ಉಡುಪಿ ಪರ್ಯಾಯಕ್ಕೆ ಕ್ಷಣಗಣನೆ: ಕಣ್ಮನ ಸೆಳೆಯುವ ಕೃಷ್ಣನಗರಿ ಚಿತ್ರಗಳು...
ಉಡುಪಿ, ಜನವರಿ 17: ಎರಡು ವರ್ಷಕ್ಕೊಮ್ಮೆ ಬರುವ ನಾಡಹಬ್ಬ ಉಡುಪಿ ಪರ್ಯಾಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೃಷ್ಣನಗರಿಯಲ್ಲಿ ಎಲ್ಲೆಲ್ಲೂ ತಳಿರು ತೋರಣ, ಸ್ವಾಗತ ಗೋಪುರ, ಕಮಾನುಗಳು, ದಾರಿಯುದ್ದಕ್ಕೂ ಸ್ವಾಗತ ಕೋರುವ ಬ್ಯಾನರ್ಗಳು. ಕತ್ತಲಾವರಿಸುತ್ತಿದ್ದಂತೆ ವಿದ್ಯುದ್ದೀಪಾಲಂಕಾರದಿಂದ ಕಣ್ಣು ಕೋರೈಸುವ ಕೃಷ್ಣಮಠ, ರಥಬೀದಿ...
ಬನ್ನಿ... ಇಂದು ರಾತ್ರಿ ಉಡುಪಿ ನಗರಿಯಲ್ಲಿ ಪ್ರಾರಂಭಗೊಳ್ಳುವ ಪರ್ಯಾಯ ಮಹೋತ್ಸವದ ತಯಾರಿಯನ್ನೊಮ್ಮೆ ಕಣ್ತುಂಬಿಕೊಳ್ಳೋಣ...

ಅದಮಾರು ಶ್ರೀಗಳಿಗೆ ಕೃಷ್ಣ ಪೂಜಾಧಿಕಾರ ಹಸ್ತಾಂತರ
ಉಡುಪಿ ಪರ್ಯಾಯಕ್ಕೆ ಪರ್ಯಾಯವೇ ಸಾಟಿ... ಕೃಷ್ಣಮಠ ಅಂದರೆ ಅದು ಸಂಪ್ರದಾಯಗಳ ಕಾಶಿ... ಕೃಷ್ಣನ ಪೂಜಾಧಿಕಾರ ಓರ್ವ ಮಠಾಧೀಶರಿಂದ ಇನ್ನೋರ್ವ ಮಠಾಧೀಶರಿಗೆ ಹಸ್ತಾಂತರ ಪ್ರಕ್ರಿಯೆಯೇ ಪರ್ಯಾಯ ಮಹೋತ್ಸವ. ಇಂದು ರಾತ್ರಿ ಪಲಿಮಾರು ಶ್ರೀಗಳಿಂದ ಅದಮಾರು ಶ್ರೀಗಳಿಗೆ ಕೃಷ್ಣ ಪೂಜಾಧಿಕಾರ ಹಸ್ತಾಂತರಗೊಳ್ಳಲಿದೆ. ಇಲ್ಲಿ ಅಧಿಕಾರ ಹಸ್ತಾಂತರದ ಧಾರ್ಮಿಕ ವಿಧಿ ವಿಧಾನಗಳು ಮಾತ್ರ ಇರುವುದಿಲ್ಲ. ಜೊತೆಗೆ ಸಾಂಸ್ಕೃತಿಕ, ಸಾಹಿತ್ಯಿಕ ವೈಭವಕ್ಕೂ ಪರ್ಯಾಯ ಮಹೋತ್ಸವ ವೇದಿಕೆಯಾಗುತ್ತದೆ.

ಎರಡು ವರ್ಷಕ್ಕೊಮ್ಮೆ ನಡೆಯುವ ಮಹೋತ್ಸವ
ಎರಡು ವರ್ಷಕ್ಕೊಮ್ಮೆ ಜನವರಿಯಲ್ಲಿ ನಡೆಯುವ ಪರ್ಯಾಯ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಕೃಷ್ಣ ಭಕ್ತರು ಆಗಮಿಸುತ್ತಾರೆ. ಇವತ್ತು ರಾತ್ರಿಯಿಂದ ಪ್ರಾರಂಭಗೊಳ್ಳುವ ಪರ್ಯಾಯ ಮಹೋತ್ಸವ ನಾಳೆ ಸಂಜೆ ಪರ್ಯಾಯ ದರ್ಬಾರ್ ತನಕ ಮುಂದುವರೆಯಲಿದೆ. ಈ ಒಂದು ಅವಿಸ್ಮರಣೀಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕೃಷ್ಣನಗರಿ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ.

ಇಂದು ಪರ್ಯಾಯಕ್ಕೆ ಅಧೀಕೃತ ಚಾಲನೆ
ಇವತ್ತು ಸಂಜೆ ಎರಡು ವರ್ಷದ ಪರ್ಯಾಯದಿಂದ ನಿರ್ಗಮಿಸುತ್ತಿರುವ ಪಲಿಮಾರು ಮಠಾಧೀಶರಿಗೆ ಪೌರ ಸನ್ಮಾನ ಕಾರ್ಯಕ್ರಮದೊಂದಿಗೆ ಪರ್ಯಾಯ ಮಹೋತ್ಸವ ಅಧಿಕೃತವಾಗಿ ಪ್ರಾರಂಭಗೊಳ್ಳಲಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ಪರ್ಯಾಯದ ಐತಿಹಾಸಿಕ ಮೆರವಣಿಗೆ ನಗರದ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಕೃಷ್ಣಮಠದಲ್ಲಿ ಸಮಾರೋಪಗೊಳ್ಳಲಿದೆ.

ವಿದ್ಯುದ್ದೀಪಗಳಿಂದ ಕಂಗೊಳಿಸುವ ಮಠ
ಬಳಿಕ ಪರ್ಯಾಯದ ಬಹುಮುಖ್ಯ ವಿಧಿವಿಧಾನಗಳು ಕೃಷ್ಣಮಠದಲ್ಲಿ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಇಡೀ ಕೃಷ್ಣನಗರಿ ಅಪೂರ್ವ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದ್ದು ಭಕ್ತರನ್ನು ಕೈ ಬೀಸಿ ಕರೆಯುತ್ತಿದೆ. ಪರ್ಯಾಯದ ದಿನ ಉಡುಪಿ ನಿದ್ರಿಸುವುದಿಲ್ಲ ಎಂಬ ಮಾತಿದೆ. ಕಳೆದ ಕೆಲವು ದಿನಗಳಿಂದ ದೂರದೂರಿನ ಭಕ್ತರು ಉಡುಪಿಯತ್ತ ಧಾವಿಸುತ್ತಿದ್ದು ಪರ್ಯಾಯವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications