ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾಗೆ ಮಾತೃ ವಿಯೋಗ
ಉಡುಪಿ, ಆಗಸ್ಟ್.26: ಭೂಗತ ಪಾತಕಿ ಬನ್ನಂಜೆ ರಾಜಾ ಅವರ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬನ್ನಂಜೆ ರಾಜಾ ಅವರ ತಾಯಿ ಮನೆಯಲ್ಲಿ ಕಾಲು ಜಾರಿ ಬಿದ್ದು ಇಂದು ಭಾನುವಾರ ಮೃತಪಟ್ಟಿದ್ದಾರೆ.
ಜುಲೈ.9 ರಂದು ತಾಯಿಯನ್ನು ಭೇಟಿಯಾಗಲು ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಬಂದಿದ್ದ. ತಾಯಿಯೊಂದಿಗೆ ಕೆಲಕಾಲ ಮನೆಯಲ್ಲಿ ಕಳೆದಿದ್ದ. ನಂತರ ಮತ್ತೆ ಬೆಳಗಾವಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.
ಮಲ್ಪೆಯ ಕಲ್ಮಾಡಿಯಲ್ಲಿ ಬನ್ನಂಜೆ ರಾಜನ ತಾಯಿ ಮನೆ ಇದ್ದು, ಮನೆಯಲ್ಲಿ ಕಾಲು ಜಾರಿ ಬಿದ್ದು ತಾಯಿ ವಿಲಾಸಿನಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಡರಲ್ಲೇ ವಿಲಾಸಿನಿ ಅವರು ಮೃತಪಟ್ಟಿದ್ದಾರೆ.

ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಮೃತದೇಹ ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ. ಬನ್ನಂಜೆ ರಾಜಾನ ಕರೆತರುವ ಬಗ್ಗೆ ಕುಟುಂಬ ವಕೀಲರ ಜೊತೆ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿದ್ದು, ಬನ್ನಂಜೆ ರಾಜ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ.
ಒಂದು ವೇಳೆ ಬನ್ನಂಜೆ ರಾಜಾಗೆ ಉಡುಪಿಗೆ ಬರಲು ನ್ಯಾಯಾಲಯ ಅನುಮತಿ ನೀಡಲಿದೆಯೇ ಎನ್ನುವುದು ತಿಳಿದಿಲ್ಲ. ಬನ್ನಂಜೆ ರಾಜಾನ ಆಗಮನದ ಮಾಹಿತಿ ನಂತರ ಕುಟುಂಬದ ನಿರ್ಧಾರದ ಬಳಿಕವೇ ತಾಯಿಯ ಶವ ದಹನ ಮಾಡಲಿದ್ದಾರೆ.
ಈಗಾಗಲೇ ಬನ್ನಂಜೆ ರಾಜನ ಬಂಟರು ಸಕಲ ಸಿದ್ಧತೆಗಳನ್ನು ಮಾಡಿದ್ದು, ನ್ಯಾಯಾಲಯ ರಾಜಾನಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications