ಚಕ್ರಾಸನ ರೇಸ್ ನಲ್ಲಿ ವಿಶ್ವದಾಖಲೆ ಬರೆದ ಉಡುಪಿಯ ತನುಶ್ರೀ
ಉಡುಪಿ, ಫೆಬ್ರವರಿ 23: ಸರಣಿ ದಾಖಲೆಗಳ ಸರದಾರಿಣಿ ತನುಶ್ರೀ ಪಿತ್ರೋಡಿಗೆ ಮತ್ತೊಂದು ಗರಿ ಮುಡಿಗೇರಿದ್ದು, 100 ಮೀಟರ್ ಓಟವನ್ನು ಚಕ್ರಾಸನದ ಮೂಲಕ ಕ್ರಮಿಸಿ ವಿಶ್ವದಾಖಲೆ ಬರೆದಿದ್ದಾರೆ.
ಉಡುಪಿಯ ಉದ್ಯಾವರದಲ್ಲಿ ನಡೆದ ಚಕ್ರಾಸನ ರೇಸ್ ನಲ್ಲಿ ಭಾಗವಹಿಸುವುದರ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಐದನೇ ಬಾರಿ ತನುಶ್ರಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ಇಟಲಿಯ ರೋಮ್ ನಗರದಲ್ಲೂ ಪ್ರದರ್ಶನ ನೀಡಿ ತನುಶ್ರೀ ಸೈ ಎನಿಸಿಕೊಂಡಿದ್ದಳು.
ಈ ಹಿಂದೆ ತಾನೇ ನಾಲ್ಕು ವಿಶ್ವ ದಾಖಲೆಗಳನ್ನು ಬರೆದಿದ್ದ ತನುಶ್ರೀ ಪಿತ್ರೋಡಿಯವರಿಂದ ಈಗ ಮತ್ತೊಂದು ದಾಖಲೆ ನಿರ್ಮಾಣಗೊಂಡಿದೆ.

2017ರಲ್ಲಿ ನಿರಾಲಂಬ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ದಾಖಲೆ, 2018-19 ರಲ್ಲಿ ಜಿಮ್ನಾಸ್ಟಿಕ್ ನಲ್ಲಿ ಮತ್ತೆರಡು ದಾಖಲೆ ಬರೆದು ಸುದ್ದಿಯಾಗಿದ್ದ ಪುಟ್ಟ ಪೋರಿ.
2019 ರಲ್ಲಿ ಒಂದು ನಿಮಿಷಕ್ಕೆ 61 ಧನುರಾಸನ ರೋಲ್ ಮಾಡಿ ನಾಲ್ಕನೇ ದಾಖಲೆ ಮಾಡಿದ್ದರು. ಈ ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಉಡುಪಿ ಜಿಲ್ಲೆಯ ಜನರು ಸಾಕ್ಷಿಯಾಗಿದ್ದಾರೆ.

ತನುಶ್ರೀ ಸಾಧನೆಗೆ ಗಣ್ಯರಿಂದ ಅಭಿನಂದನೆಯ ಸುರಿಮಳೆ ಬಂದಿವೆ. ""ವಿಶ್ವದಲ್ಲೇ ಉಡುಪಿಯ ಹೆಸರನ್ನು ತನುಶ್ರಿ ಎತ್ತಿಹಿಡಿದಿದ್ದಾಳೆ'' ಎಂದು ಮಾಜಿ ಸಚಿವ ಪ್ರಮೋದ ಮಧ್ವರಾಜ್ ಅಭಿನಂದಿಸಿದ್ದಾರೆ.
ನೃತ್ಯ ಮತ್ತು ಯೋಗದಲ್ಲಿ ವಿಶೇಷ ಸಾಧನೆ ಮಾಡಿರುವ ತನುಶ್ರಿಗೆ "ಯೋಗರತ್ನ' ಬಿರುದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ನೀಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications