Get Updates
Get notified of breaking news, exclusive insights, and must-see stories!

ಮೀನುಗಾರಿಕಾ ದೋಣಿ ನಾಪತ್ತೆ : ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ

ಉಡುಪಿ, ಮೇ 03 : ಸುವರ್ಣ ತ್ರಿಭುಜ ದೋಣಿ ನಾಪತ್ತೆ ಪ್ರಕರಣದ ವಿಚಾರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ ನೀಡಿದ್ದಾರೆ. ನಾಪತ್ತೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಮೀನುಗಾರಿಕಾ ಇಲಾಖೆಯ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಹಾಕಿದ್ದಾರೆ. ದೋಣಿ ದುರಂತಕ್ಕೆ ಭಾರತೀಯ ನೌಕಾಪಡೆಯ ಯುದ್ಧ ನೌಕೆ ಕಾರಣ ಎಂದು ಅವರು ಆರೋಪ ಮಾಡಿದ್ದಾರೆ.

ಲೋಕಸಭಾ ಚುನಾವಣೆಗೂ ಮೊದಲೇ ಈ ಬಗ್ಗೆ ಮೀನುಗಾರರಿಗೆ ಮಾಹಿತಿ ಸಿಕ್ಕಿದ್ದರೂ ಅದನ್ನು ಕೇಂದ್ರ ರಕ್ಷಣಾ ಇಲಾಖೆ ಮತ್ತು ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಮರೆಮಾಚಿ, ಗೌಪ್ಯವಾಗಿ ಇಡುವ ಪ್ರಯತ್ನ ಮಾಡಲಾಗಿತ್ತು ಎಂದು ದೂರಿದ್ದಾರೆ.

Udupi fishing boat missing : Pramod Madhwaraj demands for judicial probe

ದೇಶದ ಪ್ರಧಾನಮಂತ್ರಿಯವರು ತಕ್ಷಣ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕಾಗಿ ಕರಾವಳಿಯ ಸಮಸ್ತ ಮೀನುಗಾರರು ಮತ್ತು ಅವರ ಕುಟುಂಬದ ಪರವಾಗಿ ಆಗ್ರಹ ಮಾಡುತ್ತಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕರಿಗೆ ಮತ್ತು ಕೇಂದ್ರ ಸರಕಾರಕ್ಕೆ ತಾಕತ್ತಿದ್ದರೆ ಸುಪ್ರೀಂ ಕೊರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆಗೆ ಒಪ್ಪಿಸಿ ಈ ವಿಚಾರದ ಸತ್ಯಾಸತ್ಯಗಳನ್ನು ಬಹಿರಂಗಪಡಿಸಬೇಕಾಗಿ ನಾನು ಆಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಫೇಸ್‌ಬುಕ್ ಪೋಸ್ಟ್

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+