ಹಾವನ್ನು ಹಿಡಿಯುವ ಸರಳ ವಿಧಾನವನ್ನು ಲೈವ್ ತೋರಿಸಿಕೊಟ್ಟ ಪೇಜಾವರ ಶ್ರೀಗಳು
ಉಡುಪಿ, ಜುಲೈ 30: ತಮ್ಮ ವಿಭಿನ್ನ ಅಭಿರುಚಿಗೆ ಹೆಸರಾಗಿರುವ ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು, ಸರಳವಾಗಿ ಹಾವನ್ನು ಹಿಡಿಯುವುದು ಹೇಗೆ ಎಂದು ತೋರಿಸಿಕೊಟ್ಟಿದ್ದಾರೆ.
Recommended Video
ನೀಲಾವರ ಗೋಶಾಲಾ ಮಠದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಪೇಜಾವರ ಶ್ರೀಗಳು, ಸನ್ಯಾಸತ್ವ, ಧಾರ್ಮಿಕ ಚಟುವಟಿಕೆಯ ಜೊತೆಗೆ, ಕೃಷಿ, ಹೈನುಗಾರಿಕೆಯಲ್ಲೂ ತಮ್ಮನ್ನು ತೊಡಗಿಸಿಕೊಂಡವರು. ಈಗ, ಕಡ್ಡಿಯ ಮೂಲಕ, ಹಾವನ್ನು ಹಿಡಿಯುವುದು ಹೇಗೆ ಎಂದು ಶ್ರೀಗಳು ತೋರಿಸಿಕೊಟ್ಟಿದ್ದಾರೆ.
ಸರಳವಾಗಿ ಮತ್ತು ಯಾವುದೇ ಅಪಾಯವಿಲ್ಲದೇ ಪರಕೆಯ ಕಡ್ಡಿಯಿಂದ, ಪ್ರಾತ್ಯಕ್ಷಿಕೆ ಮೂಲಕ, ಹಾವನ್ನು ಹಿಡಿದು, ಉರಗ ತಜ್ಞರೂ ನಾಚಿಸುವಂತೆ, ಪೇಜಾವರಶ್ರೀಗಳು ಎಲ್ಲರ ಹುಬ್ಬೇರಿಸಿದ್ದಾರೆ.

ತೆಂಗಿನಕಾಯಿ ಪರಕೆಯ ಕಡ್ಡಿಯ ಕೊನೆಯ ಭಾಗವನ್ನು ಉರುಳಿನ ರೀತಿಯಲ್ಲಿ ಮಾಡಿ, ನಾಗರಹಾವಿನ ಹೆಡೆಯ ಭಾಗಕ್ಕೆ ಅದನ್ನು ಸುತ್ತಿ, ಲೀಲಾಜಾಲವಾಗಿ ಗೋಣಿಚೀಲಕ್ಕೆ ಹಾವನ್ನು, ಗಾಯವಾಗದಂತೆ, ಪೇಜಾವರ ಶ್ರೀಗಳು ತುಂಬಿಸಿದ್ದಾರೆ.
ನೀಲಾವರ ಗೋಶಾಲೆಯ ಪುಷ್ಕರಣಿಯ ಮೆಟ್ಟಿಲಗಳ ಮೇಲೆ ಹಾವು ಹರಿದಾಡುತ್ತಿತ್ತು. ಈ ಹಾವನ್ನು ಕಂಡ ಶ್ರೀಗಳು, ತೆಂಗಿನ ಹಸಿಗರಿಯನ್ನು ಸೀಳಿ, ಕಡ್ಡಿಯ ಕೊನೆಯ ಭಾಗವನ್ನು ಉರುಳಿನಂತೆ ಗಂಟು ಹಾಕಿ, ಹಾವನ್ನು ಚೀಲಕ್ಕೆ ತುಂಬಿಸಿದ್ದಾರೆ. ಶ್ರೀಗಳು ಹಾವು ಹಿಡಿಯುವ ವಿಡಿಯೋ ಈಗ ವೈರಲ್ ಆಗಿದೆ.
ಒಂದು ತಿಂಗಳ ಹಿಂದೆ, ಅಡ್ಡಾಡುತ್ತಿದ್ದ ಹೆಬ್ಬಾವಿನ ಮರಿಯನ್ನು ಶ್ರೀಗಳು ರಕ್ಷಣೆ ಮಾಡಿದ್ದರು. ಹಾವಿನ ಮರಿಯನ್ನು ಹಿಡಿದು ಸಣ್ಣದೊಂದು ಪೈಪ್ ನಲ್ಲಿ ತುಂಬಿಸಿ, ನಂತರ ಅದನ್ನು ಮಠದ ತೋಟಕ್ಕೆ ಪೇಜಾವರ ಶ್ರೀಗಳು ತಂದು ಬಿಟ್ಟಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications