ಶೀರೂರು ಮಠದ ಉತ್ತರಾಧಿಕಾರಿಯಾಗಿ ಬರಲು ವಟುಗಳ ನಿರಾಸಕ್ತಿ ?
ಉಡುಪಿ, ಜುಲೈ.22: ಶೀರೂರು ಮಠದ ಆಡಳಿತಕ್ಕೆ ಐವರು ಸದಸ್ಯರ ಸಮಿತಿ ರಚಿಸಲಾಗುತ್ತದೆ. ಮಠದ ಆಡಳಿತ ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಸೋದೆ ವಿಶ್ವವಲ್ಲಭ ಶ್ರೀಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ. ಇದರಲ್ಲಿ ಶೀರೂರು ಮಠದ ವಿದ್ವಾಂಸರನ್ನೂ ಸೇರಿಸಲಾಗುತ್ತದೆ.
ಈಗ ಆಷಾಢ ಮಾಸವಾದ ಕಾರಣ ಶಿಷ್ಯ ಸ್ವೀಕಾರಕ್ಕೆ ತೊಡಕಾಗಿದೆ. ಆಷಾಢದ ಬಳಿಕವೇ ಶಿಷ್ಯ ಸ್ವೀಕಾರ ಪ್ರಕ್ರಿಯೆ ಆರಂಭಿಸಲಾಗುವುದು ಅಂತ ಶೀರೂರು ಮಠದ ದ್ವಂದ್ವ ಮಠವಾದ ಸೋದೆ ಮಠ ಸ್ಪಷ್ಟಪಡಿಸಿದೆ. ಈಗಾಗಲೇ ವಟುವಿನ ಜಾತಕ ಪರಿಶೀಲನೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉತ್ತರಾಧಿಕಾರಿ ನೇಮಕ ನಡೆಯಲಿದೆ.
ಸೋಮವಾರ ಈ ಸಮಿತಿ ರಚನೆ ಸಾಧ್ಯತೆಯಿದ್ದು , ಸದ್ಯ ಶೀರೂರುಮಠದ ನಿರ್ವಹಣೆಯ ಜವಾಬ್ದಾರಿಯನ್ನು ಸೋದೆ ವಿಶ್ವವಲ್ಲಭ ಶ್ರೀಗಳು ವಹಿಸಿಕೊಂಡಿದ್ದಾರೆ. ಗಮನಾರ್ಹ ಸಂಗತಿ ಅಂದ್ರೆ ಉತ್ತರಾಧಿಕಾರಿಯಾಗಿ ಬರಲು ಹಲವರು ನಿರಾಸಕ್ತಿ ತೋರುತ್ತಿದ್ದಾರಂತೆ.

ಇದಕ್ಕೆ ಕಾರಣ ಶೀರೂರು ಮಠದ ಆರ್ಥಿಕ ಸ್ಥಿತಿ. ಆರ್ಥಿಕ ನಷ್ಟದಲ್ಲಿರುವ ಮಠವನ್ನು ಮುನ್ನಡೆಸುವುದು ಅಷ್ಟು ಸುಲಭವಂತೂ ಅಲ್ಲ. ಒಟ್ಟಾರೆ ಚಾತುರ್ಮಾಸ್ಯದ ನಂತರ ಉತ್ತರಾಧಿಕಾರಿ ನೇಮಕ ನಡೆಯಲಿದ್ದು, ಯಾರಾಗಲಿದ್ದಾರೆ ಉತ್ತರಾಧಿಕಾರಿ ಎಂಬ ಕುತೂಹಲ ಹೆಚ್ಚುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications