ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

|
Google Oneindia Kannada News

ಉಡುಪಿ, ಡಿಸೆಂಬರ್ 27 : ಉಡುಪಿಯ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ದೆಹಲಿಯ ಏಮ್ಸ್‌ ವೈದ್ಯರ ಜೊತೆ ಕೆಎಂಸಿ ವೈದ್ಯರು ಸಂಪರ್ಕದಲ್ಲಿದ್ದು ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

89 ವರ್ಷದ ಪೇಜಾವರ ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.

ಪೇಜಾವರ ಶ್ರೀಗಳನ್ನು ನೋಡಲು ಹೊರಟಿದ್ದ ಸಿದ್ದರಾಮಯ್ಯ: ಅವರನ್ನು ತಡೆದಿದ್ದು ಇವರೇನಾ? ಪೇಜಾವರ ಶ್ರೀಗಳನ್ನು ನೋಡಲು ಹೊರಟಿದ್ದ ಸಿದ್ದರಾಮಯ್ಯ: ಅವರನ್ನು ತಡೆದಿದ್ದು ಇವರೇನಾ?

ಶುಕ್ರವಾರ ಆಸ್ಪತ್ರೆ ಬಿಡುಗಡೆ ಮಾಡಿರುವ 8ನೇ ಹೆಲ್ತ್ ಬುಲೆಟಿನ್‌ನಲ್ಲಿ ಆರೋಗ್ಯ ಸ್ಥಿತಿಯು ತೀರಾ ಗಂಭೀರವಾಗಿದೆ. ಕೃತಕ ಉಸಿರಾಟದ ವ್ಯವಸ್ಥೆ ಮುಂದುವರೆಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪೇಜಾವರ ಶ್ರೀ ಆರೋಗ್ಯ; ಚೇತರಿಕೆಗೆ ಸಮಯ ಬೇಕೆಂದ ವೈದ್ಯರ ತಂಡಪೇಜಾವರ ಶ್ರೀ ಆರೋಗ್ಯ; ಚೇತರಿಕೆಗೆ ಸಮಯ ಬೇಕೆಂದ ವೈದ್ಯರ ತಂಡ

Udupi Pejawar Seer Health Condition Critical

ಪೇಜಾವರ ಶ್ರೀಗಳ ಪ್ರಜ್ಞಾವಸ್ಥೆಯಲ್ಲಿ ಸುಧಾರಣೆ ಕಂಡು ಬಂದಿಲ್ಲ. ಗುರುವಾರಕ್ಕೆ ಹೋಲಿಕೆ ಮಾಡಿದರೆ ಇಂದು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಪೇಜಾವರ ಶ್ರೀಗಳ ಚಿಕಿತ್ಸೆಗೆ ದೆಹಲಿಯ ಏಮ್ಸ್ ವೈದ್ಯರ ನೆರವು ಪೇಜಾವರ ಶ್ರೀಗಳ ಚಿಕಿತ್ಸೆಗೆ ದೆಹಲಿಯ ಏಮ್ಸ್ ವೈದ್ಯರ ನೆರವು

ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರ ಜೊತೆ ಮಣಿಪಾಲ ಆಸ್ಪತ್ರೆ ವೈದ್ಯರು ಸಂಪರ್ಕದಲ್ಲಿದ್ದಾರೆ. ಗಂಟೆಗೊಮ್ಮೆ ಶ್ರೀಗಳ ಆರೋಗ್ಯದ ಬಗ್ಗೆ ವಿವರಣೆ ನೀಡುತ್ತಿದ್ದಾರೆ. ಬೆಂಗಳೂರು ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು. ಬಿಜೆಪಿಯ ಹಲವು ನಾಯಕರು, ಆರ್‌ಎಸ್‌ಎಸ್‌ನ ಹಲವಾರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

English summary
Health condition of the Udupi Pejawar seer critical. He is admitted to KMC Manipal and in ICU.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X