ಹೊಸವರ್ಷದ ಮುನ್ನ ಪೇಜಾವರರ ಮಹತ್ವದ ನಿರ್ಧಾರ
ಉಡುಪಿ, ಡಿ 31: 2013ಕ್ಕೆ ವಿದಾಯ ಹೇಳುವ ಮುನ್ನ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿರುವ ಸಂಪ್ರದಾಯಕ್ಕೆ ತಿಲಾಂಜಲಿ ಇಡಲು ನಿರ್ಧರಿಸಿದ್ದಾರೆ.
ಮಾಧ್ವ ಸಂಪ್ರದಾಯದಂತೆ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆ ಜನವರಿ 18, 2014ರ ನಸುಕಿನಲ್ಲಿ ನಡೆಯಲಿದೆ. ಕಾಣಿಯೂರು ಶ್ರೀಗಳು ಸರ್ವಜ್ಞ ಪೀಠವೇರಲಿರಲಿದ್ದಾರೆ. ಮಾನವರು ಹೊತ್ತುಕೊಂಡುವ ಹೋಗವ ಪಲ್ಲಕ್ಕಿಯಲ್ಲಿ ಕುಳಿತು ಕೊಳ್ಳದೇ ಇರಲು ಪೇಜಾವರ ಶ್ರೀಗಳು ನಿರ್ಧರಿಸಿದ್ದಾರೆ.
ಪರ್ಯಾಯ ಮೆರವಣಿಗೆಯಂದು ಉಡುಪಿ ಜೋಡುಕಟ್ಟೆ ವೃತ್ತದಿಂದ ರಥಬೀದಿಯವರೆಗೆ ಅಷ್ಠ ಮಠಾಧೀಶರು ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಬರುವ ಪದ್ದತಿಯಿದೆ. ಮೊಗವೀರ ಸಮುದಾಯದವರು ಶ್ರೀಗಳು ಕೂತಿರುವ ಪಲ್ಲಕ್ಕಿಯನ್ನು ಹೊರುವುದು ಈಗಿರುವ ಪದ್ದತಿ.

ಉಡುಪಿಯ ಪಾಜಕ ಕ್ಷೇತ್ರದಲ್ಲಿ ಸೋಮವಾರ (ಡಿ 30) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಪೇಜಾವರ ಶ್ರೀಗಳು, ನಾನು ಭಕ್ತರು ಹೊರುವ ಪಲ್ಲಕ್ಕಿಯಲ್ಲಿ ಇನ್ನು ಮುಂದೆ ಕುಳಿತು ಕೊಳ್ಳುವುದಿಲ್ಲ. ಜೀಪಿನಲ್ಲಿ ಪಲ್ಲಕ್ಕಿ ಇರಿಸಿ ಅದರಲ್ಲಿ ಕುಳಿತು ಬರುತ್ತೇನೆ. ಈ ಸಂಬಂಧ ಅನ್ಯ ಶ್ರೀಗಳಿಗೆ ನಾನು ಒತ್ತಡ ಹೇರುವುದಿಲ್ಲ ಎಂದು ಹೇಳಿದ್ದಾರೆ.
ಮನುಷ್ಯರು ಹೊರುವ ಪಲ್ಲಕ್ಕಿಯಲ್ಲಿ ಕುಳಿತು ಕೊಳ್ಳುವುದು ಮಾನವೀಯತೆಗೆ ವಿರುದ್ದ. ನನ್ನ ನಿರ್ಧಾರಕ್ಕೆ ಪಲಿಮಾರು ಮತ್ತು ಕಾಣಿಯೂರು ಶ್ರೀಗಳು ಸಹಮತ ವ್ಯಕ್ತ ಪಡಿಸಿದ್ದಾರೆ. ಜೀಪಿನಲ್ಲಿ ಪಲ್ಲಕ್ಕಿ ಇಟ್ಟು ಅದರಲ್ಲಿ ಕೂತು ಬಂದರೆ ಸಂಪ್ರದಾಯಜ್ಜೆ ಧಕ್ಕೆಯಾಗುವುದಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಪ್ರಗತಿಪರರಿಂದ ವಿರೋಧ ವ್ಯಕ್ತವಾಗುವ ಮುನ್ನವೇ ಪಲ್ಲಕ್ಕಿ ಹೊರುವ ಪದ್ದತಿಯಲ್ಲಿ ಮಾರ್ಪಾಡು ಮಾಡಲು ಮುಂದಾಗಿದ್ದೇವೆ. ನಮ್ಮ ಮಠದ ಅಧೀನದಲ್ಲಿರುವ ಉಡುಪಿ ಮುಚ್ಚಿಲಕೋಡು ಸುಬ್ರಮಣ್ಯ ದೇವಾಲಯದಲ್ಲಿ ಮಡೆಸ್ನಾನದ ಬದಲು ಎಡೆಸ್ನಾನ ಪದ್ದತಿಯನ್ನು ಈಗಾಗಲೇ ಜಾರಿಗೆ ತಂದಿದ್ದೇವೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಗುಲ್ಬರ್ಗ ಜಿಲ್ಲೆ ಜೇವರ್ಗಿಯಲ್ಲಿ ರಂಭಾಪುರಿ ಶ್ರೀಗಳ ದಸರಾ ಅಡ್ಡಪಲ್ಲಕ್ಕಿ ಉತ್ಸವಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications