ತ್ಯಾಜ್ಯ ನೀರನ್ನೇ ಮರು ಬಳಕೆ ಮಾಡುವ ಉಡುಪಿಯ ಮೊದಲ ದೇಗುಲ
ಉಡುಪಿ ಜಿಲ್ಲೆಯ ಸಾಲಿಗ್ರಾಮದ ಶ್ರೀಗುರು ನರಸಿಂಹ ದೇವಸ್ಥಾನ ನೀರು ಮರು ಬಳಕೆ ವ್ಯವಸ್ಥೆ ಅಳವಡಿಸಿಕೊಂಡಿದೆ. ಜಿಲ್ಲೆಯುಲ್ಲಿ ದೇವಾಲಯವೊಂದು ನೀರು ಮರು ಬಳಕೆ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿರುವ ಮೊದಲ ನಿದರ್ಶನ ಇದಾಗಿದೆ.
ಉಡುಪಿ, ಫೆಬ್ರವರಿ 5: ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಶ್ರೀಗುರು ನರಸಿಂಹ ದೇವಸ್ಥಾನವಿದೆ. ದೇಗುಲ ಅಂದ ಮೇಲೆ ಅಲ್ಲಿ ಪ್ರಾರ್ಥನೆ, ಪುನಸ್ಕಾರ ಸಾಮಾನ್ಯ. ಅದು ಬಿಟ್ಟರೆ ಜಾತ್ರೆ, ಬ್ರಹ್ಮಕಲಶೋತ್ಸವ ಹೀಗೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಇಷ್ಟೆ ಆಗಿದ್ದರೆ ಈ ದೇವಾಲಯದ ಪ್ರಸ್ತಾಪ ಮಾಡುವ ಯಾವ ಅವಶ್ಯಕತೆಯೇ ಇರಲಿಲ್ಲ.
ಆದರೆ ಇಲ್ಲಿ ತ್ಯಾಜ್ಯ ನೀರನ್ನೇ ಮರು ಬಳಕೆ ಮಾಡಿಕೊಳ್ಳಲಾಗ್ತಿದೆ. ಈ ಮೂಲಕ ನೀರಿನ ಕೊರತೆಯನ್ನು ದೇವಾಲಯದವರು ಇಲ್ಲವಾಗಿಸಿದ್ದಾರೆ. [ಹುಲಿ ಅಸಲಿ, ವಿಡಿಯೋ ನಕಲಿ, ಕಮಲಶಿಲೆ ಜನ ಗಲಿಬಿಲಿ]

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಮತ್ತು ಕುಂದಾಪುರ ಮಧ್ಯೆ ಈ ಶ್ರೀಗುರು ನರಸಿಂಹ ದೇವಸ್ಥಾನವಿದೆ. ಈ ದೇಗುಲಕ್ಕೆ ಪ್ರತಿದಿನ 500 ಕ್ಕಿಂತಲೂ ಹೆಚ್ಚಿನ ಭಕ್ತರು ಬರುತ್ತಾರೆ. ಶನಿವಾರ ಬಂತೆಂದರೆ ಸಾಕು ಸುಮಾರು 4,000ಕ್ಕೂ ಅಧಿಕ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಾರೆ.

ಬಿಸಿಲ ಬೇಗೆ ಬೇರೆ. ಹೀಗಾಗಿ ನೀರಿನ ಕೊರತೆ ಇರುವುದನ್ನು ಮನಗಂಡ ದೇಗುಲದ ಅಧಿಕಾರಿಗಳು ಒಂದು ಯೋಜನೆಯನ್ನು ರೂಪಿಸಿದರು. ಅದೇನೆಂದರೆ ತ್ಯಾಜ್ಯ ನೀರನ್ನ ಮರು ಬಳಕೆ ಮಾಡುವುದು. ದಿನಾಲೂ ತ್ಯಾಜ್ಯ ನೀರನ್ನು ನಿರ್ವಹಿಸುವುದೂ ಬಹಳ ಕಷ್ಟವಾಗುತ್ತಿತ್ತು. ಹೀಗಾಗಿ ಕೆಲ ತಿಂಗಳ ಹಿಂದೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತ್ಯಾಜ್ಯ ನೀರು ಮರು ಬಳಕೆ ಸ್ಥಾವರ ಅಸ್ಥಿತ್ವಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿತು. ಇದರ ಫಲವೇ ಈ ದೇವಸ್ಥಾನದ ಉದ್ಯಾನವನದಲ್ಲಿ ತ್ಯಾಜ್ಯ ನೀರು ಮರು ಬಳಕೆ ಸ್ಥಾವರ ಅನುಷ್ಠಾನಗೊಂಡಿದೆ. [ಮಧ್ವಾಚಾರ್ಯರ ಬಗ್ಗೆ ತಪ್ಪು ಕಲ್ಪನೆ ಹರಡಿಸಲಾಗಿತ್ತು - ಪೇಜಾವರ ಶ್ರೀ ]
ಈ ಮೂಲಕ ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ತ್ಯಾಜ್ಯ ನೀರು ಮರುಬಳಕೆ ಸ್ಥಾವರ ಅಳವಡಿಸಿದ ಮೊಟ್ಟ ಮೊದಲ ದೇವಸ್ಥಾನ ಇದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ತ್ಯಾಜ್ಯ ನೀರು ಮರು ಬಳಕೆ ಸ್ಥಾವರವನ್ನು ಅಳವಡಿಸಿಕೊಂಡಿತ್ತು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications