ಹಾವನ್ನು ಹಿಡಿಯುವ ಸರಳ ವಿಧಾನವನ್ನು ಲೈವ್ ತೋರಿಸಿಕೊಟ್ಟ ಪೇಜಾವರ ಶ್ರೀಗಳು
ಉಡುಪಿ, ಜುಲೈ 30: ತಮ್ಮ ವಿಭಿನ್ನ ಅಭಿರುಚಿಗೆ ಹೆಸರಾಗಿರುವ ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು, ಸರಳವಾಗಿ ಹಾವನ್ನು ಹಿಡಿಯುವುದು ಹೇಗೆ ಎಂದು ತೋರಿಸಿಕೊಟ್ಟಿದ್ದಾರೆ.
Recommended Video
ನೀಲಾವರ ಗೋಶಾಲಾ ಮಠದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಪೇಜಾವರ ಶ್ರೀಗಳು, ಸನ್ಯಾಸತ್ವ, ಧಾರ್ಮಿಕ ಚಟುವಟಿಕೆಯ ಜೊತೆಗೆ, ಕೃಷಿ, ಹೈನುಗಾರಿಕೆಯಲ್ಲೂ ತಮ್ಮನ್ನು ತೊಡಗಿಸಿಕೊಂಡವರು. ಈಗ, ಕಡ್ಡಿಯ ಮೂಲಕ, ಹಾವನ್ನು ಹಿಡಿಯುವುದು ಹೇಗೆ ಎಂದು ಶ್ರೀಗಳು ತೋರಿಸಿಕೊಟ್ಟಿದ್ದಾರೆ.
ಸರಳವಾಗಿ ಮತ್ತು ಯಾವುದೇ ಅಪಾಯವಿಲ್ಲದೇ ಪರಕೆಯ ಕಡ್ಡಿಯಿಂದ, ಪ್ರಾತ್ಯಕ್ಷಿಕೆ ಮೂಲಕ, ಹಾವನ್ನು ಹಿಡಿದು, ಉರಗ ತಜ್ಞರೂ ನಾಚಿಸುವಂತೆ, ಪೇಜಾವರಶ್ರೀಗಳು ಎಲ್ಲರ ಹುಬ್ಬೇರಿಸಿದ್ದಾರೆ.

ತೆಂಗಿನಕಾಯಿ ಪರಕೆಯ ಕಡ್ಡಿಯ ಕೊನೆಯ ಭಾಗವನ್ನು ಉರುಳಿನ ರೀತಿಯಲ್ಲಿ ಮಾಡಿ, ನಾಗರಹಾವಿನ ಹೆಡೆಯ ಭಾಗಕ್ಕೆ ಅದನ್ನು ಸುತ್ತಿ, ಲೀಲಾಜಾಲವಾಗಿ ಗೋಣಿಚೀಲಕ್ಕೆ ಹಾವನ್ನು, ಗಾಯವಾಗದಂತೆ, ಪೇಜಾವರ ಶ್ರೀಗಳು ತುಂಬಿಸಿದ್ದಾರೆ.
ನೀಲಾವರ ಗೋಶಾಲೆಯ ಪುಷ್ಕರಣಿಯ ಮೆಟ್ಟಿಲಗಳ ಮೇಲೆ ಹಾವು ಹರಿದಾಡುತ್ತಿತ್ತು. ಈ ಹಾವನ್ನು ಕಂಡ ಶ್ರೀಗಳು, ತೆಂಗಿನ ಹಸಿಗರಿಯನ್ನು ಸೀಳಿ, ಕಡ್ಡಿಯ ಕೊನೆಯ ಭಾಗವನ್ನು ಉರುಳಿನಂತೆ ಗಂಟು ಹಾಕಿ, ಹಾವನ್ನು ಚೀಲಕ್ಕೆ ತುಂಬಿಸಿದ್ದಾರೆ. ಶ್ರೀಗಳು ಹಾವು ಹಿಡಿಯುವ ವಿಡಿಯೋ ಈಗ ವೈರಲ್ ಆಗಿದೆ.
ಒಂದು ತಿಂಗಳ ಹಿಂದೆ, ಅಡ್ಡಾಡುತ್ತಿದ್ದ ಹೆಬ್ಬಾವಿನ ಮರಿಯನ್ನು ಶ್ರೀಗಳು ರಕ್ಷಣೆ ಮಾಡಿದ್ದರು. ಹಾವಿನ ಮರಿಯನ್ನು ಹಿಡಿದು ಸಣ್ಣದೊಂದು ಪೈಪ್ ನಲ್ಲಿ ತುಂಬಿಸಿ, ನಂತರ ಅದನ್ನು ಮಠದ ತೋಟಕ್ಕೆ ಪೇಜಾವರ ಶ್ರೀಗಳು ತಂದು ಬಿಟ್ಟಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications