ಕೊಲ್ಲೂರಿಗೆ ಗಣ್ಯರ ಭೇಟಿ, ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ
ಉಡುಪಿ, ನವೆಂಬರ್ 20: ಕುಂದಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗಣ್ಯರು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಕೆಲ ಕಾಲ ನಿರ್ಬಂಧ ವಿಧಿಸಲಾಗಿದೆ.
ಒಂದೇ ತಿಂಗಳಲ್ಲಿ ಕೊಲ್ಲೂರಿನಲ್ಲಿ 1 ಕೋಟಿ ಹುಂಡಿ ಕಾಣಿಕೆ ಸಂಗ್ರಹ
ಕೊಲ್ಲೂರಿಗೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್ ಸಿಂಘೇ ಭೇಟಿ ನೀಡಲಿದ್ದಾರೆ.
ನವೆಂಬರ್ 20 ರಂದು ರಾಜಸ್ಥಾನ ಮುಖ್ಯಮಂತ್ರಿ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದು, ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 21 ರಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್ ಸಿಂಘೇ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಪ್ರತಿಕೂಲ ಹವಮಾನ, ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ ರದ್ದು
ಭದ್ರತಾ ದೃಷ್ಟಿಯಿಂದ ಈ ಎರಡೂ ದಿನ ಸಾರ್ವಜನಿಕರ ಪ್ರವೇಶಕ್ಕೆ ನಿಯಂತ್ರಣ ಹೇರಲಾಗಿದೆ. ಹಣ್ಯರು ಭೇಟಿ ನೀಡಲಿರುವ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.