ಅಂದು ವಾದಿರಾಜ ಗುರುಗಳು ಸೃಷ್ಟಿಸಿದ್ದ ಜಾಗದಲ್ಲಿ ಈಗಲೂ ನೀರಿನ ಸೆಲೆ
ಶತಮಾನದ ಹಿಂದೆ ವಾದಿರಾಜ ಗುರುಗಳು ತಮ್ಮ ಕಮಂಡಲದಿಂದ ನೀರು ಸೃಷ್ಟಿಸಿದ್ದ ಸ್ಥಳಕ್ಕೆ ಹಾಲೀ ಸೋದೆ ವಾದಿರಾಜ ಮಠದ ಪೀಠಾಧಿಪತಿಗಳಾದ ವಿಶ್ವವಲ್ಲಭ ತೀರ್ಥರು ಇತ್ತೀಚಿಗೆ ಭೇಟಿ ನೀಡಿದ್ದರು.
ಉಡುಪಿ, ಜುಲೈ 13: ಭಾವಿಸಮೀರ ಶ್ರೀವಾದಿರಾಜ ಗುರುಗಳು ಶತಮಾನಗಳ ಕೆಳಗೆ ತಮ್ಮ ಮಂತ್ರ ಶಕ್ತಿಯಿಂದ ಸೃಷ್ಟಿಸಿದ್ದ ನೀರಿನ ಸೆಲೆಯ ಪ್ರದೇಶಕ್ಕೆ ಹಾಲೀ ಸೋದೆ ವಾದಿರಾಜ ಮಠದ ಪೀಠಾಧಿಪತಿಗಳಾದ ವಿಶ್ವವಲ್ಲಭ ತೀರ್ಥರು ಇತ್ತೀಚಿಗೆ ಭೇಟಿ ನೀಡಿದ್ದರು.
ಉಡುಪಿ ಹೊರವಲಯದ ಕೆಮುಂಡೇಲು ಎನ್ನುವ ಪುಟ್ಟಗ್ರಾಮಕ್ಕೆ ವಿಶ್ವವಲ್ಲಭ ತೀರ್ಥರು ಭೇಟಿ ನೀಡಿದ ಸಂದರ್ಭದಲ್ಲಿ ಊರಿನ ಪ್ರಮುಖರು, ಜನರು ಹಾಜರಿದ್ದು ಶ್ರೀಗಳನ್ನು ಸ್ವಾಗತಿಸಿ, ಪ್ರದೇಶದ ಮಾಹಿತಿಯನ್ನು ನೀಡಿದರು.

ಕೆಮುಂಡೇಲು ಊರಿನ ಹೆಸರಿನ ಹಿಂದೆ ಒಂದು ಇತಿಹಾಸವಿದೆ. ಭಾವಿಸಮೀರ ಶ್ರೀವಾದಿರಾಜರು ಈ ಪ್ರದೇಶಕ್ಕೆ ಬಂದಾಗ ಅಲ್ಲಿರುವ ಕೃಷಿಕರು, ಈ ಸ್ಥಳದಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವವಿದೆ ಅನುಗ್ರಹಿಸಬೇಕು ಎಂದು ಗುರುಗಳನ್ನು ಪ್ರಾರ್ಥಿಸಿದ್ದರು.
ಆಗ ಶ್ರೀವಾದಿರಾಜರು ಒಂದು ನಿರ್ದಿಷ್ಟ ಸ್ಥಳದಲ್ಲಿ ತಮ್ಮ ಕಮಂಡಲುವನ್ನು ಇರಿಸಿ ನೀರಿನ ಸೆಲೆಯನ್ನು ಸೃಷ್ಟಿಸಿದರು. ಆ ಪ್ರದೇಶಕ್ಕಿದ್ದ ನೀರಿನ ಅಭಾವವನ್ನು ನೀಗಿಸಿದರು. ಶ್ರೀವಾದಿರಾಜರು ತಮ್ಮ ಕಮಂಡಲುವನ್ನು ಇರಿಸಿ ನೀರನ್ನು ಸೃಷ್ಟಿಸಿದ್ದರಿಂದ ಆ ನೀರಿನ ಕುಂಡ 'ಕಮಂಡಲು ತೀರ್ಥ'ಎಂದೇ ಪ್ರಸಿದ್ಧಿಯಾಯಿತು.
ಕಾಲಕ್ರಮೇಣ ಆ ಊರಿನ ಹೆಸರೇ' ಕೆಮುಂಡೇಲು' ಎಂದಾಯಿತು. ಇವತ್ತಿಗೂ ಆ ಕುಂಡದಲ್ಲಿ ಕಡು ಬೇಸಿಗೆಯ ಸಮಯದಲ್ಲೂ ನೀರು ಬತ್ತುವುದಿಲ್ಲ. ಅಂದು ವಾದಿರಾಜರು ಸೃಷ್ಟಿಸಿದ ನೀರು ಇವತ್ತಿಗೂ ಜೀವಂತವಾಗಿದೆ.
ಇವತ್ತಿಗೂ ಈ ಪರಿಸರಕ್ಕೆ ಸೂತಕದವರು, ರಜಸ್ವಲೆಯರು ಪ್ರವೇಶಿಸುವಂತಿಲ್ಲ. ಪ್ರವೇಶಿಸಿದವರು ಅನರ್ಥಗಳನ್ನು ಅನುಭವಿಸಿದ್ದಾರೆ. ಅಲ್ಲೇ ಸಮೀಪದಲ್ಲಿ 'ಜನ್ನಿ' ಎಂಬ ಮನೆತನದವರಿಗೆ ಲಕ್ಷ್ಮೀ ನಾರಾಯಣ ದೇವರ ಪ್ರತಿಮೆಯನ್ನೂ ಶ್ರೀ ವಾದಿರಾಜರು ಅನುಗ್ರಹಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications