Udupi: ಕರಾವಳಿ ಜಿಲ್ಲೆಯಲ್ಲೇ ಕುಡಿಯುವ ನೀರಿನ ಸಮಸ್ಯೆ, ಉಡುಪಿ ನಗರಸಭೆಯಿಂದ ಮಹತ್ವದ ನಿರ್ಧಾರ
ಉಡುಪಿ, ಏಪ್ರಿಲ್ 30: ಉಡುಪಿ ನಗರಸಭೆ ಮತ್ತೆ ಕುಡಿಯುವ ನೀರಿನ ಸರಬರಾಜು ವಿಚಾರದಲ್ಲಿ ಹೊಸ ವ್ಯವಸ್ಥೆಗೆ ಸಿದ್ಧವಾಗಿದೆ. ಕಳೆದ ಬಾರಿ ಕುಡಿಯುವ ನೀರಿನ ವಿಚಾರದಲ್ಲಿ ಸಾಕಷ್ಟು ಸಂಕಷ್ಟ ಅನುಭವಿಸಿದ್ದ ನಗರ ನಿವಾಸಿಗಳಿಗೆ ಮತ್ತೆ ನೀರಿನ ತಲೆನೋವು ಪ್ರಾರಂಭವಾಗಿದೆ. ಉಡುಪಿ ನಗರಕ್ಕೆ ನೀರು ಒದಗಿಸುವ ಬಜೆ ಡ್ಯಾಮ್ನಲ್ಲಿ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕರಾವಳಿಯ ಜಿಲ್ಲೆ ಉಡುಪಿಯಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿಯೇ ಕುಡಿಯುವ ನೀರಿನ ವಿಚಾರದಲ್ಲಿ ಸಂಕಷ್ಟ ಅನುಭವಿಸಿದ್ದ ಉಡುಪಿಯ ಜಿಲ್ಲೆಯ ನಾಗರಿಕರು ಈ ಬಾರಿ ಮತ್ತೆ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಉಡುಪಿಯ ನಗರಸಭೆ ಇದ್ದಷ್ಟು ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ.

ಉಡುಪಿ ನಗರಕ್ಕೆ ನೀರು ಪೂರೈಸುವ ಹಿರಿಯಡ್ಕ ಸಮೀಪದ ಬಜೆ ಡ್ಯಾಮ್ ನಲ್ಲಿ ಈಗಾಗಲೇ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಹೀಗಾಗಿ ಇರುವ ಅಲ್ಪ ಸ್ವಲ್ಪ ನೀರನ್ನು ಸಮ ಪ್ರಮಾಣದಲ್ಲಿ ಆಲೋಚನೆ ಮಾಡಿ ಖರ್ಚು ಮಾಡುವ ನಿಟ್ಟಿನಲ್ಲಿ ರೇಷನ್ ಪದ್ಧತಿಯನ್ನು ಮತ್ತೆ ಜಾರಿಗೆ ತರುವ ನಿರ್ಧಾರಕ್ಕೆ ನಗರ ಸಭೆ ಅಣಿಯಾಗುತ್ತಿದೆ.
ಸದ್ಯ ಬಜೆ ಡ್ಯಾಮ್ನಲ್ಲಿರುವ ನೀರಿನ ಪ್ರಮಾಣ ಮೇ 15 ರವರೆಗೆ ಮಾತ್ರೆ ಬಳಕೆಗೆ ಲಭ್ಯವಾಗಲಿದೆ. ಮಾರ್ಚ್ ತಿಂಗಳಿನ ಪ್ರಾರಂಭದಲ್ಲಿ 5.96 ಮೀಟರ್ ನೀರಿನ ಸಂಗ್ರಹವಿದ್ದ ಡ್ಯಾಮ್ ನಲ್ಲಿ ಈಗ 3.61 ಮೀಟರ್ ನೀರಿನ ಮಟ್ಟವಿದೆ. ಹೀಗಾಗಿ ಯತೇಚ್ಛವಾಗಿ ನೀರನ್ನ ನಗರಸಭೆ ವ್ಯಾಪ್ತಿಯ ನಾಗರಿಕರು ಬಳಸಿದಲ್ಲಿ ಮೇ ತಿಂಗಳಿನ ಅಂತ್ಯದ ಒಳಗೆ ಡ್ಯಾಮ್ ನ ನೀರು ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ. ಹೀಗಾಗಿ ಜೂನ್ ಮೊದಲ ವಾರದವರೆಗೆ ಕುಡಿಯುವ ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಿಕೊಳ್ಳುವ ಅನಿವಾರ್ಯತೆ ನಗರಸಭೆಗಿದೆ.
ಕಳೆದ ಬಾರಿ ಅಂತೆ ನಗರ ವ್ಯಾಪ್ತಿಯ ಮಲ್ಪೆ, ಮಣಿಪಾಲ, ಉಡುಪಿ ಹೀಗೆ ಮೂರು ವಿಭಾಗಗಳಾಗಿ ವಿಂಗಡಿಸಿ ಎರಡು ದಿನಕ್ಕೊಮ್ಮೆ ರೇಷನಿಂಗ್ ಪದ್ಧತಿಯಲ್ಲಿ ನೀರು ಬಿಡುವ ಆಲೋಚನೆ ಸದ್ಯ ನಗರಸಭೆ ಮಾಡುತ್ತಿದೆ. ಇನ್ನು ನಗರಸಭಾ ವ್ಯಾಪ್ತಿಯ ಎತ್ತರದ ಪ್ರದೇಶಗಳಲ್ಲಿ ಎರಡು ದಿನಗಳ ಬದಲಿಗೆ ಮೂರು ದಿನಗಳಿಗೊಮ್ಮೆಯಾದರೂ ಕುಡಿಯುವ ನೀರನ್ನು ಸರಬರಾಜು ಮಾಡಲು ನಗರಸಭೆ ಪ್ರಯತ್ನಿಸುತ್ತಿದೆ.
ಒಟ್ಟಾರೆಯಾಗಿ ಈ ಬಾರಿ ಮಳೆರಾಯ ಕಳೆದ ಬಾರಿಯಂತೆ ಒಂದು ತಿಂಗಳು ಮುಂದೆ ಹೋದರೆ ಕರಾವಳಿಯ ಬಿಸಿಲಿನ ಬೇಗೆಯ ನಡುವೆ ಕುಡಿಯಲು ನೀರು ಇಲ್ಲದೆ ಸಂಕಷ್ಟ ಪಡುವ ದಿನಗಳು ಎದುರಾಗಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಅಧಿಕಾರಿಗಳು ಎಚ್ಚೆತ್ತು ಕುಡಿಯುವ ನೀರಿನ ಸಮರ್ಪಕ ಬಳಕೆಯ ಕುರಿತು ಕಾರ್ಯೋನ್ಮುಖರಾಗಬೇಕಾದ ಅಗತ್ಯತೆ ಇದೆ.
-
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications