ಪ್ರೊ.ಯು.ಆರ್. ರಾವ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ
ಉಡುಪಿ, ಜುಲೈ 24: ಇಸ್ರೋ ಮಾಜಿ ಅಧ್ಯಕ್ಷ, ಅಪ್ರತಿಮ ವಿಜ್ಞಾನಿ ಪ್ರೊ.ಯು.ಆರ್. ರಾವ್ ಅವರ ನಿಧನಕ್ಕೆ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ. 'ಭಾರತದ ಬಾಹ್ಯಾಕಾಶ ಕ್ಷೇತ್ರದ ಕಾರ್ಯಕ್ರಮಗಳಿಗೆ ರಾವ್ ಅವರ ಗಮನಾರ್ಹ ಕೊಡುಗೆಯನ್ನು ಎಂದಿಗೂ ಮರೆಯಲಾಗದು,' ಎಂದು ಅವರು ಹೇಳಿದ್ದಾರೆ .
"ಇದು ಅತ್ಯಂತ ದುಃಖದ ಘಟನೆಯಾಗಿದೆ. ರಾವ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿದ್ದರು. ಅವರೊಬ್ಬ ಕರ್ನಾಟಕ ಮತ್ತು ಉಡುಪಿ ಹೆಮ್ಮೆ ಪಡುವ ವಿಜ್ಞಾನಿ," ಎಂದು ಪೇಜಾವರ ಶ್ರೀಗಳು ಹೇಳಿದರು.

"ಆರೋಗ್ಯ ವಿಚಾರಿಸಲೆಂದು ಫೋನ್ ನಂಬರ್ ತರಿಸಿಕೊಂಡಿದ್ದೆ. ಆದರೆ ಅಷ್ಟರಲ್ಲೇ ಯು.ಆರ್ ರಾವ್ ಅಗಲಿದ್ದಾರೆ. ಇದು ನನ್ನ ಮನಸ್ಸಿಗೆ ಖೇದವಾಗಿದೆ," ಎಂದರು.
"ಅವರಿಗೆ ಪರಮಾತ್ಮ ಸದ್ಗತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಅವರಿಗೆ ಎಷ್ಟು ಗೌರವ ಕೊಡಬೇಕೋ ಅಷ್ಟು ಕೊಟ್ಟಿಲ್ಲ. ಆದ್ರೆ ಈಗ ಅದರ ಚರ್ಚೆ ಮಾಡಿ ಪ್ರಯೋಜನವಿಲ್ಲ. ಯು.ಆರ್ ರಾವ್ ಗೆ ಭಾರತೀಯರೆಲ್ಲರು ಕೃತಜ್ಞತೆ ಅರ್ಪಿಸಬೇಕು," ಎಂದು ಪೇಜಾವರ ಶ್ರಿ ಸಂತಾಪ ವ್ಯಕ್ತಪಡಿಸಿದರು.
ಪ್ರೊ.ಯು.ಆರ್. ರಾವ್ ಅವರು ಭಾನುವಾರ ತಡರಾತ್ರಿ 2.55ಕ್ಕೆ ಬೆಂಗಳೂರಿನ ಇಂದಿರಾ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಪತ್ನಿ ಯಶೋಧ ರಾವ್, ಪುತ್ರ ಮಧನ್ ರಾವ್, ಪುತ್ರಿ ಮಾಲಾ ರಾವ್ ರನ್ನು ಅವರು ಅಗಲಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications