ರಾಮಮಂದಿರ ನಿರ್ಮಾಣದ ವೇಳೆಗೆ ಬಡವರಿಗೆ ಮನೆ ಕಟ್ಟಿಸಿಕೊಡೋಣ -ಪೇಜಾವರ ಶ್ರೀ
ಉಡುಪಿ, ಜನವರಿ 17: ರಾಮಮಂದಿರ ನಿರ್ಮಾಣದ ವೇಳೆ ರಾಮ ರಾಜ್ಯ ನಿರ್ಮಾಣದ ಸಂಕಲ್ಪ ಮಾಡೋಣ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.
ರಾಮರಾಜ್ಯ ನಿರ್ಮಾಣಕ್ಕೆ ಪೇಜಾವರ ಶ್ರೀಗಳು ಹೊಸ ಸಂಕಲ್ಪ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದು, ರಾಷ್ಟ್ರಾದ್ಯಂತ ರಾಮ ಸೇವಾ ಸಂಕಲ್ಪ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೇಜಾವರ ಶ್ರೀ ಮನವಿ ಮಾಡಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯದ ಹುಂಡಿಗೆ ಹಾಕುವ ಹಣ ಹೇಗೆ ವಿನಿಯೋಗ ಆಗುತ್ತದೋ ಗೊತ್ತಿಲ್ಲ, ರಾಮ ರಾಜ್ಯಕ್ಕೋಸ್ಕರ ರಾಮಮಂದಿರದ ನಿರ್ಮಾಣ ಆಗುತ್ತಿದೆ. ಮಂದಿರ ಕಟ್ಟುವ ಜೊತೆಗೆ ಬಡವರಿಗೆ ಮನೆ ಕಟ್ಟಿಸಿಕೊಡುವ ಸಂಕಲ್ಪ ಮಾಡೋಣ ಎಂದು ಪೇಜಾವರ ಶ್ರೀ ಕರೆ ನೀಡಿದ್ದಾರೆ.

ತನ್ನ 60ನೇ ವಯಸ್ಸಿನ ವೇಳೆಗೆ 6 ಮನೆ ಕಟ್ಟಿಸಿಕೊಡಲು ಪೇಜಾವರ ಶ್ರೀ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಒಂದು ವರ್ಷದ ಅವಧಿಯಲ್ಲಿ ಆರು ಮನೆ ನಿರ್ಮಿಸಿ ಕೊಡಲು ಪೇಜಾವರಶ್ರೀ ಸಂಕಲ್ಪ ಮಾಡಿದ್ದಾರೆ.
ಒಂದು ವರ್ಷದ ಕಾಲಾವಕಾಶದೊಳಗೆ ಬಡವರಿಗೆ ಮನೆ ನಿರ್ಮಾಣ ಮಾಡೋಣ. ಮಂದಿರದಿಂದ ದೇಶಕ್ಕೇನು ಲಾಭ ಅಂತ ಜನ ಕೇಳುತ್ತಾರೆ. ಮಂದಿರದ ಜೊತೆ ದೇಶದ ಮಂದಿಗೂ ಸಹಾಯ ಮಾಡೋಣ. ಪ್ರಧಾನಿ ಮೋದಿ ಒಂದು ದಿನವನ್ನು ಸಂಕಲ್ಪ ದಿನ ಎಂದು ಘೋಷಿಸಬೇಕು. ದೇಶದ ಭಗವದ್ಭಕ್ತರು, ದೇಶಪ್ರೇಮಿಗಳು ಯೋಜನೆಗೆ ಕೈಜೋಡಿಸಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ಈ ಸೇವಾ ಕಾರ್ಯಕ್ಕೆ ಒಂದು ಆಪ್ ಸಿದ್ಧ ಮಾಡಬೇಕು. ಪ್ರತಿ ಜಿಲ್ಲೆ ರಾಜ್ಯದಲ್ಲಿ ಕೈಗೊಂಡ ಕೆಲಸ ದಾಖಲಾಗಬೇಕು. ಒಂದು ವರ್ಷದ ಉತ್ತಮ ಕಾರ್ಯಗಳನ್ನು ಶ್ರೀರಾಮ ದೇವರಿಗೆ ಅರ್ಪಿಸೋಣ. ಮನೆ ನಿರ್ಮಾಣದ ಜೊತೆ ಗೋವು, ವಿದ್ಯಾರ್ಥಿಗಳು, ರೋಗಿಗಳ ದತ್ತು ಸ್ವೀಕಾರ ಮಾಡೋಣ. ದೇಶದ ಉದ್ದಗಲದಲ್ಲಿ ಜನರಲ್ಲಿ ಈ ಪರಿವರ್ತನೆ ಆಗಬೇಕು. ದೇಶಾದ್ಯಂತ ಸೇವಾ ಕಾರ್ಯ ಐಚ್ಛಿಕವಾಗದೆ, ಕಡ್ಡಾಯ ಆಗಬೇಕು. ಜೀವನದಲ್ಲಿ ವೈಭವದ ಆಚರಣೆಯ ಜೊತೆ ಬಡವರ ಬಗ್ಗೆ ಕನಿಕರ ತೋರೋಣ. ದೇವಭಕ್ತಿ ಮತ್ತು ದೇಶಭಕ್ತಿ ಬೇರೆ ಬೇರೆಯಲ್ಲ. ಈ ಯೋಜನೆಯ ಕುರಿತು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಚರ್ಚೆ ಮಾಡುತ್ತೇನೆ ಎಂದು ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications