The Kashmir Files ಸಿನಿಮಾ ನೋಡಿದ ಪೇಜಾವರ ಶ್ರೀ
ಉಡುಪಿ, ಮಾರ್ಚ್ 21; ದೇಶದಲ್ಲಿ ಸಂಚಲನ ಮೂಡಿಸಿರುವ 'ಕಾಶ್ಮೀರಿ ಫೈಲ್ಸ್' ಚಿತ್ರಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸಿನಿಮಾ ಕೇವಲ ಸಾಮಾನ್ಯ ಪ್ರೇಕ್ಷಕರನ್ನು ಮಾತ್ರವಲ್ಲ ಗಣ್ಯರು ಮತ್ತು ಸಂತರನ್ನು ಕೂಡಾ ಆಕರ್ಷಿಸಿದೆ.
ಸಿನಿಮಾ ಥಿಯೇಟರ್ಗೆ ಯಾವತ್ತೂ ಕಾಲಿರಿಸಿದ ಮಠಾಧೀಶರನ್ನು ಕೂಡ ಈ ಸಿನಿಮಾ ಥಿಯೇಟರ್ನತ್ತ ಸೆಳೆಯುತ್ತಿದೆ. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಕಾಣಿಯೂರು ಮಠದ ವಿದ್ಯಾವಲ್ಲಭ ಶ್ರೀಗಳು 'ಕಾಶ್ಮೀರ ಫೈಲ್ಸ್' ಸಿನಿಮಾ ವೀಕ್ಷಿಸಿದರು.
ಸಿನಿಮಾ ವೀಕ್ಷಣೆ ಬಳಿಕ ಪ್ರತಿಕ್ರಿಯೆ ನೀಡಿದ ಪೇಜಾವರ ಶ್ರೀಗಳು, "ಚಿತ್ರವನ್ನು ನೋಡಿ ಬಂದಿದ್ದೇವೆ. ಇತಿಹಾಸದ ಪುಟದಲ್ಲಿ ಮೆರೆಯಾದ ಸತ್ಯವನ್ನು ಈ ಚಿತ್ರ ಸ್ಫುಟವಾಗಿ ಕಣ್ಣ ಮುಂದೆ ತೆರೆದಿಟ್ಟಿದೆ. ಈ ಚಲನಚಿತ್ರ ಸತ್ಯವನ್ನು ಎತ್ತಿ ಹಿಡಿದಿದೆ" ಎಂದರು.

"ನಮ್ಮ ಸಮಾಜ ನಮ್ಮ ಭಾರತೀಯತೆಯನ್ನು, ನೆಲದ ಸನಾತನ ಸಂಸ್ಕೃತಿಯನ್ನು ಹಿಂದೂ ಸಂಸ್ಕೃತಿಯನ್ನು ರಕ್ಷಣೆ ಮಾಡಬೇಕಾದರೆ, ನಾಳೆಯ ದಿನವೂ ನಾವು ಉತ್ತಮ ದಿನಗಳನ್ನು ಕಾಣಬೇಕು ಅಂತಾ ಇದ್ದರೆ ನಮ್ಮ ತನವನ್ನು ಉಳಿಸಬೇಕೆಂದು ಎಚ್ಚರಿಕೆಯನ್ನು ನೀಡಿದೆ" ಎಂದು ಹೇಳಿದರು.
"ಬಾಕಿ ಆಕ್ರಮಣ ಒಂದೆಡೆಯಾದರೆ, ನಮ್ಮ ಮಕ್ಕಳಿಗೆ ತಪ್ಪು ತಿಳುವಳಿಕೆಯ ಮೂಲಕ ನಮ್ಮ ಮಕ್ಕಳನ್ನೇ ನಮ್ಮ ಸಮಾಜದ ವಿರುದ್ದ ಎತ್ತಿ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ನಮ್ಮ ಮುಂದಿನ ಯುವ ಜನಾಂಗವನ್ನು ಯಾವ ದಾರಿಯಲ್ಲಿ ಕರೆದುಕೊಂಡು ಹೋಗಬೇಕು ಯಾವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು? ಎಂಬುವುದನ್ನು ಈ ಚಲನಚಿತ್ರದಲ್ಲಿ ಕಟ್ಟಿಕೊಡಲಾಗಿದೆ" ಎಂದರು.
"ಈ ಚಲನಚಿತ್ರದಲ್ಲಿ ಕೇವಲ ಕಥೆಯನ್ನು ನೋಡದೆ ವಸ್ತು ಸ್ಥಿತಿಯನ್ನು ಗಮನಿಸಬೇಕು. ಇದೊಂದು ದೊಡ್ಡ ಎಚ್ಚರಿಕೆಯನ್ನು ನೀಡಿದೆ. ಸಮಾಜವನ್ನು ಸದಾ ಕಾಲ ಜಾಗೃತವಾಗುವಂತೆ ಈ ಚಲನ ಚಿತ್ರ ಎಚ್ಚರಿಸಿದೆ. ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ತಿಳಿಯಾಗಬೇಕಾಗಿದೆ. ಕಾಶ್ಮೀರ ಪಂಡಿತರು ತಮ್ಮ ತಮ್ಮ ಸ್ವಸ್ಥಾನಗಳಿಗೆ ಹಿಂದುರುಗಬೇಕಾಗಿದೆ. ಕಾಶ್ಮೀರದಲ್ಲಿ ಮತ್ತೆ ಮರಳಿ ಆ ವೈಭವವನ್ನು ಕಾಣಬೇಕು. ಈ ಚಿತ್ರ ಎಲ್ಲಾ ಭಾಷೆಗಳಲ್ಲಿ ಬಂದರೆ ಇನ್ನೂ ಉತ್ತಮವಾಗುತ್ತದೆ. ಆಕಾಲದ ಪತ್ರಿಕೆಗಳೂ ಇನ್ನು ಇವೆ. ಆ ಪತ್ರಿಕೆಗಳು ಈಗ ನಿಜ ನುಡಿದರೆ ಇನ್ನೂ ಸತ್ಯದ ಅನಾವರಣ ಆಗುತ್ತದೆ" ಎಂದು ಶ್ರೀಗಳು ತಿಳಿಸಿದರು.
"ಸಿನಿಮಾ ನೋಡಿ ತುಂಬಾ ದುಃಖವಾಗಿದೆ. ಔರಂಗಜೇಬ್, ಬಾಬರ್, ಘಜ್ನಿ, ಗೋರಿಯ ಕಾಲದಲ್ಲಿ ಹಿಂಸೆ ಕೇಳಿದ್ದೆವು. ಆದರೆ ಕಾಶ್ಮೀರದಲ್ಲೂ ನಿನ್ನೆ ಮೊನ್ನೆ ದಿನದವರೆಗೆ ಈ ಭಯಾನಕ ಕ್ರೌರ್ಯ ನಡೆದಿರುವುದು ಅರಿಗಿಸಿಕೊಳ್ಳಲಾಗುತ್ತಿಲ್ಲ. ಈ ಸಿನಿಮಾದಲ್ಲಿ ಕೇವಲ ಕಥೆಯನ್ನು ನೋಡದೆ ವಸ್ತುಸ್ಥಿತಿಯನ್ನು ಗಮನಿಸಬೇಕು. ಈ ಸಿನಿಮಾ ಸಮಾಜಕ್ಕೆ ದೊಡ್ಡ ಎಚ್ಚರಿಕೆ ಕೊಟ್ಟಿದೆ. ಸಮಾಜ ಸದಾಕಾಲ ಜಾಗೃತರಾಗಿರುವಂತೆ ಎಚ್ಚರಿಸಿದೆ. ಈ ಸಿನಿಮಾ ಕಾಲ್ಪನಿಕ ಎನ್ನುವವರು ಆ ಕಾಲದ ಪತ್ರಿಕೆಗಳನ್ನು ಮತ್ತೆ ನೋಡಿದಲ್ಲಿ ಸತ್ಯ ಅರಿವಾಗುತ್ತದೆ. ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಈ ಪರಿಸ್ಥಿತಿ ಕರ್ನಾಟಕ, ಕೇರಳ ಹೀಗೆ ಪಕ್ಕದ ರಾಜ್ಯದ್ದೂ ಆಗಬಹುದು. ಹಾಗಾಗದಂತೆ ನಾವೆಲ್ಲ ಎಚ್ಚರ ವಹಿಸಬೇಕು" ಎಂದು ಪೇಜಾವರ ಶ್ರೀಗಳು ಕರೆ ನೀಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications