ಉಡುಪಿ; ಬಸದಿಗಳ ಪ್ರದೇಶ ಒತ್ತುವರಿ ತೆರವಿಗೆ ಮನವಿ
ಉಡುಪಿ, ಮಾರ್ಚ್ 04: ಬ್ರಹ್ಮಾವರ ತಾಲೂಕು ಕೋಟ ಹೋಬಳಿಯ ಹೊಸಾಳ ಗ್ರಾಮದ ವ್ಯಾಪ್ತಿಯ ಸಾವಿರದ ಇನ್ನೂರು ವರ್ಷಗಳಷ್ಟು ಪುರಾತನವಾದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಮತ್ತು ಶ್ರೀ ಆದಿನಾಥ ಸ್ವಾಮಿ ಬಸದಿ ಇರುವ ಪ್ರದೇಶವನ್ನು ಹಲವಾರು ಜನರು ಅತಿಕ್ರಮಿಸಿ ಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಜೈನ ಸಮಾಜ ಹಾಗೂ ಜೈನ್ ಮಿಲನ್ಗಳು ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದರು. ಆಕ್ರಮಿಸಿಕೊಂಡಿರುವ ಪ್ರದೇಶವನ್ನು ತಕ್ಷಣವೇ ತೆರವುಗೊಳಿಸಿ ತಂತಿಬೇಲಿಯನ್ನು ನಿರ್ಮಿಸಿ ತಾತ್ಕಾಲಿಕ ರಕ್ಷಣೆ ಒದಗಿಸುವಂತೆ ಮನವಿ ಸಲ್ಲಿಸಿದರು.
ಬಸದಿ ಪ್ರದೇಶವನ್ನು ಗೊಬ್ಬರ ಹಾಕಲು, ಟಾಯ್ಲೆಟ್ ಗುಂಡಿಗಳನ್ನು ಮಾಡಿಕೊಂಡು ಕಸವನ್ನು ಹಾಕಲು ಉಪಯೋಗಿಸುತ್ತಿದ್ದಾರೆ. ಆಕ್ರಮಿತ ಪ್ರದೇಶವನ್ನು ಈಗಾಗಲೇ ಬಾರ್ಕೂರಿನ ಜೈನ ಸಮಾಜದ ಮನವಿಯಂತೆ ತಹಶೀಲ್ದಾರರು ಸರ್ವೇಯನ್ನು ನಡೆಸಿದ್ದಾರೆ. ಒತ್ತುವರಿ ಮಾಡಿರುವುದು ವರದಿಯಲ್ಲಿ ದೃಢವಾಗಿದೆ. ಅತಿಕ್ರಮಣದಾರರಿಗೆ ಜಾಗ ತೆರವು ಮಾಡುವಂತೆ ನೋಟೀಸ್ ಸಹ ನೀಡಲಾಗಿದೆ.

ಆದರೆ ಇದುವರೆಗೆ ಅತಿಕ್ರಮಿಸಿಕೊಂಡಿರುವ ಜಾಗವನ್ನು ತೆರವುಗೊಳಿಸಿಲ್ಲ. ಜೈನ ಸಮಾಜವು ಈ ಬಸದಿಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಿದ್ದು, ಬಾರಕೂರಿನ ಕಾರ್ಯಕರ್ತ ಶಂಕರ ಶಾಂತಿಯವರು ದಾಖಲೆಗಳನ್ನು ಒದಗಿಸಲು ಸಹಕರಿಸಿದ್ದರು.
ಆರ್ಟಿಐ ಕಾರ್ಯಕರ್ತ ಶಂಕರ್ ಶಾಂತಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಬಸದಿಯನ್ನು ಆಕ್ರಮಿಸಿರುವ ಪ್ರದೇಶವನ್ನು ತಕ್ಷಣವೇ ತೆರವುಗೊಳಿಸಿ ತಂತಿ ಬೇಲಿಯನ್ನು ನಿರ್ಮಿಸಿ ತಾತ್ಕಾಲಿಕ ರಕ್ಷಣೆ ನೀಡಬೇಕು ಹಾಗೂ ಶಂಕರ್ ಶಾಂತಿ ಅವರ ಮೇಲೆ ನಡೆದ ಹಲ್ಲೆ ಆರೋಪಿಗಳನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications