ಉಡುಪಿಯ ಈ ಸಂಸ್ಥೆಯಲ್ಲಿ ಬ್ಯೂಟಿಷಿಯನ್, ಹೋಲಿಗೆ ಉಚಿತ ತರಬೇತಿ: ಸಂಪೂರ್ಣ ವಿವರ ತಿಳಿಯಿರಿ
ಉಡುಪಿ, ಮೇ 23: ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ವಿಶೇಷವಾಗಿ ಗುರುತಿಸಿಕೊಂಡಿರುವ ಜಿಲ್ಲೆ. ಶೈಕ್ಷಣಿಕವಾಗಿ ಉತ್ತಮ ಗುಣಮಟ್ಟದ ಶಿಕ್ಷಣವನ್ನ ನೀಡುವ ಸಾಕಷ್ಟು ವಿದ್ಯಾಸಂಸ್ಥೆಗಳು ಜಿಲ್ಲೆಯಲ್ಲಿದೆ. ಇಲ್ಲಿ ವಿದ್ಯಾ ಪಡೆದು ಹೊರಗೆ ಬರುವ ವಿದ್ಯಾರ್ಥಿಗಳಿಗೆ ಮುಂದಿನ ಜೀವನ ರೂಪಿಸಿಕೊಳ್ಳುವುದು ಹೇಗೆ ಎನ್ನುವ ಪ್ರಶ್ನೆ ಸಹಜ.
ಬಹುತೇಕ ವಿದ್ಯಾರ್ಥಿಗಳು ಪಟ್ಟಣದ ಹಾದಿ ಹಿಡಿದು ಬೆಂಗಳೂರು ಮುಂಬೈ, ದೆಹಲಿ ಅಂತ ಪ್ರದೇಶಗಳಿಗೆ ತೆರಳಿ ಕೆಲಸ ಹುಡುಕಿಕೊಳ್ಳುತ್ತಾರೆ. ಇನ್ನು ಕೆಲವು ವಿದ್ಯಾರ್ಥಿಗಳು ಕುಟುಂಬದ ಉದ್ಯಮ ಅಥವಾ ಉದ್ಯೋಗ ಏನಿದೆ ಅದನ್ನೇ ನಿರ್ವಹಿಸಿಕೊಂಡು ಹೋಗುತ್ತಾರೆ. ಹಾಗಾದರೆ ಉಳಿದ ವಿದ್ಯಾರ್ಥಿಗಳು ಏನು ಮಾಡಬೇಕು ಎನ್ನುವ ಪ್ರಶ್ನೆ ಮೂಡಿದಾಗ ನೆನಪಾಗುವುದು ಸ್ವಉದ್ಯೋಗ.

ಇಂತಹ ಸ್ವಉದ್ಯೋಗದ ಕನಸು ಹೊಂದಿರುವ ನೂರಾರು ಮಂದಿ ಆಕಾಂಕ್ಷೆಗಳಿಗೆ ಬ್ರಹ್ಮಾವರದ ರುಡ್ಸೆಟ್ ಸಂಸ್ಥೆ ಸಂಸ್ಥೆ, ತರಬೇತಿ ನೀಡುತ್ತಾ ಬಂದಿದೆ. ತರಬೇತಿಯ ಜೊತೆಗೆ ಉಚಿತ ಊಟ ವಸತಿಯನ್ನ ನೀಡುವ ಈ ಸಂಸ್ಥೆ ಇದುವರೆಗೂ ಲಕ್ಷಾಂತರ ಮಂದಿ ಯುವಕ ಯುವತಿಯರಿಗೆ ಸ್ವ ಉದ್ಯೋಗ ಮಾಡಲು ನೆರವಾಗಿದೆ ಎಂದರೆ ನೀವು ನಂಬಲೇಬೇಕು.
ಪ್ರತಿ ವರ್ಷವೂ ಕೂಡ ವರ್ಷದ 365 ದಿನವೂ ಕೂಡ ಇಲ್ಲಿ ವಿವಿಧ ಸ್ವಉದ್ಯೋಗ ಆಸಕ್ತರಿಗೆ ತರಬೇತಿ ಉಚಿತವಾಗಿ ನೀಡಲಾಗುತ್ತಿದೆ. ಕೋಳಿ ಕುರಿ ಸಾಕಣೆಯಿಂದ ಹಿಡಿದು ಕಂಪ್ಯೂಟರ್ ಹಾರ್ಡ್ವೇರ್ ನಿರ್ವಹಣೆಯ ಕುರಿತು ಕೂಡ ತರಬೇತಿ ನೀಡಲಾಗುತ್ತಿದೆ. ಮುಖ್ಯವಾಗಿ ಮೋಟರ್ ರಿವೈಂಡಿಂಗ್, ಎಸಿ ಫ್ರಿಡ್ಜ್ ರಿಪೇರಿ, ಮೊಬೈಲ್ ರಿಪೇರಿ, ಬ್ಯೂಟಿಷಿಯನ್ ತರಬೇತಿ, ಹೋಲಿಗೆ ತರಬೇತಿ ಹೀಗೆ ಹಲವಾರು ತರಬೇತಿಗಳನ್ನು ಇಲ್ಲಿ ಉಚಿತವಾಗಿ ನೀಡಲಾಗುತ್ತಿದೆ.

ಬ್ರಹ್ಮವರದ ರೋಡ್ ಹೊರ ಜಿಲ್ಲೆಯಿಂದಲೂ ಕೂಡ ಸಾಕಷ್ಟು ಜನ ಉದ್ಯೋಗ ಆಕಾಂಕ್ಷಿಗಳು ಬಂದು ತರಬೇತಿ ಪಡೆದು ತೆರಳುತ್ತಾರೆ. ಇಲ್ಲಿ ತರಬೇತಿಯ ಜೊತೆಗೆ ಬ್ಯಾಂಕ್ ವ್ಯವಹಾರದ ನಿರ್ವಹಣೆ ಕುರಿತು ಕೂಡ ಜ್ಞಾನವನ್ನು ನೀಡಲಾಗುತ್ತಿರುವುದು ಸ್ವಉದ್ಯೋಗ ಮಾಡುವ ಯುವಕ ಯುವತಿಯರಿಗೆ ಸಹಾಯವಾಗಿದೆ.
ಇನ್ನು ಉದ್ಯೋಗದ ತರಬೇತಿಯ ಜೊತೆಗೆ ಯಾವುದೇ ಉದ್ಯೋಗ ಮಾಡಲು ಬಯಸುವ ಯುವಕ ಯುವತಿಯರಿಗೆ ಸಂಬಂಧಪಟ್ಟ ಬ್ಯಾಂಕ್ನಿಂದ ಲೋನ್ ಮಾಡಿ ಕೊಡುವ ವ್ಯವಸ್ಥೆಯನ್ನು ಕೂಡ ಸಂಸ್ಥೆಯಿಂದ ಮಾಡಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ಈ ಸಂಸ್ಥೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೂಡ ಕಾರ್ಯನಿರ್ವಹಿಸಿರುವುದು ಉದ್ಯೋಗ ಆಕಾಂಕ್ಷಿಗಳಿಗೆ ನೆರವವಾಗುತ್ತಿದೆ.
ಒಟ್ಟಾರೆಯಾಗಿ ಧರ್ಮ ಕ್ಷೇತ್ರವೆಂದು ಹೆಸರು ಪಡೆದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರನ ಹೆಸರಿನಲ್ಲಿ ನಡೆಯುತ್ತಿರುವ ಅನ್ನದಾನ ವಿದ್ಯಾ ದಾನ ಜೊತೆಗೆ ರುಡ್ಸೆಟ್ ಸಂಸ್ಥೆ ಉದ್ಯೋಗ ದಾನ ನೀಡುತ್ತಿದೆ ಎಂದರೆ ತಪ್ಪಾಗಲಾರದು. ಈ ಸಂಸ್ಥೆಯಿಂದ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯಲಿ ಸ್ವ ಉದ್ಯೋಗದ ಕನಸು ಕಾಣುತ್ತಿರುವ ಯುವಕ ಯುವತಿಯರಿಗೆ ಕನಸು ನನಸಾಗಲು ನೆರವಾಗಲಿ ಎಂದು ಆಶಿಸೋಣ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications