ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಜಾಗೃತಿಗೆ "ಕೊರೊನಾಸುರ" ವೇಷ...

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 27: ನಗರದ ಮಾರುತಿ ವಿಥೀಕಾ ರಸ್ತೆಯಲ್ಲಿ ಇಂದು ವಿಚಿತ್ರ ವೇಷಧಾರಿಯೊಬ್ಬರು ಕಂಡುಬಂದರು. ದಿನಸಿ, ಇನ್ನಿತರ ಸಾಮಗ್ರಿಗಳನ್ನು ಖರೀದಿಸಲು ಬಂದ ಗ್ರಾಹಕರು ಒಮ್ಮೆಗೇ ಈ ವೇಷ ಕಂಡು ದಂಗಾದರು.

ಇದು, ಕೊರೊನಾ ಸೋಂಕು ಹರಡದಂತೆ ತಡೆಯಲು, ಜಾಗೃತಿ ಮೂಡಿಸಲು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮಾಡಿದ ಜಾಗೃತಿ ವೇಷವಾಗಿತ್ತು. ಸಾರ್ವಜನಿಕರಲ್ಲಿ ಕೊರೊನಾ ಕುರಿತು ತಿಳಿವಳಿಕೆ ಮೂಡಿಸಲು, "ಕೊರೊನಾಸುರ ಅಟ್ಟಹಾಸ" ಎನ್ನುವ ಅಣುಕು ಪ್ರದರ್ಶನ ನಡೆಯಿತು.

Udupi Person Dressed Like Coronavirus To Bring Awareness In People

 ಕೊರೊನಾ ಜಾಗೃತಿಗೆ ಮೈಸೂರಿನಲ್ಲಿ ಕಲಾವಿದನ ಕೊರೊನಾ ಜಾಗೃತಿಗೆ ಮೈಸೂರಿನಲ್ಲಿ ಕಲಾವಿದನ "ಕೊರೊನಾ" ವೇಷ

ಕೊರೊನಾಸುರ ವೇಷವನ್ನು ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಧರಿಸಿದ್ದರು. ಮುಖಕ್ಕೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯು ಹೊರಡಿಸಿರುವ ಆರೋಗ್ಯ ಸುರಕ್ಷಾ ವಿಧಾನಗಳನ್ನು ಪಾಲಿಸುವಂತೆ ನಿತ್ಯಾನಂದ ಒಳಕಾಡು ಅವರು ಈ ವೇಷ ಹಾಕಿ ಅರಿವು ಮೂಡಿಸಿದರು. ಸಾಮಗ್ರಿ ಖರೀದಿಸಲು ರಸ್ತೆಗೆ ಬಂದಿದ್ದ ಜನರನ್ನು ಈ ವೇಷ ಗಮನ ಸೆಳೆದದ್ದು ಮಾತ್ರ ಸುಳ್ಳಲ್ಲ.

English summary
Person dressed like coronavirus to bring awareness among people in udupi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X