Udupi: ಕೊಲೆ ಮಾಡಿದ ಚಾಕುವನ್ನು ಮತ್ತೆ ಅಡುಗೆ ಮನೆಯಲ್ಲಿ ಇಟ್ಟಿದ್ದ ನಾಲ್ವರ ಹಂತಕ!
ಉಡುಪಿ, ನವೆಂಬರ್ 23: ಉಡುಪಿಯಲ್ಲಿ ನಾಲ್ವರ ಹತ್ಯೆಗೈದ ಆರೋಪಿ ಪ್ರವೀಣ್ ಚೌಗಲೇ ಹತ್ಯೆ ಮಾಡಿದ ಚೂರಿಯನ್ನು ಅಡುಗೆ ಮನೆಯಲ್ಲೇ ಇಟ್ಟು ಪತ್ನಿಗೆ ಸಂಶಯ ಬರದಂತೆ ವರ್ತಿಸಿದ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ. ನಾಲ್ವರ ಹತ್ಯೆ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಉಡುಪಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಾ.ಅರುಣ್, ಪ್ರವೀಣ್ ನಾಲ್ವರ ಕೊಲೆಗೈದು ಚೂರಿಯನ್ನು ಅಡುಗೆ ಮನೆಯಲ್ಲಿ ಇಟ್ಟಿದ್ದಾನೆ. ಪತ್ನಿಗೆ ಸಂಶಯ ಬರೆದ ಹಾಗೆ ಮನೆಯಲ್ಲಿ ಪ್ರವೀಣ್ ವರ್ತಿಸಿದ್ದಾನೆ. ಬುಧವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇವೆ.

ಆರೋಪಿ ಪ್ರವೀಣ್ ಹಾಗೂ ಆಯ್ನಾಜ್ ಎಂಟು ತಿಂಗಳಿಂದ ಪರಿಚಯವಿತ್ತು. ಇವರ ಮಧ್ಯೆ ಉತ್ತಮ ಸಂಬಂಧ ಇತ್ತು. ಪ್ರವೀಣ್ ತನ್ನ ದ್ವಿಚಕ್ರ ವಾಹನ ಬಳಸಲು ಆಯ್ನಾಜ್ ನೀಡಿದ್ದ. ಆದರೆ ಎರಡು ತಿಂಗಳಿಂದ ಮಾತಾಡುತ್ತಿರಲಿಲ್ಲ. ಪ್ರವೀಣ್ ಕೊಲೆ ಮಾಡುವ ದಿನ ತನ್ನ ಕಾರ್ಅನ್ನು ಪಡುಬಿದಿರೆ ಟೋಲ್ ಹಿಂದೆ ನಿಲ್ಲಿಸಿದ್ದ.
ಕೃತ್ಯ ಮಾಡಲು ಚಾಕುವನ್ನು ತನ್ನ ಮನೆಯ ಅಡುಗೆಕೋಣೆಯಿಂದಲೇ ತಂದಿದ್ದ. ಮೊದಲು ಆಯ್ನಾಜ್ ಕೊಂದು ನಂತರ ತಾಯಿ ಅಕ್ಕ ಹಾಗೂ ತಮ್ಮನನ್ನು ಕೊಂದಿದ್ದ. ಕೊಲೆಗೆ ಬಳಸಿದ್ದ ಬಟ್ಟೆಯನ್ನು ಹೊತ್ತಿಸಿದ್ದ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು, ಹೆಂಡತಿ ಜೊತೆ ಬೆಳಗಾವಿ ಹೋಗಿದ್ದ. ಲೋಕೇಷನ್ ಹಾಕಲು ಆನ್ಲೈನ್ಗೆ ಬಂದ ಸಂದರ್ಭದಲ್ಲಿ ಆತನನ್ನು ಸೆರೆ ಹಿಡಿದಿದ್ದೇವೆ ಎಂದು ಎಸ್ಪಿ ಅರುಣ್ ಕೆ ಹೇಳಿದ್ದಾರೆ.
ಪ್ರವೀಣ್, ಆಯ್ನಾಜ್ನನ್ನು ಮಾತ್ರ ಕೊಲೆ ಮಾಡಲು ಬಂದಿದ್ದ. ಆದರೆ ಇತರರು ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಎಲ್ಲರನ್ನೂ ಕೊಂದಿದ್ದಾನೆ. ಕೊಲೆ ಮಾಡಿದ ಬಳಿಕ ಪ್ರವೀಣ್ಗೆ ಆಶ್ರಯ ನೀಡಿದ ಮನೆಯವರನ್ನು ತನಿಖೆ ಮಾಡಿದ್ದೇವೆ. ಪ್ರವೀಣ್ಗೆ ಆಶ್ರಯ ನೀಡಿದವರು ಪತ್ನಿ ಸಂಬಂಧಿಕರು ಎಂದು ತಿಳಿದುಬಂದಿದೆ.
ಪ್ರಕರಣದ ಕುರಿತು ನಾವು ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. 2007 ಪೂನಾ ಪೊಲೀಸ್ ಆಗಿದ್ದ. ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದನೋ ಎಂಬ ಬಗ್ಗೆ ಮೆಡಿಕಲ್ ರಿಪೋರ್ಟ್ ಬರಲಿದೆ. ಈ ಕೇಸ್ ಸಲುವಾಗಿ ಮೂರು ಪ್ರಕರಣ ದಾಖಲಾಗಿದೆ. ಉಡುಪಿ ನಗರದಲ್ಲಿ ಕೆಲವು ಕಡೆಗಳಲ್ಲಿ ಸಿಸಿ ಟಿವಿ ಅಳವಡಿಕೆ ಮಾಡುತ್ತೇವೆ. ಉಡುಪಿ ಮಂಗಳೂರಿನಲ್ಲಿ ಮಹಜರು ನಡೆಸಿದ್ದೇವೆ ಎಂದು ಎಸ್ಪಿ ಹೇಳಿದ್ದಾರೆ.
ಕೊಲೆ ಮಾಡಿದ ಸಂಧರ್ಭದಲ್ಲಿ ಪ್ರವೀಣ್ ಕೈಗೆ ಗಾಯವಾಗಿತ್ತು. ಆದರೆ ಕೈಗೆ ಗಾಯವಾದ ಬಗ್ಗೆ ಎಂಬ ಬಗ್ಗೆ ಪತ್ನಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ. ಗಂಭೀರ ಪ್ರಕರಣ ಆಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ ಎಂದು ತಿಳಿಸಿದರು.
ಮಂಗಳೂರಿನಲ್ಲಿ ಆಯ್ನಾಜ್ಗೆ ಬಾಡಿಗೆ ಮನೆ ಮಾಡಲು ಪ್ರವೀಣ್ ಸಹಾಯ ಮಾಡಿದ್ದಾನೆ. ಆಯ್ನಾಜ್ ಕುಟುಂಬದವರು ತನಿಖೆಗೆ ಸಹಾಯ ಮಾಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ತಂಡ ಒಳ್ಳೆಯ ಕೆಲಸ ಮಾಡಿದೆ. ಮಂಗಳೂರಿನಲ್ಲಿ ಪ್ರವೀಣ್ನನ್ನು ಅವೈಡ್ ಮಾಡಿದಕ್ಕೆ ಮನೆಗೆ ಬಂದು ಕೊಂದಿದ್ದಾನೆ. ಡಿಜಿ ಐಜಿಯವರು ತನಿಖೆ ಮಾಡಿದ ತಂಡಕ್ಕೆ ಬಹುಮಾನ ಘೋಷಣೆ ಮಾಡುತ್ತಾರೆ. 50ಕ್ಕೂ ಹೆಚ್ಚು ಪೊಲೀಸರು ತನಿಖಾ ತಂಡದಲ್ಲಿ ಇದ್ದರು. ತೃಪ್ತಿ ನಗರದಲ್ಲಿ ಮಹಜರು ವೇಳೆಯಲ್ಲಿ ಗಲಾಟೆ ಮಾಡುವ ಉದ್ದೇಶದಿಂದಲೇ ಗಲಾಟೆಯಾಗಿದೆ. ಹೀಗಾಗಿ ಮಹಜರಿನಲ್ಲಿ ಗಲಾಟೆಯಾಗಿದೆ .ಗಲಾಟೆ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಅರುಣ್ ಕೆ ಹೇಳಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications