ಶೌಚಗೃಹದಲ್ಲಿ ವಿಡಿಯೋ ಪ್ರಕರಣ: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ – ಜಿ. ಪರಮೇಶ್ವರ್ ಕಿಡಿ
ಉಡುಪಿ ಜುಲೈ 27: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ ಎಂದು ಗೃಹ ಇಲಾಖೆ ಸಚಿವ ಜಿ. ಪರಮೇಶ್ವರ್ ಗುಡುಗಿದ್ದಾರೆ.
ಕಳೆದೊಂದು ವಾರದ ಹಿಂದೆ ಶೌಚಗೃಹದಲ್ಲಿ ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ ಮಾಡಿದ ಉಡುಪಿಯ ಪ್ರತಿಷ್ಠಿತ ನೇತ್ರಾ ಜ್ಯೋತಿ ಕಾಲೇಜಿಗೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರಂ ಭೇಟಿ ನೀಡಿದ್ದಾರೆ. ಈ ಬಗ್ಗೆ ಗೃಹ ಇಲಾಖೆ ಸಚಿವ ಪ್ರತಿಕ್ರಿಯೆ ನೀಡುವ ಮೂಲಕ ಕಿಡಿ ಕಾರಿದ್ದಾರೆ.

ಪೊಲೀಸರಿಗೆ ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ಹೇಳಿದ್ದೇನೆ. ಅವರು ದೂರು ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ರಾಷ್ಟ್ರೀಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ: ಇಲ್ಲಿಗೆ ಬಂದಿದ್ದಾರೆ ಎಂದು ಪರಮೇಶ್ವರ್ ಕಿಡಿ ಕಾರಿದ್ದಾರೆ.
ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಹೇಳಿಲ್ಲ. ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ. ಈ ಪ್ರಕರಣದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಅವರು ಸಸ್ಪೆಂಡ್ ಮಾಡಿದ್ದಾರೆ. ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮಹಿಳಾ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ಅರೆನಗ್ನ ವಿಡಿಯೋಗಳನ್ನು ಮಾಡಿ ಮುಸ್ಲಿಂ ಗುಂಪುಗಳಿಗೆ ಹರಿದು ಬಿಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಕಾಲೇಜು ಆಡಳಿತ ಮಂಡಳಿಯ ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ವಿಡಿಯೋ ಡಿಲೀಟ್ ಆಗಿದೆಯೆಮದು ಪ್ರಕರಣವನ್ನು ಮುಚ್ಚಿಹಾಕಿದ್ದರು.
ಆದರೆ, ಈ ಬಗ್ಗೆ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಳ್ಳಾಗಿದೆ.
ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್: ವಿಡಿಯೋ ಮಾಡಿದ ಮುಸ್ಲಿಂ ಸಮುದಾಯದ ಮೂವರು ವಿದ್ಯಾರ್ಥಿಗಳಾದ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಆಲಿಯಾ ವಿರುದ್ಧ ಹಾಗೂ ನೇತ್ರಜ್ಯೋತಿ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಸೆಕ್ಷನ್ 509,204,175,34, ಸೇರಿ ವಿವಿಧ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.
ಈ ಮೂಲಕ ರಾಜ್ಯಾದ್ಯಂತ ಬಿಜೆಪಿ ನಾಯಕರು, ಹಲವು ಹಿಂದೂ ಸಂಘಟನೆಗಳು, ಮಹಿಳೆಯರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
ಉಡುಪಿ ಕಾಲೇಜಿನ ಟಾಯ್ಲೆಟ್ನಲ್ಲಿ ನಡೆದ ವೀಡಿಯೋ ಚಿತ್ರೀಕರಣದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದ ಹಿನ್ನೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖೆ ಮಾಡಲು ಮುಂದಾಗಿದೆ. ಹೀಗಾಗಿ ಇಂದು ಖಾಸಗಿ ಕಾಲೇಜಿಗೆ ಮಹಿಳಾ ಆಯೋಗದ ತಂಡ ಆಗಮಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications