ವಿಡಿಯೋ; ಹಿಜಾಬ್ ತೆಗೆಯೋಲ್ಲ ಹಠ ಹಿಡಿದ ಉಡುಪಿ ವಿದ್ಯಾರ್ಥಿನಿಯರು!
ಉಡುಪಿ, ಜನವರಿ 27; ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಹಿಜಾಬ್ ವಿವಾದ ಮತ್ತೊಂದು ಹಂತಕ್ಕೆ ತಲುಪಿದೆ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ಆನ್ಲೈನ್ ಕ್ಲಾಸ್ ನಡೆಸಿ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಅಭಿವೃದ್ಧಿ ಮಂಡಳಿಯ ಅವಕಾಶ ಕಲ್ಪಿಸಿದೆ. ಆದರೆ ಮುಸ್ಲಿಂ ವಿದ್ಯಾರ್ಥಿನಿಯರು ಮಾತ್ರ ನಮಗೆ ಆನ್ಲೈನ್ ಕ್ಲಾಸ್ ಬೇಡ, ನಾವು ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಬೇಕೆಂದು ಪಟ್ಟು ಹಿಡಿದಿದ್ದಾರೆ.
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಈಗ ಮತ್ತೊಂದು ಆಯಾಮ ಪಡೆದುಕೊಂಡಿದೆ. ಅತ್ತ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ಗೆ ಅವಕಾಶ ಬೇಕೆ ಬೇಕು ಎಂದು ಹಠಕ್ಕೆ ಬಿದಿದ್ದಾರೆ. ಇತ್ತ ಕಾಲೇಜು ಅಭಿವೃದ್ಧಿ ಮಂಡಳಿ ಯಾವುದೇ ಕಾರಣಕ್ಕೂ ಪಾಠ ಮಾಡುವಾಗ ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲ ಅಂತ ಕಡ್ಡಿ ಮುರಿದ ಹಾಗೆ ಹೇಳಿದೆ.
ಹೀಗಾಗಿ ವಿವಾದ ಮತ್ತಷ್ಟು ಜಟಿಲವಾಗುತ್ತಿದೆ. ಇದೇ ವಿಚಾರವಾಗಿ ಮುಸ್ಲಿಂ ಮುಖಂಡ ಜಿ. ಎ. ಭಾವ ಜೊತೆ ಸಭೆ ನಡೆಸಿದ ಶಾಲಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಸ್ಥಳೀಯ ಶಾಸಕ ರಘಪತಿ ಭಟ್ ಹಿಜಾಬ್ ಬೇಕೆನ್ನುವ 6 ವಿದ್ಯಾರ್ಥಿನಿಯರಿಗೆ ಆನ್ ಲೈನ್ ಕ್ಲಾಸ್ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಮಹತ್ವದ ಘಟ್ಟವಾಗಿದ್ದು, ಹೀಗಾಗಿ ಆನ್ಲೈನ್ ಕ್ಲಾಸ್ ನಡೆಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.

ಆದರೆ ಕ್ಲಾಸ್ನಲ್ಲಿ ಹಿಜಾಬ್ ಧರಿಸಿ ಪಾಠ ಕೇಳುದಕ್ಕೆ ಅವಕಾಶ ನೀಡಬೇಕು ಎನ್ನುವ ವಿದ್ಯಾರ್ಥಿನಿಯರು ಮಾತ್ರ ಆನ್ಲೈನ್ ಕ್ಲಾಸ್ಗೆ ಒಪ್ಪುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿನಿಯರು, ಶಾಲಾಭಿವೃದ್ಧಿ ಸಮಿತಿ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಜಾಬ್ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಹಿಜಾಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ನಮಗೆ ಯಾವುದೇ ಆನ್ಲೈನ್ ಕ್ಲಾಸ್ಗಳು ಬೇಡ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಹಿಜಬ್ ಗಾಗಿ ಹೋರಾಟ ನಡೆಸುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಾದ ಮುಸ್ಕಾನ್ ಹಾಗೂ ಆಲಿಯಾ ಆಕ್ಷೇಪ ವ್ಯಕ್ತಪಡಿಸಿದ್ದು, "ಆನ್ಲೈನ್ ಕ್ಲಾಸ್ ಹೆಸರಲ್ಲಿ ಮತ್ತೆ ತಾರತಮ್ಯ ಮಾಡಬೇಡಿ. ಸರಕಾರಿ ಕಾಲೇಜಿನಲ್ಲಿ ನಮಗೆ ನಮ್ಮ ಹಕ್ಕು ಸಿಗದಿದ್ದರೆ ನಾವು ಬೇರೆಡೆ ಅದನ್ನು ನಿರೀಕ್ಷಿಸಲು ಹೇಗೆ ಸಾಧ್ಯ?. ನಮ್ಮಲ್ಲಿ ವಿಜ್ಞಾನ ವಿಭಾಗ ವಿದ್ಯಾರ್ಥಿಗಳು ಇರುವುದರಿಂದ ನಮಗೆ ಆನ್ಲೈನ್ ಕ್ಲಾಸ್ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ. ನಮಗೆ ಒಂದು ತಿಂಗಳ ತರಗತಿ ನಷ್ಟ ಆಗಿದೆ. ಕಾಲೇಜಿನ ಉಳಿದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ಧರಿಸಲು ಸಿದ್ಧರಿದ್ದಾರೆ. ಆದರೆ ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಅವರು ಭಯ ಗೊಂಡಿದ್ದಾರೆ" ಎಂದು ಹೇಳಿದ್ದಾರೆ.
ಒಟ್ಟಿನ್ನಲ್ಲಿ ಉಡುಪಿ ಪದವಿ ಪೂರ್ವ ಕಾಲೇಜಿನ ಹಿಬಾಜ್ ವಿವಾದ ಬೇರೆ ಬೇರೆ ಆಯಾಮ ಪಡೆಯುತ್ತಿದೆ. ವಿವಾದ ತಣ್ಣಗಾಗದೇ ಹೆಚ್ಚುತ್ತಲೇ ಇರುವುದರಿಂದ ಇತರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಆದಷ್ಟು ಬೇಗ ಸ್ಪಷ್ಟ ತೀರ್ಮಾನ ಕೈಗೊಂಡು ವಿವಾದಕ್ಕೆ ಇತಿಶ್ರೀ ಹಾಡಬೇಕಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications