ಉಡುಪಿಯಲ್ಲಿ ಮತ್ತೆ ಹೆಡೆ ಬಿಚ್ಚಿದ ಟೀಂ ಗರುಡ: ಕಾರ್ವಾರ್ ವಿಡಿಯೋ ಸಿಕ್ಕಾಪಟ್ಟೆ ವೈರಲ್
ಉಡುಪಿ, ಮೇ 26: ಒಂದೇ ಗುಂಪಿನ ಎರಡು ತಂಡಗಳು ಪರಸ್ಪರ ಲಾಂಗ್, ಮಚ್ಚು ಬೀಸಿ ಬಡಿದಾಡಿಕೊಂಡ ಘಟನೆ ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಮೇ 18 ರ ಮುಂಜಾವ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಮುಖಾಮುಖಿಯಾದ ಎರಡು ತಂಡಗಳು ಈ ರೀತಿಯಾಗಿ ಕಾದಾಟ ನಡೆಸಿದೆ. ರಾತ್ರಿ ವೇಳೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಕಂಡು ಸುತ್ತಲಿನ ಫ್ಲ್ಯಾಟ್ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.

ಉಡುಪಿಯ ಕಾಪುವಿನಲ್ಲಿ ಟೀಂ ಗರುಡ ಹೆಸರಿನಲ್ಲಿ ತಂಡ ಕಟ್ಟಿಕೊಂಡಿದ್ದ ಪುಂಡರ ಗುಂಪೊಂದು ಗಾಂಜಾ, ದನ ಕಳ್ಳತನ, ದರೋಡೆಯಲ್ಲಿ ಸಕ್ರಿಯವಾಗಿತ್ತು. ಸದಾ ತಲವಾರು, ಕತ್ತಿ, ಡ್ರ್ಯಾಗನ್ ಹಿಡಿದು ತಿರುಗಾಡುತ್ತಿದ್ದ ಈ ಗುಂಪಿಗೆ ರೌಡಿಶೀಟರ್ ಆಶಿಕ್ ಎಂಬಾತನೇ ಕ್ಯಾಪ್ಟನ್ ಆಗಿದ್ದ. ನಾಲ್ಕು ವರ್ಷದ ಹಿಂದೆ ಅಂದಿನ ಎಸ್.ಪಿ ಡಾ. ವಿಷ್ಣುವರ್ಧನ್ ಈ ತಂಡದ ಹೆಡೆಮುರಿ ಕಟ್ಟಿದ್ದರು. ಅದಾದ ನಂತರ ಈ ತಂಡದ ಒಳಜಗಳ ಹೆಚ್ಚಾಗಿತ್ತು.
ಎರಡು ವಾರದ ಹಿಂದೆ ಆಶಿಕ್ ಮತ್ತು ಅಲ್ಫಾಝ್ ನಡುವೆ ಜಗಳ ನಡೆದಿತ್ತು. ಒಂದೇ ತಂಡ ಆಗಿರುವುದರಿಂದ ರಾಜಿ ಆಗಲು ಆಶಿಕ್ನನ್ನು ಅಲ್ಫಾಝ್ ಟೀಂ ಕರೆಸಿಕೊಂಡಿತ್ತು. ಆದರೆ ಅಲ್ಫಾಝ್ ಬಗ್ಗೆ ತಿಳಿದಿದ್ದ ಆಶಿಕ್ ಕುಂಜಿಬೆಟ್ಟಿಗೆ ಬಂದವನೇ ಕಾರಿನಿಂದ ಇಳಿದಿರಲಿಲ್ಲ. ಹೀಗಾಗಿ ಕಾರು ಗುದ್ದಾಟದ ಮೂಲಕ ಆಶಿಕ್ನನ್ನ ಮಟ್ಟ ಹಾಕಲು ಅಲ್ಫಾಝ್ ಪ್ರಯತ್ನಿಸಿದ್ದಾನೆ. ಅಷ್ಟೇ ಅಲ್ಲ, ತಲವಾರು ದಾಳಿ ನಡೆಸಲು ಮುಂದಾಗಿದ್ದಾರೆ. ಇಷ್ಟಾಗುತ್ತಲೇ ಆಶಿಕ್ ಕಡೆಯವರು ತಮ್ಮ ಸ್ವಿಫ್ಟ್ ಕಾರನ್ನು ಶರೀಫ್ ಎಂಬಾತನ ಮೇಲೆ ಹರಿಸಿದ್ದಾರೆ.
ಈ ಘಟನೆ ಸಂಬಂಧ ಈಗಾಗಲೇ ಉಡುಪಿ ನಗರ ಪೊಲೀಸರು ಆಶಿಕ್ ಸಹಿತ ಮೂವರನ್ನ ಅರೆಸ್ಟ್ ಮಾಡಿದ್ದಾರೆ. ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಘಟನೆ ವಿಡಿಯೋ ವೈರಲ್ ಆಗಿದ್ದು, ಘಟನೆ ರಾಜ್ಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications