ಬಿಜೆಪಿ,ಕಾಂಗ್ರೆಸ್ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ
ಮಂಗಳೂರು ಮಾರ್ಚ್ 30: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಕ್ಷೇತ್ರದಲ್ಲಿ ರಾಜಕೀಯ ಮುಖಂಡ ಆರೋಪ ಪ್ರತ್ಯಾರೋಪದ ಪರ್ವ ಆರಂಭಗೊಂಡಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಕ್ಷೇತ್ರದ ಜಾಗೃತ ಮತದಾರ ಪ್ರಭು ಕುತೂಹಲ ದಿಂದ ನೋಡುತ್ತಿದ್ದಾನೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉಡುಪಿ ಶಾಸಕ ರಘುಪತಿ ಭಟ್ , ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರಾಗಿ ಜೆಡಿಎಸ್ ನಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒಬ್ಬ ಸ್ಚಾರ್ಥ ರಾಜಕಾರಣಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ವರಾಜ್ ಅವರಿ ಗೆ ಅಧಿಕಾರದ ದಾಹ ಜಾಸ್ತಿಯಾಗಿದೆ. ಮಧ್ವರಾಜ್ ಅವರ ಈ ವರ್ತನೆ ಗಳಿಂದಾಗಿ ಕ್ಷೇತ್ರದ ಕಾಂಗ್ರೆಸ್ ನ ನೈಜ ಕಾರ್ಯಕರ್ತರಿಗೆ ಬೇಸರವಾಗಿದೆ. ಉಡುಪಿಯಲ್ಲಿ ಜೆಡಿಎಸ್ ನ ಒಬ್ಬ ಪಂಚಾಯತ್ ಸದಸ್ಯರೂ ಇಲ್ಲ. ಆದರೂ ಜೆಡಿಎಸ್ ಗೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟು ಕೊಟ್ಟಿರುವುದಕ್ಕೆ ನೈಜ ಕಾಂಗ್ರೆಸ್ ಓಟುಗಳು ಬಿಜೆಪಿಗೆ ಬರಲಿದೆ ಎಂದು ಅವರು ತಿಳಿಸಿದರು.
ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?
ಮಧ್ವರಾಜ್ ಅವರ ಮತದಾರರು ಗೊಂದಲದಲ್ಲಿದ್ದಾರೆ. ಚುನಾವಣೆ ನಂತರ ಪ್ರಮೋದ್ ಏನು ಮಾಡ್ತಾರೆ. ಅದೇ ಶಾಲು ಹಾಕಿಕೊಂಡು ಓಡಾಡುತ್ತಾರಾ? ಎಂದು ಪ್ರಶ್ನಿಸಿದ ಅವರು ಫಲಿತಾಂಶ ಬಂದು 24 ಗಂಟೆಯೂ ಅವರು ಅ ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ವ್ಯಂಗ್ಯವಾಡಿದರು.
ಕರಾವಳಿ ಮತದಾರರು ತಿಳುವಳಿಕೆ ಇಲ್ಲ ಎಂದು ಹೇಳಿದವರಿಗೆ ಕರಾವಳಿ ಜನ ಈ ಬಾರಿ ಸರಿಯಾದ ಬುದ್ಧಿ ಕಲಿಸುತ್ತಾರೆ. ಈ ಕೂಡಲೇ ಮುಖ್ಯಮಂತ್ರಿ ಕುಮಾರ ಸ್ವಾಮಿ ಜನರಲ್ಲಿ ಕ್ಷಮೆಯಾಚಿಸಬೇಕು.
ಕ್ಷಮೆ ಕೇಳಿಸುವ ಜವಾಬ್ದಾರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮೇಲಿದೆ ಎಂದು ಅವರು ಹೇಳಿದರು.ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದರು. ಶೋಭಾರವರು ತಮ್ಮ ಐದು ವರ್ಷದ ಅವಧಿಯಲ್ಲಿ ಕ್ಷೇತ್ರದಲ್ಲಿ ವಾಸ್ತವ್ಯ ಮಾಡದೆ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು .
ಶೋಭಾ ಕರಂದ್ಲಾಜೆ ಜನರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ಆದ್ದರಿಂದ ಪಕ್ಷದ ಕಾರ್ಯಕರ್ತರೇ ಅವರ ವಿರುದ್ಧ ಸಿಡಿದೆದ್ದಿರುವುದು ಅವರ ವೈಫಲ್ಯವನ್ನು ತೋರಿಸುತ್ತದೆ . ಇದು ಕ್ಷೇತ್ರದಲ್ಲಿ ಕಾಂಗ್ರೆಸ್ ,ಜೆಡಿಎಸ್ ಮೈತ್ರಿ ಗಲುವಿಗೆ ವರದಾನ ವಾಗಲಿದೆ ಎಂದು ಅವರು ಹೇಳಿದರು .
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications