ಗೌಡ್ರು, ಎಚ್ಡಿಕೆ ತಂಗಿರುವ ರೆಸಾರ್ಟಿಗೆ ಉಡುಪಿ ಕೃಷ್ಣಮಠದ ಪ್ರಸಾದ ರವಾನೆ
ಉಡುಪಿ, ಮೇ 2: ನಗರದ ಹೊರವಲಯದ ಸಾಯಿರಾಧ ರೆಸಾರ್ಟಿನಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ವರಿಷ್ಠ ದೇವೇಗೌಡ್ರು ಮತ್ತು ಸಿಎಂ ಕುಮಾರಸ್ವಾಮಿಗೆ, ಉಡುಪಿ ಕೃಷ್ಣಮಠದಿಂದ ಆಮಂತ್ರಣ ಪತ್ರವನ್ನು ಕಳುಹಿಸಿಕೊಡಲಾಗಿದೆ.
ಕೃಷ್ಣಮಠದ ಸ್ವರ್ಣಗೋಪುರ ಉದ್ಘಾಟನೆಗೆ ಜೆಡಿಎಸ್ ವರಿಷ್ಠರನ್ನು ಮತ್ತು ಮುಖ್ಯಮಂತ್ರಿಗಳನ್ನು ಪರ್ಯಾಯ ಪಲಿಮಾರು ಮಠದ ಶ್ರೀಗಳು ಆಹ್ವಾನಿಸಿದ್ದು, ಜೂನ್ ಮೊದಲ ವಾರದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಗೌಡ್ರ ಮತ್ತು ಮುಖ್ಯಮಂತ್ರಿಗಳ ಪ್ರಕೃತಿ ಚಿಕಿತ್ಸೆಗೆ ಇಂದು ನಾಲ್ಕನೇ ದಿನವಾಗಿದ್ದು, ಉಡುಪಿ ಕೃಷ್ಣಮಠದಿಂದ ದಳಪತಿಗಳಿಗೆ ಕೃಷ್ಣ ಮತ್ತು ಮುಖ್ಯಪ್ರಾಣ ದೇವರ ಪ್ರಸಾದ ನೀಡಿದ ಮಠದ ಅಧಿಕಾರಿಗಳು, ಕೃಷ್ಣಮಠಕ್ಕೆ ಬರಲು ಆಹ್ವಾನ ನೀಡಿದ್ದಾರೆಂದು ತಿಳಿದುಬಂದಿದೆ.

ಕೃಷ್ಣಮಠಕ್ಕೆ ಅಕ್ಷಯ ತೃತೀಯದ ದಿನವಾದ ಮೇ ಏಳರಂದು ಬರುವುದಾಗಿ ದೇವೇಗೌಡ್ರು ಹೇಳಿದ್ದು, ಅಲ್ಲಿಯೇ ಪ್ರಸಾದ ಸ್ವೀಕರಿಸುವುದಾಗಿ ಮಠದ ಅಧಿಕಾರಿಗಳಿಗೆ ಹೇಳಿದ್ದಾರೆ.
ಕೃಷ್ಣ ಮಠದ ಗರ್ಭಗುಡಿಯ ಮೇಲ್ಛಾವಣಿಗೆ ಸುವರ್ಣ ಕವಚ ಹೊದಿಸುವ ಕೆಲಸಕ್ಕೆ ಮಾರ್ಚ್ 13ರಂದು ಚಾಲನೆ ನೀಡಲಾಗಿತ್ತು. ಜೂನ್ ಮೊದಲ ವಾರದಲ್ಲಿ ಗೋಪುರದ ಕೆಲಸ ಸಂಪೂರ್ಣಗೊಳ್ಳಲಿದೆ.
800 ವರ್ಷದ ಹಳೆಯ ತಾಮ್ರದ ತಗಡನ್ನು ತೆಗೆದು ಮೇಲ್ಛಾವಣಿಗೆ ಸುವರ್ಣ ಕವಚ ಹೊದಿಸಲಾಗುತ್ತಿದೆ. 100 ಕೆಜಿ ಬಂಗಾರವನ್ನು ಛಾವಣಿ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications