ಪರೇಶ್ ಮೇಸ್ತ: ಡಿ. 13, 14ರಂದು ರಾಜ್ಯಾದ್ಯಂತ ವಿಎಚ್ಪಿ ಪ್ರತಿಭಟನೆ
ಉಡುಪಿ, ಡಿಸೆಂಬರ್ 13: ಉತ್ತರ ಕನ್ನಡದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣ ಖಂಡಿಸಿ ಇಂದು ಮತ್ತು ನಾಳೆ (ಡಿಸೆಂಬರ್ 13 ಮತ್ತು 14) ವಿಶ್ವ ಹಿಂದೂ ಪರಿಷತ್ (ವಿಹಿಂಪ) ಹಾಗು ಬಜರಂಗದಳ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ವಿಹಿಂಪ ಮುಖಂಡ ಗೋಪಾಲ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಅವರದ್ದು ಸಹಜ ಸಾವಲ್ಲ; ವ್ಯವಸ್ಥಿತ ಕೊಲೆ," ಎಂದು ಆರೋಪಿಸಿದ ಅವರು, ಪರೇಶ್ ಮೇಸ್ತ ಪ್ರಕರಣದ ತನಿಖೆಯನ್ನು 'ಎನ್ಐಎ'ಗೆ ವಹಿಸುವಂತೆ ಒತ್ತಾಯಿಸಿದರು.

ಪರೇಶ್ ಮೇಸ್ತ ಹತ್ಯೆಯ ಹಿಂದೆ ಅಜಾದ್ ಅಣ್ಣೆಗೇರಿ ಎಂಬವನಿದ್ದಾನೆ. ಆಜಾದ್ ಜಿಹಾದಿ ಚಟುವಟಿಕೆ ಬೆಂಬಲ ನೀಡುತ್ತಿರೋ ಕಾಂಗ್ರೆಸ್ ಮುಖಂಡ ಎಂದು ಅವರು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಈ ಆಜಾದ್ ಎಂಬಾತನೇ ಅವರಿಗೆ ಸನ್ಮಾನ ಮಾಡಿದ್ದ ಎಂದು ದೂರಿದ ಅವರು, "ಪೊಲೀಸರು ರಾಜಕೀಯ ಒತ್ತಡದಿಂದಾಗಿ ಮುಸ್ಲಿಮರ ಜೊತೆ ಕೈ ಜೋಡಿಸಿದ್ದಾರೆ," ಎಂದು ದೂರಿದರು.
ಮೇಸ್ತ ಹತ್ಯೆಯಲ್ಲಿ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಹೇಳಿದ ಅವರು, "ಸಿಎಂ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಪರೇಶ್ ಮೇಸ್ತ ಸಾವಿನ ಸುದ್ದಿ ಮುಚ್ಚಿಡಲಾಗಿತ್ತು," ಎಂದು ಅವರು ಆರೋಪಿಸಿದರು.
ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಸಂದರ್ಭವೂ ಸರಕಾರ ಈ ರೀತಿ ನಡೆದುಕೊಂಡಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, "ಮೇಸ್ತ ಸಾವಿನಿಂದ ರಾಜ್ಯದಲ್ಲಿ 20 ಹಿಂದೂ ಕಾರ್ಯಕರ್ತರ ಹತ್ಯೆ ನಡೆದಂತಾಗಿದೆ," ಎಂದು ವಿಷಾದ ವ್ಯಕ್ತಪಡಿಸಿದರು.
ಸರಕಾರದ ಒತ್ತಡದಿಂದ ಅಧಿಕಾರಿಗಳು ಪರೇಶ್ ಮೇಸ್ತ ಅವರದ್ದು ಸಹಜ ಸಾವು ಎನ್ನುತ್ತಿದ್ದಾರೆ. ಮೇಸ್ತ ಅವರನ್ನು ಕೊಂದು ಕೆರೆಗೆ ಎಸೆಯಲಾಗಿದೆ ಎಂದು ಅವರು ಆರೋಪಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications