ಉಡುಪಿ ಡಿಸಿ ಕೊಲೆ ಯತ್ನ ಖಂಡಿಸಿ ನಾಳೆ ಸರಕಾರಿ ನೌಕರರ ಬಂದ್
ಉಡುಪಿ, ಎಪ್ರಿಲ್ 3: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್ ಹಾಗೂ ಗ್ರಾಮ ಲೆಕ್ಕಿಗನ ಕೊಲೆ ಯತ್ನ ಖಂಡಿಸಿ ನಾಳೆ ( ಮಂಗಳವಾರ) ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಒಂದು ದಿನ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸಲಿದ್ದಾರೆ.
ಜಿಲ್ಲಾ ಕಂದಾಯ ನೌಕರರ ಸಂಘದ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. "ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹೀಗಾಗಿ ನಾವು ಹೋರಾಟ ಮಾಡಲಿದ್ದೇವೆ," ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿದ್ದಾರೆ.[ಮರಳು ಮಾಫಿಯಾ ಅಡ್ಡೆ ಮೇಲೆ ದಾಳಿ, ಉಡುಪಿ ಡಿಸಿ ಕೊಲೆ ಯತ್ನ]
ಜಿಲ್ಲಾಧಿಕಾರಿ ಕೊಲೆ ಯತ್ನ ಹಿನ್ನೆಲೆಯಲ್ಲಿ ಉಡುಪಿಯ ಅಟಲ್ ಬಿಹಾರಿ ವಾಜಪೇಯಿ ಸಂಕೀರ್ಣದಲ್ಲಿ ಕಂದಾಯ ಇಲಾಖಾ ನೌಕರರ ಸಮಾಲೋಚನ ಸಭೆ ನಡೆಸಲಾಯಿತು. ಈ ವೇಳೆ ಎಲ್ಲಾ ನೌಕರರು ಪ್ರತಿಭಟನೆ ಮಾಡುವ ನಿರ್ಧಾರ ಮಾಡಿದ್ದಾರೆ.[ಉಡುಪಿ ಡಿಸಿ, ಎಸಿ ಕೊಲೆ ಯತ್ನ, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ]
ಭಾನುವಾರ ರಾತ್ರಿ ಕುಂದಾಪುರದ ಕಡ್ಲೂರಿನಲ್ಲಿ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕಾ ಹಾಗೂ ಕುಂದಾಪುರ ಎಸಿ ಶಿಲ್ಪಾ ನಾಗ್ ಮೇಲೆ ಕೊಲೆ ಯತ್ನ ನಡೆದಿತ್ತು.