ಇಬ್ಬರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್
ಉಡುಪಿ, ಸೆಪ್ಟೆಂಬರ್ 09: ಇಲ್ಲಿನ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದಿದ್ದ ಶಕುಂತಳಾ ಎಂಬವರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.
ಉಪ್ಪೂರಿನ ಕೆ.ಜಿ ರೋಡ್ ನಿವಾಸಿ ಹರೀಶ್ ಪೂಜಾರಿ ಮತ್ತು ಆತನ ಗೆಳೆಯ ಹೇರೂರಿನ ಸಂತೋಷ್ ಪೂಜಾರಿ ಎಂಬವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿ ಆದೇಶ ಹೊರಡಿಸಿದೆ.

ಸಾಲ ಮಾಡಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದ ಆರೋಪಿಗಳಾದ ಹರೀಶ್ ಪೂಜಾರಿ ಹಾಗೂ ಸಂತೋಷ್ ಪೂಜಾರಿ ಹಣ ಹೊಂದಿಸಲು 2012 ಜೂನ್ 25 ರಂದು ಶಕುಂತಲಾ ಪೂಜಾರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಮನೆಯಲ್ಲಿದ್ದ ಕರಿಮಣಿ ಸರ ,ಬೆಂಡೋಲೆ ,ಚಿನ್ನದ ಸರ ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತು ದೋಚಿ ಪರಾರಿಯಾಗಿದ್ದರು.
ಈ ಪ್ರಕರಣದ ಕುರಿತು ತನಿಖೆ ನಡೆಸಿದ ಮಲ್ಪೆ ಪೊಲೀಸರು ಆರೋಪಿಗಳಾದ ಸಂತೋಷ್ ಪೂಜಾರಿ ಹಾಗೂ ಹರೀಶ್ ಪೂಜಾರಿಯನ್ನು ಬಂಧಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.
ಅದಲ್ಲದೆ ತಲಾ 20 ಸಾವಿರ ರೂಪಾಯಿ ದಂಡ ಹಾಗೂ ಕಲಾಂ 357ಸಿಆರ್ ಪಿಸಿ ಅಡಿಯಲ್ಲಿ ತಲಾ 25 ಸಾವಿರ ರು. ಶಕುಂತಲಾರ ಮಕ್ಕಳಿಗೆ ಪರಿಹಾರ ಧನವಾಗಿ ನೀಡುವಂತೆ ಆದೇಶಿಸಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications