ಇನ್ನಾದರೂ ಮತದಾರರಿಗೆ, ಪಕ್ಷಕ್ಕೆ ನಿಷ್ಠರಾಗಿರಿ ಎಂದು ಕಿಡಿಕಾರಿದ ಉಗ್ರಪ್ಪ
ಉಡುಪಿ, ಫೆಬ್ರವರಿ 06: "ರಾಜ್ಯದ ಇತಿಹಾಸದಲ್ಲಿ ಇಂದು ಕರಾಳ ದಿನ. ಜನಾದೇಶಕ್ಕೆ ದ್ರೋಹ ಮಾಡಿದವರು, ಪ್ರಜಾಪ್ರಭುತ್ವಕ್ಕೆ ದ್ರೋಹ ಮಾಡಿದವರು ಸರ್ಕಾರ ರಚಿಸುತ್ತಿದ್ದಾರೆ. ಹತ್ತು ಶಾಸಕರನ್ನು ಮಂತ್ರಿ ಮಾಡಿದ್ದಾರೆ. ಇನ್ನಾದರೂ ಮತದಾರರಿಗೆ, ಪಕ್ಷಕ್ಕೆ ನಿಷ್ಠರಾಗಿರಿ" ಎಂದು ಇಂದು ನಡೆದ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ಉಗ್ರಪ್ಪ ಕಿಡಿಕಾರಿದ್ದಾರೆ.
"ಹಣದ ಹೊಳೆ ಹರಿಸಿ, ಅಧಿಕಾರ ದುರ್ಬಳಕೆ ಮಾಡಿ ನೀವು ಗೆದ್ದದ್ದು ಗೊತ್ತಿದೆ. ನಿಮ್ಮ ದಾಸ್ಯ ಪ್ರವೃತ್ತಿ ಪ್ರಮಾಣ ವಚನ ವೇಳೆ ಬಯಲಾಗಿದೆ. ಇನ್ನಾದರೂ ದಾಸ್ಯದ ಪ್ರವೃತ್ತಿ ಬಿಡಿ. ಪ್ರವಾಹ ಪೀಡಿತರ ಸಮಸ್ಯೆಗೆ ಸ್ಪಂದಿಸಿ. ರಾಜ್ಯದ ಹಿತ ಕಾಪಾಡಲು ಕೇಂದ್ರದಿಂದ ಅನುದಾನ ತನ್ನಿ" ಎಂದು ಹೇಳಿದ್ದಾರೆ.
ವಿಜಯೇಂದ್ರ ಮನೆಯೇ ಬಿಜೆಪಿ ಶಕ್ತಿ ಕೇಂದ್ರವಾಗಿದೆ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿ, "ವಂಶಪಾರಂಪರ್ಯ ಆಡಳಿತ ಅಂತ ನಮ್ಮ ಮೇಲೆ ಆರೋಪಿಸಿದಿರಿ. ಯಡಿಯೂರಪ್ಪ ಮೂಲಕ ಒಂದು ಕುಟುಂಬದವರ ಆಡಳಿತ ನಡೆಯುತ್ತಿದೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ, ಇದನ್ನು ಮರೆಯಬೇಡಿ" ಎಂದು ಎಚ್ಚರಿಸಿದರು.

ಸಂಸದ ಅನಂತ್ ಕುಮಾರ್ ವಿವಾದಾತ್ಮಕ ಹೇಳಿಕೆ ಕುರಿತು ಆಕ್ರೋಶಗೊಂಡು ಮಾತನಾಡಿದ ಅವರು, "ಅನಂತ ಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಅನಂತ್ ಕುಮಾರ್ ಹೆಗಡೆಗೆ ಚಿಕಿತ್ಸೆ ಕೊಡಿಸಿ, ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ. ಇದು ಕೇವಲ ಅನಂತ್ ಕುಮಾರ್ ಹೆಗಡೆ ಧ್ವನಿ ಅಲ್ಲ ಇದು ಬಿಜೆಪಿ ಮೈಂಡ್ ಸೆಟ್. ಬಿಜೆಪಿಯೇ ಎಚ್ಚರಿಸಿದರೂ ಹೆಗಡೆ ಕ್ಷಮೆ ಕೇಳಿಲ್ಲ. ದೇಶದ ಪರಂಪರೆ ಬಗ್ಗೆ, ಗಾಂಧೀಜಿ, ಅಂಬೇಡ್ಕರ್ ಬಗ್ಗೆ ಗೌರವ ಇಲ್ಲವೇ ನಿಮಗೆ? ಗೌರವ ಇದ್ದರೆ ಹೆಗಡೆ ಮೇಲೆ ಶಿಸ್ತುಕ್ರಮ ಕೈಗೊಳ್ಳಿ. ಅನಂತ್ ಕುಮಾರ್ ಹೆಗಡೆ ಸದಸ್ಯತ್ವ ರದ್ದು ಮಾಡಿ" ಎಂದು ಆಗ್ರಹಿಸಿದ್ದಾರೆ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications