ಕುಂದಾಪುರ: ಬೃಹತ್ ಹೆಬ್ಬಾವು ಹಿಡಿದ ಏಳನೇ ತರಗತಿ ಪೋರ, ವಿಡಿಯೋ ಸಖತ್ ವೈರಲ್
ಕುಂದಾಪುರ, ನವೆಂಬರ್ 23: ಇತ್ತೀಚಿಗೆ ಜನ ಸಂದಣಿ ಇರುವ ಜಾಗದಲ್ಲೇ ಹಾವು ಕಂಡು ಬರುವುದು ಜಾಸ್ತಿಯಾಗುತ್ತಿದೆ. ಬೇಸಿಗೆಯ ಧಗೆಗೆ ನೀರು ಅರಸಿ ಹಾವುಗಳು ಬಿಲದಿಂದ, ಹುತ್ತದಿಂದ ಹೊರಬರುತ್ತವೆ. ಹೀಗಾಗಿ ಜನರಿರುವ ಪ್ರದೇಶದಲ್ಲಿ ಹಾವುಗಳ ಒಡಾಟ, ಅವುಗಳ ರಕ್ಷಣೆ ಕಾರ್ಯಗಳು ಹೆಚ್ಚಾಗುತ್ತಿದೆ.
ಹಾವುಗಳನ್ನು ಕಂಡರೆ ಯಾರಿಗೆ ಭಯ ಇಲ್ಲ ಹೇಳಿ..? ಹಾವುಗಳೆಂದರೆ ಅಲ್ಲಿಂದ ಕಾಲ್ಕಿತ್ತು ಓಡುವವರೇ ಹೆಚ್ಚು. ಉರಗ ತಜ್ಞರು ಎಷ್ಟು ಜಾಗೃತಿ ಮೂಡಿಸಿದರೂ ಕೂಡ ಕೆಲವರು ಕಂಡ ಕಂಡಲ್ಲಿ ಹಾವುಗಳನ್ನು ಹೊಡೆದು ಕೊಲ್ಲುತ್ತಾರೆ. ಆದರೆ ಇಲ್ಲೊಬ್ಬ ಬಾಲಕ ಹಾವಿನ ಕುತ್ತಿಗೆಗೆ ಕೈ ಹಾಕಿ ಬೃಹತ್ ಗಾತ್ರದ ಹಾವನ್ನು ಹಿಡಿದಿದ್ದಾನೆ.

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಲಕ ಹೆಬ್ಬಾವು ಹಿಡಿದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಸಾಲಿಗ್ರಾಮ ಪರಿಸರದಲ್ಲಿ ಬೃಹತ್ ಹೆಬ್ಬಾವೊಂದು ಕಂಡು ಬಂದಿತ್ತು. ಈ ಬಗ್ಗೆ ಸ್ಥಳೀಯರು ಉರಗ ತಜ್ಞ ಸುಧೀಂದ್ರ ಐತಾಳ್ ಅವರಿಗೆ ಮಾಹಿತಿ ನೀಡದ್ದಾರೆ.
ಈ ವೇಳೆ ತಂದೆಯ ಜೊತೆಗೆ ಸ್ಥಳಕ್ಕೆ ಬಂದ 12 ವರ್ಷದ ಪೋರ ಧೀರಜ್ ಐತಾಳ್ ಹೆಬ್ಬಾವಿನ ಬಾಯಿಯ ಬಳಿ ಕೈ ಹಾಕಿ ತಂದೆಯ ಜೊತೆಗೆ ಹಾವನ್ನು ಹಿಡಿದಿದ್ದಾನೆ. ಈ ವಿಡಿಯೋ ವಾಟ್ಸ್ಆ್ಯಪ್, ಫೇಸ್ಬುಕ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ಧೈರ್ಯದಿಂದ ಹೆಬ್ಬಾವನ್ನು ಹಿಡಿದು ಭೇಷ್ ಎನಿಸಿಕೊಂಡಿರುವ ಬಾಲಕನ ಹೆಸರು ಧೀರಜ್ ಐತಾಳ್. ಈತ ಚಿತ್ರಪಾಡಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾನೆ. ಈ ಪುಟ್ಟ ಪೋರನ ಧೀರತನಕ್ಕೆ ಮನಸೋತಿರುವ ಜನರು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಧೀರಜ್ ಐತಾಳ್ ತಂದೆ ಸುಧೀಂದ್ರ ಐತಾಳ್ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಮೀಪ ವಾಸವಿದ್ದಾರೆ. ಸುಧೀಂದ್ರ ಅವರು ಪ್ರಾಣಿ-ಪ್ರೇಮಿಯಾಗಿದ್ದು ಗಾಯಗೊಂಡ ಪ್ರಾಣಿ-ಪಕ್ಷಿಗಳಿಗೆ ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ. ತಾವು ಪ್ರಾಣಿಗಳೊಂದಿಗೆ ಸ್ನೇಹ ಸಂಬಂಧ ವೃದ್ಧಿಸಿಕೊಳ್ಳುವುದರ ಜೊತೆಗೆ ಪುತ್ರನಿಗೂ ಆ ಕುರಿತ ಅಭಿರುಚಿ ಬೆಳೆಸಿದ್ದಾರೆ. ಕುಂದಾಪುರ ಮಾತ್ರವಲ್ಲದೇ ಉಡುಪಿ ಜಿಲ್ಲೆಯ ಮೂಲೆ ಮೂಲೆಯಿಂದ ಸುಧೀಂದ್ರ ಐತಾಳ್ ಅವರ ಸಾಲಿಗ್ರಾಮ ನಿವಾಸಕ್ಕೆ ಭೇಟಿ ನೀಡಿ ಪ್ರಾಣಿ-ಪಕ್ಷಿಗಳನ್ನು ವೀಕ್ಷಿಸುತ್ತಾರೆ. ಸದ್ಯ ಸುಧೀಂದ್ರ ಐತಾಳ್ ಅವರ ಮನೆ ಸ್ಥಳೀಯವಾಗಿ ಪ್ರವಾಸಿ ತಾಣವಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications