ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಸದ್ಯಕ್ಕಂತೂ ಕೃಷ್ಣನ ದರ್ಶನ ಇಲ್ಲ...

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 06: ಜೂನ್ 8ರ ನಂತರ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅವಕಾಶ ಕೊಟ್ಟಿದೆ. ಆದರೆ ನಾವು ಇನ್ನೂ 20 ರಿಂದ 30 ದಿನ ಕಾಯುತ್ತೇವೆ. ಮುಂದಿನ ಬೆಳವಣಿಗೆಗಳನ್ನು ನೋಡಿ ದರ್ಶನ ವ್ಯವಸ್ಥೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ ಉಡುಪಿ ಕೃಷ್ಣಮಠದ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ.

Recommended Video

India surpasses Italy in Corona cases count | Oneindia kannada

ಹೀಗಾಗಿ ಉಡುಪಿಯಲ್ಲಿ ಸದ್ಯಕ್ಕೆ ಕೃಷ್ಣನ ದರ್ಶನ ಇಲ್ಲ. ದೇವಸ್ಥಾನ ಆರಂಭಿಸಿದರೆ ಎಲ್ಲೆಡೆಯಿಂದಲೂ ಭಕ್ತರು ಬರುತ್ತಾರೆ. ಆದರೆ ಭಕ್ತರ ಮತ್ತು ಕೃಷ್ಣಮಠದ ಸಿಬ್ಬಂದಿ ಆರೋಗ್ಯ ನಮಗೆ ಮುಖ್ಯ ಎಂದು ಹೇಳಿದ್ದಾರೆ.

ಜೂನ್ 8ರ ನಂತರವೂ ತೆರೆಯಲ್ಲ ಚಿಕ್ಕಮಗಳೂರಿನ ಈ ಎರಡು ದೇವಾಲಯಗಳುಜೂನ್ 8ರ ನಂತರವೂ ತೆರೆಯಲ್ಲ ಚಿಕ್ಕಮಗಳೂರಿನ ಈ ಎರಡು ದೇವಾಲಯಗಳು

"ಕೃಷ್ಣಮಠದಲ್ಲಿ ಬಹಳ ಹಿಂದಿನಿಂದಲೂ ಯತಿಗಳೇ ಪೂಜೆ ಮಾಡಿಕೊಂಡು ಬರುವ ಸಂಪ್ರದಾಯವಿದೆ. ಕೃಷ್ಣ ಮಠಕ್ಕೆ ಪ್ರತಿದಿನ 1 ಲಕ್ಷ ರೂಪಾಯಿಯಷ್ಟು ಖರ್ಚು ಇದೆ. ಲಾಕ್ ಡೌನ್ ಸಂದರ್ಭದಲ್ಲಿ ನಮ್ಮೆಲ್ಲಾ ಸಿಬ್ಬಂದಿಗೆ ಸಂಬಳ ಕೊಡುತ್ತಿದ್ದೇವೆ. ಮಠ ತೆರೆಯುವ ಬಗ್ಗೆ ಮುಂದೆ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ ಕೊರೊನಾ ಸೋಂಕು ಶೀಘ್ರ ದೂರವಾಗಲಿ ಎಂದು ಪ್ರಾರ್ಥನೆ ಮಾಡುತ್ತೇವೆ" ಎಂದಿದ್ದಾರೆ ಅದಮಾರು ಕಿರಿಯ ಸ್ವಾಮೀಜಿ.

 Udupi Krishna Mutt Wont Open After June 8

ಜೊತೆಗೆ ಕೊರೊನಾ ವೈರಸ್ ದೂರವಾಗಿಸಲು ಹೋರಾಡುತ್ತಿರುವ ಸರ್ಕಾರಗಳ ಹಾಗೂ ಅಧಿಕಾರಿಗಳ ಕಾರ್ಯವನ್ನೂ ಶ್ಲಾಘಿಸಿದ್ದಾರೆ.

English summary
''Udupi krishna mutt wont open after june 8. We will wait till 20-30 days" said adamaru sri eshapriya teertha swamiji
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X