Get Updates
Get notified of breaking news, exclusive insights, and must-see stories!

ಬಜೆಟ್ ನಲ್ಲಿ ಮುಖ್ಯಮಂತ್ರಿಯಿಂದ ಕರಾವಳಿ ನಿರ್ಲಕ್ಷ್ಯ: ಸೊರಕೆ

ಉಡುಪಿ, ಮಾರ್ಚ್ 05: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2020-21 ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಎತ್ತಿನಹೊಳೆ ಯೋಜನೆಗೆ ನಳೀನ್ ಕುಮಾರ್ ಕಟೀಲ್ ವಿರೋಧಿಸಿದ್ದರು, ಆದರೆ ಸಿಎಂ ಯಡಿಯೂರಪ್ಪನವರು ಬಜೆಟ್ 1,500 ಕೋಟಿ ರುಪಾಯಿ ಬಿಡುಗಡೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸೆಡ್ಡು ಹೊಡೆದಿದ್ದಾರೆ ಎಂದರು.

ದಕ್ಷಿಣ ಕನ್ನಡದಲ್ಲಿ ಕಟೀಲ್ ಅವರ ನೇತೃತ್ವದಲ್ಲೇ ಹೋರಾಟಗಳು ನಡೆದಿದ್ದವು, ಈಗ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಕೇಂದ್ರದ ಅನುದಾನ ಬಂದಿಲ್ಲವೆಂದು ಸಿಎಂ ಬಜೆಟ್ ಭಾಷಣದಲ್ಲೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

Vinaykumar Sorake Said Coastal Area Neglect By Chief Minister In Budget

ಕೊರೊನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮಗಳನ್ನು ಈ ಬಜೆಟ್ ನಲ್ಲಿ ಹೇಳಿಲ್ಲ, ಆರ್ಥಿಕ ಚೇತರಿಕೆಗೆ ಟಾನಿಕ್ ಕೊಡದ ಬಜೆಟ್ ಇದಾಗಿದ್ದು, ಕರಾವಳಿ ಭಾಗದ ಸಮಸ್ಯೆಯನ್ನು ಸಿಎಂ ಉಲ್ಲೇಖ ಮಾಡಿಲ್ಲವೆಂದರು.

ಉದ್ಯೋಗ ಸೃಷ್ಟಿಯ ಬಗ್ಗೆ ಯಾವುದೇ ಕಾರ್ಯಕ್ರಮ ಇಲ್ಲ, ಯಡಿಯೂರಪ್ಪ ಬಜೆಟ್ ಪುನರುಜ್ಜೀವನ ಕೊಡುವಲ್ಲಿ ವಿಫಲವಾಗಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+