘುಪತಿ ಭಟ್ ಅವರ ಸುದ್ದಿ ಮಾಧ್ಯಮಗಳಲ್ಲಿ ಮುನ್ನಲೆಗೆ ಬರುತ್ತಿದ್ದಂತೆಯೆ ಮಾಜಿ ಸಿಎಂ
ಯಡಿಯೂರಪ್ಪನವರು ಭಟ್ರಿಗೆ ದೂರವಾಣಿ ಮೂಲಕ ಕರೆ ಮಾಡಿ ಅವರನ್ನು ಸಮಾಧಾನ ಪಡಿಸಿದ್ದಾರೆ. ಬಿಎಸ್ವೈ ಕರೆಗೆ ಓಗೊಟ್ಟು ಭಟ್ರು ಶಾಂತವಾಗಿದ್ದಾರೆ ಎನ್ನುವುದಕ್ಕೆ ಭಟ್ರ ಲೇಟೆಸ್ಟ್ ಮಾಧ್ಯಮಗೋಷ್ಠಿ ಉದಾಹರಣೆಯಾಗಬಲ್ಲದು.

ಮೊಗವೀರ ಸಮುದಾಯದ ಯಶಪಾಲ್ ಸುವರ್ಣ
ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ರಘುಪತಿ ಭಟ್ ಬದಲು ಮೊಗವೀರ ಸಮುದಾಯದ ಯಶಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲಾಗಿತ್ತು. ಜಿಲ್ಲೆಯಲ್ಲಿ ಇಬ್ಬರು ಬ್ರಾಹ್ಮಣ ಸಮುದಾಯದವರಿಗೆ (ಕುಂದಾಪುರದಲ್ಲಿ ಕಿರಣ್ ಕೋಡ್ಗಿ) ಟಿಕೆಟ್ ಬೇಡ ಎನ್ನುವ ಕಾರಣಕ್ಕಾಗಿ ಟಿಕೆಟ್ ಕೈತಪ್ಪಿತ್ತು ಎಂದು ಖುದ್ದು ರಘುಪತಿ ಭಟ್ರೇ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡಿದ್ದರು. ಪಕ್ಷದ ನಾಯಕರ ನಡೆಯ ಬಗ್ಗೆ ಬೇಸರ ಹೊರಹಾಕಿದ್ದರು.
ಪಕ್ಷ ನನ್ನನ್ನು ನಡೆಸಿಕೊಂಡ ರೀತಿ ನನಗೆ ಬೇಸರ ತಂದಿದೆ
"ನನಗೆ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ನನಗೆ ಬೇಸರವಿಲ್ಲ, ಪಕ್ಷ ನನ್ನನ್ನು ನಡೆಸಿಕೊಂಡ ರೀತಿ ನನಗೆ ಬೇಸರ ತಂದಿದೆ"ಎಂದು ರಘುಪತಿ ಭಟ್ ಹೇಳಿದ್ದರು. ಈಗ ತಮಗಾಗಿದ್ದ ಬೇಸರ/ಅವಮಾನದಿಂದ ಹೊರ ಬಂದಿರುವ ರಘುಪತಿ ಭಟ್, ಯಶಪಾಲ ಸುವರ್ಣ ಅವರನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ಹೇಳಿದ್ದಾರೆ. ರಘುಪತಿ ಭಟ್ರ ಈ ಬದಲಾದ ನಿಲುವಿಗೆ ಯಡಿಯೂರಪ್ಪನವರ ಫೋನ್ ಕರೆ ಕಾರಣ ಎಂದು ಹೇಳಲಾಗುತ್ತಿದೆ.
ಯಡಿಯೂರಪ್ಪನವರ ಫೋನ್ ಕಾಲ್ ವರ್ಕೌಟ್ ಆಗಿದೆ
ಪಕ್ಷದ ನಾಯಕರ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದ ರಘುಪತಿ ಭಟ್ ಒಂದು ಹೆಜ್ಜೆ ಮುಂದೆ ಹೋಗಿ ಪಕ್ಷೇತರರಾಗಿ ಸ್ಪರ್ಧಿಸಬಹುದು ಎನ್ನುವ ಮಾತು ಕೇಳಿ ಬರುತ್ತಿತ್ತು. ಈಗ ಯಡಿಯೂರಪ್ಪನವರ ಫೋನ್ ಕಾಲ್ ವರ್ಕೌಟ್ ಆಗಿದೆ, ರಘುಪತಿ ಭಟ್ ಅವರು ಉಡುಪಿಯ ಘೋಷಿತ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದಾರೆ ಅಂದರೆ ಅದಕ್ಕೆ ಯಡಿಯೂರಪ್ಪನವರು ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ನಮ್ಮಲ್ಲಿ ಯಾವುದೇ ಟ್ರಬಲ್ ಇಲ್ಲ, ಟ್ರಬಲ್ ಶೂಟರ್ ಕೂಡ ಇಲ್ಲ
"ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನಗೆ ಕರೆ ಮಾಡಿದ್ದರು. ನಮ್ಮಲ್ಲಿ ಯಾವುದೇ ಟ್ರಬಲ್ ಇಲ್ಲ, ಟ್ರಬಲ್ ಶೂಟರ್ ಕೂಡ ಇಲ್ಲ. ಪಕ್ಷ ಕೊಟ್ಟ ಅಭ್ಯರ್ಥಿಯ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ನಮ್ಮ ಗರಡಿಯಲ್ಲೇ ಬೆಳೆದವರು. ನಾನು ಅಭ್ಯರ್ಥಿಯಾದರೆ ಎಷ್ಟು ವೇಗವಾಗಿ ಕೆಲಸ ಮಾಡುತ್ತೇನೋ ಅದೇ ರೀತಿ ಅಭ್ಯರ್ಥಿಯ ಜಯಕ್ಕೂ ಕೆಲಸ ಮಾಡುತ್ತೇನೆ" ಎಂದು ರಘುಪತಿ ಭಟ್ ಹೇಳಿದ್ದಾರೆ. ಅಲ್ಲಿಗೆ ಬೆಟ್ಟದಾಗಿದ್ದ ಉಡುಪಿ ಬಿಜೆಪಿ ಸಮಸ್ಯೆ ಮಂಜಿನಂತೆ ಕರಗಿ ಹೋಗಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications