ಚಕ್ರಾಸನ ರೇಸ್ ನಲ್ಲಿ ವಿಶ್ವದಾಖಲೆ ಬರೆದ ಉಡುಪಿಯ ತನುಶ್ರೀ
ಉಡುಪಿ, ಫೆಬ್ರವರಿ 23: ಸರಣಿ ದಾಖಲೆಗಳ ಸರದಾರಿಣಿ ತನುಶ್ರೀ ಪಿತ್ರೋಡಿಗೆ ಮತ್ತೊಂದು ಗರಿ ಮುಡಿಗೇರಿದ್ದು, 100 ಮೀಟರ್ ಓಟವನ್ನು ಚಕ್ರಾಸನದ ಮೂಲಕ ಕ್ರಮಿಸಿ ವಿಶ್ವದಾಖಲೆ ಬರೆದಿದ್ದಾರೆ.
ಉಡುಪಿಯ ಉದ್ಯಾವರದಲ್ಲಿ ನಡೆದ ಚಕ್ರಾಸನ ರೇಸ್ ನಲ್ಲಿ ಭಾಗವಹಿಸುವುದರ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಐದನೇ ಬಾರಿ ತನುಶ್ರಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ಇಟಲಿಯ ರೋಮ್ ನಗರದಲ್ಲೂ ಪ್ರದರ್ಶನ ನೀಡಿ ತನುಶ್ರೀ ಸೈ ಎನಿಸಿಕೊಂಡಿದ್ದಳು.
ಈ ಹಿಂದೆ ತಾನೇ ನಾಲ್ಕು ವಿಶ್ವ ದಾಖಲೆಗಳನ್ನು ಬರೆದಿದ್ದ ತನುಶ್ರೀ ಪಿತ್ರೋಡಿಯವರಿಂದ ಈಗ ಮತ್ತೊಂದು ದಾಖಲೆ ನಿರ್ಮಾಣಗೊಂಡಿದೆ.

2017ರಲ್ಲಿ ನಿರಾಲಂಬ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ದಾಖಲೆ, 2018-19 ರಲ್ಲಿ ಜಿಮ್ನಾಸ್ಟಿಕ್ ನಲ್ಲಿ ಮತ್ತೆರಡು ದಾಖಲೆ ಬರೆದು ಸುದ್ದಿಯಾಗಿದ್ದ ಪುಟ್ಟ ಪೋರಿ.
2019 ರಲ್ಲಿ ಒಂದು ನಿಮಿಷಕ್ಕೆ 61 ಧನುರಾಸನ ರೋಲ್ ಮಾಡಿ ನಾಲ್ಕನೇ ದಾಖಲೆ ಮಾಡಿದ್ದರು. ಈ ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಉಡುಪಿ ಜಿಲ್ಲೆಯ ಜನರು ಸಾಕ್ಷಿಯಾಗಿದ್ದಾರೆ.

ತನುಶ್ರೀ ಸಾಧನೆಗೆ ಗಣ್ಯರಿಂದ ಅಭಿನಂದನೆಯ ಸುರಿಮಳೆ ಬಂದಿವೆ. ""ವಿಶ್ವದಲ್ಲೇ ಉಡುಪಿಯ ಹೆಸರನ್ನು ತನುಶ್ರಿ ಎತ್ತಿಹಿಡಿದಿದ್ದಾಳೆ'' ಎಂದು ಮಾಜಿ ಸಚಿವ ಪ್ರಮೋದ ಮಧ್ವರಾಜ್ ಅಭಿನಂದಿಸಿದ್ದಾರೆ.
ನೃತ್ಯ ಮತ್ತು ಯೋಗದಲ್ಲಿ ವಿಶೇಷ ಸಾಧನೆ ಮಾಡಿರುವ ತನುಶ್ರಿಗೆ "ಯೋಗರತ್ನ' ಬಿರುದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications