ಉಡುಪಿಯಲ್ಲೂ ಅನಾಹುತ ಸೃಷ್ಟಿಸಿದ ಮಳೆ, ರೆಡ್ ಅಲರ್ಟ್ ಘೋಷಣೆ
ಉಡುಪಿ, ಆಗಸ್ಟ್.14: ಮಲೆನಾಡು ಮಾತ್ರವಲ್ಲದೆ, ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳೆ, ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಕಳೆದ ಮೂರು ದಿನಗಳ ಗಾಳಿ, ಮಳೆ ಇವತ್ತೂ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು ಮಂಗಳವಾರ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
72ನೇ ಸ್ವಾತಂತ್ರ್ಯ ದಿನಾಚರಣೆ 2018
ಮಹಾಮಳೆಗೆ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೀನುಗಾರಿಕೆ ಸಂಪೂರ್ಣ ಸ್ಥಬ್ಧಗೊಂಡಿದ್ದು ಬೋಟುಗಳು ಮಲ್ಪೆ ಬಂದರಿನಲ್ಲಿ ಲಂಗರು ಹಾಕಿವೆ. ಇನ್ನು ಐತಿಹಾಸಿಕ ದುರ್ಗಾ ಪರಮೇಶ್ವರಿ ದೇಗುಳದ ಗರ್ಭಗುಡಿಗೆ ನೀರು ಬಂದಿದ್ದು ,ಸಮೃದ್ಧಿಯ ಸಂಕೇತ ಎಂಬ ನೆಲೆಯಲ್ಲಿ ಈ ಭಾಗದ ಭಕ್ತಜನತೆ ಪುಳಕಗೊಂಡಿದ್ದಾರೆ.
ಅವರು ಹಾಗೆ ಪುಳಕಗೊಳ್ಳಲು ಕಾರಣವೂ ಇದೆ. ಮಹಾಮಳೆಗೂ ಈ ದೇವಸ್ಥಾನದೊಳಗೆ ನೀರು ಬರುವುದಕ್ಕೂ ಸಂಬಂಧವಿದೆ. ಪ್ರತೀ ವರ್ಷ ಒಮ್ಮೆಯಾದ್ರೂ ದೇವಸ್ಥಾನದೊಳಗೆ ನೀರು ಬಂದರೆ ಈ ಮಳೆಗಾಳದ ಕೋಟಾ ಮುಗಿದಂತೆಯೇ.
ಗರ್ಭಗುಡಿವರೆಗೆ ನೀರು ಹರಿದರೆ ದೇವಿಗೆ ನೈಸರ್ಗಿಕ ಅಭಿಷೇಕ ಎಂದೇ ಈ ಭಾಗದ ಭಕ್ತರು ನಂಬುತ್ತಾರೆ. ಈ ಹಿನ್ನೆಲೆಯಲ್ಲಿ ಜಲಾವೃತ ಆಗುತ್ತಿದ್ದಂತೆ ಅರ್ಚಕರು ದೇವಿಗೆ ಆರತಿ ಬೆಳಗಿ ನೀರು ಬಂದ ಹಿನ್ನಲೆಯಲ್ಲಿ ಜನತೆ ಖುಷಿಗೊಂಡರು. ಇನ್ನು ಜಿಲ್ಲೆಯ ಯಾವ ಭಾಗದಲ್ಲಿ ಎಷ್ಟು ಮಳೆಯಾಗಿದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

ಧರೆಗುರುಳಿದ ವಿದ್ಯುತ್ ಕಂಬಗಳು, ಮರಗಳು
ಉಡುಪಿಯ ಪೆರ್ಣಂಕಿಲ, ಮಣಿಪುರ ಗ್ರಾಮಗಳಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹಲವು ಮನೆಗಳ ಛಾವಣಿ, ಸಿಮೆಂಟ್ ಶೀಟುಗಳು ಹಾರಿ ಹೋಗಿವೆ. ಕೆಲವೆಡೆ ಮರದ ಕೊಂಬೆಗಳು ಮನೆಯ ಮಹಡಿ ಮೇಲೆ ಬಿದ್ದಿವೆ. ಭಾರೀ ಗಾಳಿ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಅದೃಷ್ಟವಶಾತ್ ಮನೆಯೊಳಗಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಹಾನಿಗೊಳಗಾದ ಪ್ರದೇಶಗಳಿಗೆ ಪೆರ್ಣಂಕಿಲ ಗ್ರಾಮ ಕರಣಿಕ ಸುನಿಲ್ ಭೇಟಿ ನೀಡಿದ್ದಾರೆ. ಒಟ್ಟು 5 - 6 ಲಕ್ಷ ರೂ. ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಕಾಪು ಶಾಸಕ ಲಾಲಾಜಿ ಮೆಂಡನ್, ಪಂಚಾಯತ್ ಸದಸ್ಯರಾದ ಸದಾನಂದ ಪ್ರಭು, ರಶ್ಮಿ ನಾಯಕ್, ಮೋನಿಕಾ ನೊರೊನ್ಹಾ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ್ದಾರೆ.

ಮುಳುಗಡೆಯಾದ ಬೋಟು
ತೂಫಾನಿನ ರಭಸಕ್ಕೆ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟೊಂದು ಮುಳುಗಡೆಯಾಗಿದೆ. ಆದರೆ ಮೀನುಗಾರರನ್ನು ರಕ್ಷಣೆ ಮಾಡಲಾಗಿದ್ದ ಯಾವುದೇ ಸಾವು ನೋವು ಸಂಭವಿಸಿಲ್ಲ.
ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಕೆಲ ಬೋಟುಗಳು ಸಮುದ್ರದಲ್ಲೇ ಗಾಳಿಮಳೆಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇರುವುದರಿಂದ ಮಲ್ಪೆ ಬಂದರಿನಲ್ಲಿ ಸಿಬ್ಬಂದಿಗಳು ಮೈಕ್ ಮೂಲಕ ಎಚ್ಚರಿಕೆ ಸಂದೇಶ ರವಾನಿಸುತ್ತಿದ್ದಾರೆ. ಜಿಪಿಎಸ್ ಮೂಲಕ ಸಮುದ್ರದಲ್ಲಿರುವ ಬೋಟ್ ಗಳ ಚಲನವಲನಗಳನ್ನು ಪರಿಶೀಲಿಸಲಾಗುತ್ತಿದೆ.

ಮನೆಗಳಿಗೆ ನುಗ್ಗಿದ ನೀರು
ಇನ್ನು ಉಪ್ಪೂರು ಹೊಳೆ, ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು, ಈ ಭಾಗದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶಗಳಿಗೆ ನೆರೆ ನೀರು ನುಗ್ಗುತ್ತಿದ್ದು, ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ. ನದಿ ತಟದ ಮನೆಗಳಿಗೆ ನೀರು ನುಗ್ಗಿದ ಕಾರಣ ನೀರನ್ನು ಹೊರಹಾಕಲು ಜನರು ಹರಸಾಹಸ ಪಡುವಂತಾಗಿದೆ.

ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಆಗಸ್ಟ್ 17ರ ತನಕ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ನವದೆಹಲಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ನದಿ, ಸಮುದ್ರದ ಹತ್ತಿರದಲ್ಲಿ ವಾಸಿಸುವ ಜನರು ಒಂದು ವಾರಗಳ ಕಾಲ ಎಚ್ಚರವಾಗಿರುವಂತೆ ಸೂಚನೆ ನೀಡಲಾಗಿದೆ.

ಕಡಲ ಕೊರೆತ
ಉಡುಪಿ ಜಿಲ್ಲೆಯ ಉಪ್ಪುಂದ ಸಮೀಪದ ಕರ್ಕಿಕಳಿಯ ಬಳಿಯ ಯಕ್ಷೇಶ್ವರಿ ದೇವಸ್ಥಾನದ ಹತ್ತಿರದಲ್ಲಿರುವ ಕಡಲ ತೀರದಲ್ಲಿ ನಿನ್ನೆ ಸಂಜೆ ಹಾಗೂ ಇಂದು ಮುಂಜಾನೆ ವೇಳೆ ಕಡಲ ಕೊರೆತ ಸಂಭವಿಸಿದೆ.
ಶನಿವಾರ ರಾತ್ರಿ ಹಾಗೂ ರವಿವಾರ ಬೆಳಗ್ಗೆ ಭಾರೀ ಮಳೆಯಾಗಿರುವುದರಿಂದ ರವಿವಾರ ಮಧ್ಯಾಹ್ನ ಉಪ್ಪುಂದ ಕರ್ಕಿಕಳಿ ಸಮುದ್ರ ತೀರ ಭಾಗದ ಸಮುದ್ರದಲ್ಲಿ ದೊಡ್ಡ ಗಾತ್ರದ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿದೆ.
ಸಮುದ್ರದ ಅಲೆಗಳು ಒಮ್ಮೆಲೇ ದಡಕ್ಕೆ ಬಂದು ಅಪ್ಪಳಿಸುತ್ತಿರುವುದರಿಂದ ದೋಣಿಗಳು ಸಮುದ್ರ ಪಾಲಾಗುವ ಅಪಾಯ ಮನಗಂಡ ಸ್ಥಳೀಯ ಮೀನುಗಾರರು ಸಮುದ್ರ ತಟದಲ್ಲಿ ನಿಲ್ಲಿಸಿರುವ ದೋಣಿಗಳನ್ನು ಸುರಕ್ಷಿತ ಸ್ಥಳಕ್ಕೆ ತರುವ ಮೂಲಕ ದೋಣಿಗಳನ್ನು ರಕ್ಷಿಸಿ ಸಂಭವನೀಯ ನಷ್ಟದಿಂದ ಪಾರಾಗಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications