ಶಬರಿಮಲೆಗೆ ಮಹಿಳೆಯರ ಪ್ರವೇಶ: ಪಲಿಮಾರು ಶ್ರೀಗಳು ಹೇಳಿದ್ದೇನು?
ಉಡುಪಿ, ಜನವರಿ 02: ಶಬರಿಮಲೆ ದೇವಸ್ಥಾನಕ್ಕೆ ಇಂದು ಮಹಿಳೆಯರು ಪ್ರವೇಶಿಸಿರುವ ಕುರಿತು ಉಡುಪಿ ಶ್ರೀ ಕೃಷ್ಣಮಠದ ಪರ್ಯಾಯ ಪಲಿಮಾರು ಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶ್ರೀವಿದ್ಯಾಧೀಶ ಸ್ವಾಮೀಜಿ, ಚರ್ಚೆ- ಜಗಳಕ್ಕಿಂತ ಧಾರ್ಮಿಕ ಪ್ರೊಟೋಕಾಲ್ ಅನುಸರಿಸಿ. ಒಂದೊಂದು ಕ್ಷೇತ್ರಕ್ಕೂ ಒಂದೊಂದು ಪ್ರೊಟೋಕಾಲ್ ಇದೆ. ಅದನ್ನು ಅನುಸರಿಸಲೇಬೇಕು.
ಪ್ರೊಟೋಕಾಲ್ ಎಲ್ಲಾ ಕಡೆ ಇದೆ. ರಾಷ್ಟ್ರಪತಿ, ಪ್ರಧಾನಿಗೂ ಪ್ರೊಟೋಕಾಲ್ ಇರುತ್ತದೆ. ಶಬರಿಮಲೆಗೆ ಒಂದು ಪ್ರೊಟೋಕಾಲ್ ಜಾರಿಯಲ್ಲಿದೆ. ಧಾರ್ಮಿಕ ಸಂವಿಧಾನವನ್ನು ನಾವು ಏಕೆ ಆಕ್ಷೇಪ ಮಾಡಬೇಕು ಎಂದು ಅವರು ಪ್ರಶ್ನಿಸಿದರು.

ಶಬರಿಮಲೆಯಲ್ಲಿ ಇಷ್ಟು ವರ್ಷ ಎಲ್ಲವನ್ನೂ ಒಪ್ಪಲಾಗಿದೆ. ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗಿದೆ. ಹೊರಗಿನವರು ಬಂದು ಸಂಪ್ರದಾಯ ಆಕ್ಷೇಪಿಸೋದ್ಯಾಕೆ? ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಶಬರಿಮಲೆಯಲ್ಲಿ ಹೆಣ್ಮಕ್ಕಳಿಗೆ ಬಹಿಷ್ಕಾರ ಹಾಕಿಲ್ಲ. ಮಹಿಳೆಯರಿಗೆ ನಿಗದಿತ ಅವಧಿ ನಿರ್ಧರಿಸಲಾಗಿದೆ. ಶಬರಿಮಲೆಗೆ ಭಕ್ತಿಯಿಂದ ಹೋದರೆ ಅಡ್ಡಿಯಿಲ್ಲ. ಸಂಪ್ರದಾಯ ಧಿಕ್ಕರಿಸಿ ಹೋಗುವುದು ನಮಗೆ ಇಷ್ಟವಾಗುತ್ತಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಆಕ್ಷೇಪಿಸಲ್ಲ. ಆದರೆ ಸುಪ್ರೀಂಕೋರ್ಟ್ ತೀರ್ಪನ್ನು ಮತ್ತೊಮ್ಮೆ ಪರಾಮರ್ಶೆ ಮಾಡಲಿ. ಭಕ್ತರಿಗೆ ಸಮಸ್ಯೆ ಆಗದಂತೆ ಕೋರ್ಟ್ ತೀರ್ಮಾನಿಸಲಿ. ಕ್ಷೇತ್ರದ ಸಂಪ್ರದಾಯ ನಿಯಮಾವಳಿಗೆ ಅವಕಾಶ ಕೊಡಿ ಎಂದು ಆಗ್ರಹಿಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications