ಮೀನುಗಾರಿಕಾ ದೋಣಿ ನಾಪತ್ತೆ : ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ
ಉಡುಪಿ, ಮೇ 03 : ಸುವರ್ಣ ತ್ರಿಭುಜ ದೋಣಿ ನಾಪತ್ತೆ ಪ್ರಕರಣದ ವಿಚಾರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ ನೀಡಿದ್ದಾರೆ. ನಾಪತ್ತೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಮೀನುಗಾರಿಕಾ ಇಲಾಖೆಯ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಈ ಕುರಿತು ಫೇಸ್ಬುಕ್ನಲ್ಲಿ ಸ್ಟೇಟಸ್ ಹಾಕಿದ್ದಾರೆ. ದೋಣಿ ದುರಂತಕ್ಕೆ ಭಾರತೀಯ ನೌಕಾಪಡೆಯ ಯುದ್ಧ ನೌಕೆ ಕಾರಣ ಎಂದು ಅವರು ಆರೋಪ ಮಾಡಿದ್ದಾರೆ.
ನೌಕಾಪಡೆಯೇ 7 ಮಂದಿ ಮೀನುಗಾರರನ್ನು ಕೊಂದಿದೆ:ಪ್ರಮೋದ್ ಮಧ್ವರಾಜ್
ಲೋಕಸಭಾ ಚುನಾವಣೆಗೂ ಮೊದಲೇ ಈ ಬಗ್ಗೆ ಮೀನುಗಾರರಿಗೆ ಮಾಹಿತಿ ಸಿಕ್ಕಿದ್ದರೂ ಅದನ್ನು ಕೇಂದ್ರ ರಕ್ಷಣಾ ಇಲಾಖೆ ಮತ್ತು ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಮರೆಮಾಚಿ, ಗೌಪ್ಯವಾಗಿ ಇಡುವ ಪ್ರಯತ್ನ ಮಾಡಲಾಗಿತ್ತು ಎಂದು ದೂರಿದ್ದಾರೆ.
ದೇಶದ ಪ್ರಧಾನಮಂತ್ರಿಯವರು ತಕ್ಷಣ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕಾಗಿ ಕರಾವಳಿಯ ಸಮಸ್ತ ಮೀನುಗಾರರು ಮತ್ತು ಅವರ ಕುಟುಂಬದ ಪರವಾಗಿ ಆಗ್ರಹ ಮಾಡುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಪತ್ತೆಯಾಗದ ಬೋಟ್: ಮೀನುಗಾರರು ಎಲ್ಲಿಗೆ ಹೋದರು?
ಬಿಜೆಪಿ ನಾಯಕರಿಗೆ ಮತ್ತು ಕೇಂದ್ರ ಸರಕಾರಕ್ಕೆ ತಾಕತ್ತಿದ್ದರೆ ಸುಪ್ರೀಂ ಕೊರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆಗೆ ಒಪ್ಪಿಸಿ ಈ ವಿಚಾರದ ಸತ್ಯಾಸತ್ಯಗಳನ್ನು ಬಹಿರಂಗಪಡಿಸಬೇಕಾಗಿ ನಾನು ಆಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಫೇಸ್ಬುಕ್ ಪೋಸ್ಟ್