'ಇಂದಿರಾ ಗಾಂಧಿ ಸ್ವರೂಪ': ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬಾಯ್ತುಂಬ ಹೊಗಳಿದ ವಿನಯ್ ಗುರೂಜಿ
ಉಡುಪಿ, ಜೂನ್ 29: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಶ್ಲಾಘಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರ್ಯವೈಖರಿಯನ್ನು ಹೊಗಳಿದರು.

ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು. ಇಂಥ ಉದ್ಯಮಿಗಳನ್ನು ಬೆಂಬಲಿಸಬೇಕು.

ಫ್ಯಾಕ್ಟರಿ ಉದ್ಘಾಟಿಸಿದ್ದು ನನಗೆ ತುಂಬಾ ಖುಷಿ ನೀಡಿತು. ಫ್ಯಾಕ್ಟರಿ ಕಟ್ಟೋದು ಅಷ್ಟು ಸುಲಭವಲ್ಲ, ಇದಕ್ಕೆ ಅಡ್ಡಿಪಡಿಸೋರೆ ಜಾಸ್ತಿ. ಪುಟ್ಟ ಹಳ್ಳಿಯಿಂದ ದೆಹಲಿವರೆಗೂ ಉದ್ಯಮ ಹೊಂದಿರುವ ಗೋವಿಂದ ಪೂಜಾರಿ ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು ಎಂದರು.
ಈ ವೇಳೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ ಶ್ರೀನಿವಾಸ್ ಪೂಜಾರಿ, ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಾಲೀಕರಾದ ಗೋವಿಂದ ಬಾಬು ಪೂಜಾರಿ, ರಾಜು ಪೂಜಾರಿ, ವಿಜಯ್ ಶೆಟ್ಟಿ, ಸಂಜೀವ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications