ಉಡುಪಿ: ಸೋಮೇಶ್ವರ ಹೋಟೆಲಿನ 'ಭಕ್ತ' ಇನ್ನಿಲ್ಲ
ಉಡುಪಿ, ಡಿ.7: ಆಗುಂಬೆ ಘಾಟ್ ಇಳಿದು ಸೋಮೇಶ್ವರದಲ್ಲಿನ ಹೋಟೆಲಿನಲ್ಲಿ ನೀರ್ ದೋಸೆ ರುಚಿ ಸವಿಯುವುದೇ ಆನಂದ. ಗ್ರಾಹಕರಿಗೆ ಇಂಥ ರುಚಿ ಪರಿಚಯಿಸಿದ ಮನೋಹರ್ ಭಕ್ತ ಅವರು ಭಾನುವಾರ ಮುಂಜಾನೆ ದುರ್ಮರಣ ಹೊಂದಿದ್ದಾರೆ.
ಸೋಮೇಶ್ವರದ ಜನಪ್ರಿಯ ಹೋಟೆಲ್ ಗಳ ಪೈಕಿ ಮನೋಹರ್ ಭಕ್ತ ಅವರ ಹೋಟೆಲ್ ಕೂಡಾ ಒಂದಾಗಿದೆ. ಮನೋಹರ್ ಅವರು ಕುಟುಂಬ ಸಮೇತ ಮುಲ್ಕಿಯ ವೆಂಕಟರಮಣ ದೇಗುಲಕ್ಕೆ ಹೋಗಿ ಹಿಂತಿರುಗುವಾಗ ರಸ್ತೆ ಅಪಘಾತದಲ್ಲಿ ಮನೋಹರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆ ಹೆಬ್ರಿಯ ಶಿವಪುರದಲ್ಲಿ ಮನೋಹರ್ ಅವರಿದ್ದ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಮನೋಹರ್ ಅವರ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇಬ್ಬರನ್ನು ಮಣಿಪಾಲ್ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮನೋರಮ ಭಕ್ತ(62), ಮನೋಹರ್ ಭಕ್ತ(42) ಮತ್ತು ಸ್ವಾತಿ ಭಕ್ತ(32) ಸಾವನ್ನಪ್ಪಿದ್ದಾರೆ.
ಮನೋಹರ್ ಸ್ವಾತಿ ದಂಪತಿ ಮಕ್ಕಳಾದ 8 ವರ್ಷದ ಮಾನಸ ಮತ್ತು 6 ವರ್ಷದ ಸಹನಾ ಅಪಾಯದಿಂದ ಪಾರಾಗಿದ್ದಾರೆ.ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ['ಭಕ್ತ' ಅವರ ಮಗಳು ಮೃತ]
ಮನೋಹರ್ ಅವರಿದ್ದ ಕಾರು ಮುಲ್ಕಿಯಿಂದ ಸೋಮೇಶ್ವರಕ್ಕೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಉಡುಪಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿ ಈ ಕಾರಿಗೆ ಡಿಕ್ಕಿ ಹೊಡೆದಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications