ಉಡುಪಿ ಎಸ್‌ಪಿ ಅಣ್ಣಾ ಮಲೈ ವರ್ಗಾವಣೆ

ಉಡುಪಿ, ಜುಲೈ 26 : ಕರ್ನಾಟಕ ಸರ್ಕಾರ ಮಂಗಳವಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾ ಮಲೈ ಅವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಂಗಳವಾರ ಸಂಜೆ ಈ ಕುರಿತು ಆದೇಶ ಹೊರಬಿದ್ದಿದೆ. ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಚಿಕ್ಕಮಗಳೂರು ಎಸ್‌ಪಿ ಸಂತೋಷ್ ಬಾಬು ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.[24 ಐಎಎಸ್ ಅಧಿಕಾರಿಗಳ ವರ್ಗಾವಣೆ, ಪಟ್ಟಿ ಇಲ್ಲಿದೆ]

SP Annamalai

ಸಂತೋಷ್ ಬಾಬು ಅವರಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾ ಮಲೈ ಅವರನ್ನು ನೇಮಿಸಲಾಗಿದೆ. ಗದಗದ ಎಸ್‌ಪಿ ಕೆ.ಟಿ.ಬಾಲಕೃಷ್ಣ ಅವರನ್ನು ಉಡುಪಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.[ಕಲ್ಲಪ್ಪ ಸಾವಿಗೆ ಕಿರುಕುಳ ಕಾರಣವಲ್ಲ: ಎಸ್ಪಿ ಸಂತೋಷ್]

ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲಾಧಿಕಾರಿ ಡಾ.ವಿಶಾಲ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಜುಲೈ 22ರಂದು ಟಿ.ವೆಂಕಟೇಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.[ನಾ ಉಡುಪಿ ಬಿಟ್ಟು ಎಲ್ಲಿಗೂ ಹೋಗೊಲ್ಲ: ಎಸ್ ಪಿ ಅಣ್ಣಾಮಲೈ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+