ಭಾಷೆ..ಗಡಿ ದಾಟಿದ ಯಕ್ಷಗಾನ: ಉಡುಪಿಯಲ್ಲಿ ಮೋದಿ ಊರಿನ ಕುವರರಿಗೆ ತರಬೇತಿ
ಉಡುಪಿ, ಜೂನ್ 21: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ ಸುವರ್ಣರ ಮಾರ್ಗದರ್ಶನದಲ್ಲಿ ಹಿಂದಿ ಯಕ್ಷಗಾನದ ಶಿಬಿರ ಏರ್ಪಟ್ಟಿದೆ.
ಕನ್ನಡದ ಕಲೆ ಯಕ್ಷಗಾನಕ್ಕೆ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳೇ ಮನಸೋತಿದ್ದಾರೆ. ಭವಿಷ್ಯದ ಚಲನಚಿತ್ರರಂಗ ಮತ್ತು ಟಿವಿ ಪರದೆಯನ್ನು ಅಲಂಕರಿಸದಿರುವ ಯುವ ಕಲಾವಿದರು 20 ದಿನಗಳಿಂದ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ.

ಗುರುಬನಂಜೆ ಸಂಜೀವ ಸುವರ್ಣ ಅವರು, ಸಾಂಪ್ರದಾಯಿಕ ಹೆಜ್ಜೆಗಾರಿಕೆಯನ್ನು ಕಲಿಸುವುದರ ಜೊತೆಗೆ ಯಕ್ಷಗಾನ ಪ್ರದರ್ಶನಕ್ಕೆ ಈ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತಿದ್ದಾರೆ. ಪ್ರತಿದಿನ ಹನ್ನೆರಡು ಗಂಟೆಗೂ ಅಧಿಕ ಕಾಲ ವಿದ್ಯಾರ್ಥಿಗಳು ಬೆವರಿಳಿಸಿ ಯಕ್ಷಗಾನದ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ.

ರಾಷ್ಟ್ರೀಯ ನಾಟಕ ಶಾಲೆಯ ಕಲಿಕೆಯ ಭಾಗವಾಗಿ ಕಳೆದ ಹಲವಾರು ವರ್ಷಗಳಿಂದ ಯಕ್ಷಗಾನವನ್ನು ಒಂದು ಪಠ್ಯವಾಗಿ ಕಲಿಸಲಾಗುತ್ತದೆ. ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದ್ದು, ದೇಶದ ನಾನಾ ಭಾಗಗಳ ಕಲಾವಿದರು ಅಪರೂಪದ ಕರಾವಳಿಯ ಕಲೆಯನ್ನು ಅಭ್ಯಸಿಸುವಂತಾಗಿದೆ. ಅದಮಾರು ಮಠದ ಆಶ್ರಯದಲ್ಲಿ ಈ ಶಿಬಿರ ಏರ್ಪಟ್ಟಿದ್ದು, ಗಾನನಾಟ್ಯ ಸಂಭಾಷಣೆಯ ಅಪರೂಪದ ಕಲೆ ದೇಶದ ಮೂಲೆ ಮೂಲೆಗಳಿಂದ ಕಲಾವಿದರನ್ನು ಆಕರ್ಷಿಸುತ್ತಿದೆ.

ಉಡುಪಿಯಲ್ಲಿ ಅಪರೂಪದ ಕರಿ ಚಿರತೆ ಪತ್ತೆ
ಉಡುಪಿಯಲ್ಲಿ ಮತ್ತೊಮ್ಮೆ ಅಪರೂಪದ ಕರಿ ಚಿರತೆಯೊಂದು ಪತ್ತೆಯಾಗಿದೆ. ಬೇಟೆ ಅರಸಿ ಬಂದ ಈ ಚಿರತೆ ಬಾವಿಗೆ ಬಿದ್ದ ಸ್ಥಿತಿಯಲ್ಲಿ ಕಂಡು ಬಂದಿದೆ. ಇಲ್ಲಿನ ಮಂದಾರ್ತಿ ಸಮೀಪದ ಶಿರೂರು ಹೆಮ್ಮಣಿಕೆ ಎಂಬಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ಶೇಖರ್ ಶೆಟ್ಟಿ ಎಂಬವರ ರಬ್ಬರ್ ತೋಟದ ಸಮೀಪವೇ ಇರುವ ಕೃಷ್ಣ ನಾಯ್ಕ ಎಂಬವರ ಜಾಗದಲ್ಲಿರುವ ತೆರೆದ ಬಾವಿಗೆ ತಡರಾತ್ರಿ ಕರಿ ಚಿರತೆ ಬಿತ್ತೆನ್ನಲಾಗಿದೆ. ಸಂಜೆ ವೇಳೆಗೆ ಬಾವಿಯಲ್ಲಿ ಚಿರತೆ ಬಿದ್ದ ಬಗ್ಗೆ ತಿಳಿದ ತಕ್ಷಣ ಶೇಖರ್ ಶೆಟ್ಟಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಬಾವಿ ಸುತ್ತ ಬಲೆ ಹಾಕಿ ಕರಿ ಚಿರತೆ ರಕ್ಷಣೆಗೆ ಮುಂದಾದರು. ಆದರೆ ಕಾರ್ಯಾಚರಣೆ ವೇಳೆ ಚಿರತೆ ಬಲೆಯಿಂದ ಸರಿದು ಸಮೀಪದ ತೋಟದೊಳಕ್ಕೆ ಓಡಿ ಹೋಯಿತೆನ್ನಲಾಗಿದೆ. ಈ ಮೂಲಕ ಕರಿ ಚಿರತೆ ಸುರಕ್ಷಿತವಾಗಿ ಬಾವಿಯಿಂದ ಮೇಲಕ್ಕೆ ಬಂದು ಕಾಡು ಪ್ರದೇಶ ಸೇರಿದೆ ಎಂದು ತಿಳಿದುಬಂದಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ನಿರ್ದೇಶನದಲ್ಲಿ ಶಂಕರ ನಾರಾಯಣ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪವಲಯ ಅರಣ್ಯಾಧಿಕಾರಿ ನಾಗರಾಜ ಮತ್ತು ಸಿಬ್ಬಂದಿ, ಸ್ಥಳೀಯರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications