ಕಣ್ಣು ಕಾಣದಿದ್ದರೇನಂತೆ, ಚೆಸ್ ಬೋರ್ಡ್ ಮೇಲೆ ಇವರೇ ಚಾಂಪಿಯನ್
ಇತ್ತೀಚೆಗೆ ಮಣಿಪಾಲದಲ್ಲಿ ಅಂಧರ ಏಷ್ಯಾ ಪೆಸಿಫಿಕ್ ಚೆಸ್ ಪಂದ್ಯಾವಳಿ ನಡೆದಿತ್ತು. ಇದರಲ್ಲಿ ಕರ್ನಾಟಕದ ಕಿಶನ್ ಗಂಗೊಳ್ಳಿ 7 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.
ಉಡುಪಿ, ಏಪ್ರಿಲ್ 3: ಸಾಧನೆಗೆ ನ್ಯೂನ್ಯತೆಗಳು ಅಡ್ಡಿಯಲ್ಲ ಎಂಬುದನ್ನು ಹಲವಾರು ಜನರು ನಿರೂಪಿಸಿದ್ದಾರೆ. ಅವರದೇ ಸಾಲಿನಲ್ಲಿ ನಿಲ್ಲುವ ಕಥೆ ಉಡುಪಿಯ ಕಿಶನ್ ಗಂಗೊಳ್ಳಿಯದ್ದು. ಕಣ್ಣು ಕುರುಡಾದರೂ ಈತ ಜನರೆಲ್ಲಾ ಕಣ್ಣು ತೆರೆದು ನೋಡುವ ಸಾಧನೆಯನ್ನು ಇವರು ಮಾಡಿದ್ದಾರೆ.
ಇತ್ತೀಚೆಗೆ ಮಣಿಪಾಲದಲ್ಲಿ ಅಂಧರ ಏಷ್ಯಾ ಪೆಸಿಫಿಕ್ ಚೆಸ್ ಪಂದ್ಯಾವಳಿ ನಡೆದಿತ್ತು. ಇದರಲ್ಲಿ ಕರ್ನಾಟಕದಿಂದ ಕಿಶನ್ ಗಂಗೊಳ್ಳಿ ಕೂಡಾ ಭಾಗವಹಿಸಿದ್ದಾರೆ. ಈ ಅಂಧರ ಚೆಸ್ ಪಂದ್ಯಾವಳಿಯಲ್ಲಿ ಕಿಶನ್ 7 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.[ಉಡುಪಿ: ಆಸ್ಪತ್ರೆ ಸೇರಿದ ಗರ್ಭಿಣಿಯನ್ನು ಕೆಲಸದಿಂದ ಕಿತ್ತೊಗೆದ ಕಾಲೇಜು]
ಈ ಮೂಲಕ 50 ಸಾವಿರ ರೂಪಾಯಿ ನಗದು ಹಾಗೂ ಚಿನ್ನದ ಪದಕವನ್ನು ಕಿಶನ್ ಕೊರಳೇರಿಸಿಕೊಂಡಿದ್ದಾರೆ. ಅಂಧ ಮಗನ ಚೆಸ್ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿದ ಕಿಶನ್ ತಾಯಿ ಈತನ ಚದುರಂಗದಲ್ಲಿ ಸಾಧನೆಯ ನಡೆಗೆ ಮುನ್ನುಡಿ ಬರೆದಿದ್ದಾರೆ.

ನಾಲ್ಕು ಬಾರಿ ರಾಷ್ಟ್ರೀಯ ಚಾಂಪಿಯನ್
ಭಾರತದ ಆಟಗಾರರಾದ ಕಿಶನ್ ಗಂಗೊಳ್ಳಿ ಅಂಧರ ಏಷ್ಯನ್ ಚೆಸ್ ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಆದರೆ ಇದೊಂದೇ ಇವರ ಸಾಧನೆಯಲ್ಲ. ಈ ಹಿಂದೆಯೂ ಚದುರಂಗ ಕ್ರೀಡೆಯಲ್ಲಿ ನಾಲ್ಕು ಬಾರಿ ಅಂಧರ ರಾಷ್ಟ್ರೀಯ ಚಾಂಪಿಯನ್ ಕಿರೀಟವನ್ನು ಕಿಶನ್ ಮುಡಿಗೇರಿಸಿಕೊಂಡಿದ್ದರು.

ಕುಂದಾಪುರ ಹುಟ್ಟೂರು
ಕಿಶನ್ ಗಂಗೊಳ್ಳಿ ಮೂಲತಃ ಕುಂದಾಪುರ ತಾಲೂಕು ಗಂಗೊಳ್ಳಿಯವರು. ಕಿಶನ್ ತಂದೆ ಕೆನರಾ ಬ್ಯಾಂಕ್ ಉದ್ಯೋಗಿ ರವೀಂದ್ರ. ಸದ್ಯ ಅವರೀಗ ಶಿವಮೊಗ್ಗದ ವಿನೋಬಾ ನಗರದಲ್ಲಿ ನೆಲೆಸಿದ್ದಾರೆ. ತಾಯಿ ಶಿವಮೊಗ್ಗದಲ್ಲಿ ಬ್ಯೂಟೀಶಿಯನ್ ಆಗಿದ್ದಾರೆ.[ಉಡುಪಿ ಡಿಸಿ, ಎಸಿ ಕೊಲೆ ಯತ್ನ, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ]

ರ್ಯಾಂಕ್ ವಿದ್ಯಾರ್ಥಿ
ಹುಟ್ಟಿನಿಂದಲೇ ಅಂಧರಾದ ಕಿಶನ್ ಶಿವಮೊಗ್ಗದ ಕುವೆಂಪು ವಿವಿ ಯಿಂದ ಇಕನಾಮಿಕ್ಸ್ ನಲ್ಲಿ ಎಂ. ಎ ಪದವಿಯನ್ನು ಎರಡನೇ ರಾಂಕ್ ನೊಂದಿಗೆ ಪಡೆದ ಪ್ರತಿಭಾವಂತ ವಿದ್ಯಾರ್ಥಿ. ಕಲಿಕೆಯಲ್ಲಾಗಲಿ, ಚೆಸ್ ನಲ್ಲಾಗಲಿ ಅವರಿಗೆ ಅಂಧತ್ವ ಎಂದೂ ಅಡ್ಡಿಯಾಗಿ ಪರಿಣಮಿಸಿಲ್ಲ.

ಕಿಶನ್ ಸಾಧನೆ
2013ರಿಂದ 2017ರ ವರೆಗೆ ಸತತ ನಾಲ್ಕು ಬಾರಿ ಚೆಸ್ ನಲ್ಲಿ ಅಂಧರ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆದ್ದವರು ಕಿಶನ್. 2012 ರಲ್ಲಿ ಚೆನ್ನೈ ನಲ್ಲಿ ನಡೆದ ಚೆಸ್ ಒಲಂಪಿಯಾಡ್ ನಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಚಿನ್ನದ ಪದಕ ಜಯಿಸಿದ ದೇಶದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಕಿಶನ್ ಹೇಳುವುದೇನು?
ಈ ಬಗ್ಗೆ ಪ್ರತಿಕ್ರಿಯಿಸಿದ ಕಿಶನ್, ಟೂರ್ನಿ ಕಠಿಣ ಸ್ಪರ್ಧೆಯಿಂದ ಕೂಡಿದ್ದರಿಂದ ಗೆಲುವು ಸುಲಭವಾಗಿರಲಿಲ್ಲ. ಇದೇ ವರ್ಷದ ಜೂನ್ ತಿಂಗಳಿನಲ್ಲಿ ನಡೆಯುವ ಚೆಸ್ ಒಲಂಪಿಯಾಡ್ನಲ್ಲಿ ಭಾಗವಹಿಸಿ ಪದಕ ಗೆಲ್ಲುವುದು ನನ್ನ ಮುಂದಿನ ಗುರಿ. ಇದಕ್ಕಾಗಿ ಕಠಿಣ ಅಭ್ಯಾಸ ಮಾಡುತ್ತಿದ್ದೇನೆ. ಮುಂದೆಯೂ ಕ್ರೀಡಾ ಬದುಕಿನಲ್ಲಿ ಬಹಳಷ್ಟು ಸಾಧನೆಯನ್ನು ಮಾಡಲು ಇಚ್ಛಿಸಿದ್ದೇನೆ. ನನ್ನೆಲ್ಲಾ ಸಾಧನೆಗೆ ನನ್ನ ತಂದೆ ತಾಯಿ ಆಶೀರ್ವಾದ ಹಾಗೂ ಪ್ರೋತ್ಸಾಹ ಕಾರಣ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications